ಅಂತಾರಾಷ್ಟ್ರೀಯ ಯೋಗ ದಿನವನ್ನು ದೇಶಾದ್ಯಂತ 150ಕ್ಕೂ ಹೆಚ್ಚು ಪ್ರಖ್ಯಾತ ಪ್ರವಾಸಿ ತಾಣಗಳಲ್ಲಿ ಆಚರಿಸಲಾಗುತ್ತಿದೆ. ಅದೇರೀತಿ ಯೋಗದ ಮಹತ್ವ ಪ್ರಚುರ ಪಡಿಸುವ ನಿಟ್ಟಿನಲ್ಲಿ ದೊಡ್ಡಬಳ್ಳಾಪುರ ವಿಶ್ವ ಯೋಗ ದಿನಾಚರಣಾ ಟ್ರಸ್ಟ್ ನೇತೃತ್ವದಲ್ಲಿ ಇಂದು(ಜೂ. 21ರಂದು) ಬೆಳಗ್ಗೆ 6ಕ್ಕೆ ನಗರದ ಭಗತ್ಸಿಂಗ್ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ವಿವಿಧ ಇಲಾಖೆಗಳು ಹಾಗೂ ಯೋಗ ಕೇಂದ್ರಗಳ ಸಹಯೋಗದಲ್ಲಿ ನಡೆದ ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಸುಮಾರು ಸಾವಿರಕ್ಕೂ ಜನ ಭಾಗವಹಿಸಿದ್ದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜು ಸೇರಿದಂತೆ ಮತ್ತಿತರ ಗಣ್ಯರು ಭಾಗವಹಿಸಿದ್ದರು.
45 ನಿಮಿಷಗಳ ಕಾಲ ಸಾಮೂಹಿಕವಾಗಿ ಯೋಗಾಭ್ಯಾಸ ನಡೆಸಲಾಯಿತು.
ಯೋಗ ಎಂದರೆ ಶರೀರ, ಮನಸ್ಸು, ಅತ್ಮಗಳ ಸಮಾಗಮ. ಯೋಗದಿಂದ ಸಂಸ್ಕೃತಿ, ನಡೆಯಿಂದ ಒಂದಾಗುವ ಸುಸಂದರ್ಭ ಇದಾಗಿದೆ. ಯೋಗ ದಿನಾಚರಣೆಯಲ್ಲಿ ಶಿಷ್ಟಾಚಾರದ ಯೋಗ, ಪ್ರಾಣಾಯಾಮವನ್ನು ಸಾಮೂಹಿಕವಾಗಿ ಮಾಡುವುದರ ಜೊತೆಗೆ ಶಿಸ್ತುಬದ್ಧ ಬದುಕು ಹೇಗೆ ನಡೆಸುವುದು ಎನ್ನುವುದನ್ನು ಕಲಿಯಬಹುದಾಗಿದೆ.
ಈ ವೇಳೆ ವಿಶ್ವ ಯೋಗಾ ದಿನಾಚರಣೆ ಟ್ರಸ್ಟ್ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ಟ್ರಸ್ಟ್ ಗೌರವ ಅಧ್ಯಕ್ಷ ಪುಷ್ಪಾಂಡಜ ದಿವ್ಯಜ್ಞಾನಾನಂದ ಸ್ವಾಮೀಜಿ, ಕಾರ್ಯದರ್ಶಿ ಬಿ.ಜಿ. ಅಮರನಾಥ್, ಉಪಾಧ್ಯಕ್ಷ ಟಿ.ಎನ್.ಪ್ರಭುದೇವ್, ಸಹ ಕಾರ್ಯದರ್ಶಿ ಎಂ.ಕೆ.ವತ್ಸಲಾ, ಖಜಾಂಚಿ ಪಿ.ಕೆ.ಶ್ರೀನಿವಾಸ್, ಸಂಚಾಲಕರಾದ ಡಿ.ವಿ.ಗಿರೀಶ್, ಡಿ.ಪಿ.ಗೋಪಾಲ್, ಸನಾತನಮೂರ್ತಿ ಸೇರಿದಂತೆ ಇತರರು ಇದ್ದರು.
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…