11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಭಗತ್‌ಸಿಂಗ್‌ ಕ್ರೀಡಾಂಗಣದಲ್ಲಿ ವಿಶ್ವ ಯೋಗ ದಿನ ಆಚರಣೆ: ಸಾವಿರಕ್ಕೂ ಹೆಚ್ಚು ಮಂದಿ ಭಾಗಿ

ಅಂತಾರಾಷ್ಟ್ರೀಯ ಯೋಗ ದಿನವನ್ನು ದೇಶಾದ್ಯಂತ 150ಕ್ಕೂ ಹೆಚ್ಚು ಪ್ರಖ್ಯಾತ ಪ್ರವಾಸಿ ತಾಣಗಳಲ್ಲಿ ಆಚರಿಸಲಾಗುತ್ತಿದೆ. ಅದೇರೀತಿ ಯೋಗದ ಮಹತ್ವ ಪ್ರಚುರ ಪಡಿಸುವ ನಿಟ್ಟಿನಲ್ಲಿ ದೊಡ್ಡಬಳ್ಳಾಪುರ ವಿಶ್ವ ಯೋಗ ದಿನಾಚರಣಾ ಟ್ರಸ್ಟ್ ನೇತೃತ್ವದಲ್ಲಿ ಇಂದು(ಜೂ. 21ರಂದು) ಬೆಳಗ್ಗೆ 6ಕ್ಕೆ ನಗರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.

ವಿವಿಧ ಇಲಾಖೆಗಳು ಹಾಗೂ ಯೋಗ ಕೇಂದ್ರಗಳ ಸಹಯೋಗದಲ್ಲಿ ನಡೆದ ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಸುಮಾರು ಸಾವಿರಕ್ಕೂ ಜನ ಭಾಗವಹಿಸಿದ್ದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜು ಸೇರಿದಂತೆ ಮತ್ತಿತರ ಗಣ್ಯರು ಭಾಗವಹಿಸಿದ್ದರು.

45 ನಿಮಿಷಗಳ ಕಾಲ ಸಾಮೂಹಿಕವಾಗಿ ಯೋಗಾಭ್ಯಾಸ ನಡೆಸಲಾಯಿತು.

ಯೋಗ ಎಂದರೆ ಶರೀರ, ಮನಸ್ಸು, ಅತ್ಮಗಳ ಸಮಾಗಮ. ಯೋಗದಿಂದ ಸಂಸ್ಕೃತಿ, ನಡೆಯಿಂದ ಒಂದಾಗುವ ಸುಸಂದರ್ಭ ಇದಾಗಿದೆ. ಯೋಗ ದಿನಾಚರಣೆಯಲ್ಲಿ ಶಿಷ್ಟಾಚಾರದ ಯೋಗ, ಪ್ರಾಣಾಯಾಮವನ್ನು ಸಾಮೂಹಿಕವಾಗಿ ಮಾಡುವುದರ ಜೊತೆಗೆ ಶಿಸ್ತುಬದ್ಧ ಬದುಕು ಹೇಗೆ ನಡೆಸುವುದು ಎನ್ನುವುದನ್ನು ಕಲಿಯಬಹುದಾಗಿದೆ.

ಈ ವೇಳೆ ವಿಶ್ವ ಯೋಗಾ ದಿನಾಚರಣೆ ಟ್ರಸ್ಟ್ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ಟ್ರಸ್ಟ್ ಗೌರವ ಅಧ್ಯಕ್ಷ ಪುಷ್ಪಾಂಡಜ ದಿವ್ಯಜ್ಞಾನಾನಂದ ಸ್ವಾಮೀಜಿ, ಕಾರ್ಯದರ್ಶಿ ಬಿ.ಜಿ. ಅಮರನಾಥ್, ಉಪಾಧ್ಯಕ್ಷ ಟಿ.ಎನ್.ಪ್ರಭುದೇವ್, ಸಹ ಕಾರ್ಯದರ್ಶಿ ಎಂ.ಕೆ.ವತ್ಸಲಾ, ಖಜಾಂಚಿ ಪಿ.ಕೆ.ಶ್ರೀನಿವಾಸ್, ಸಂಚಾಲಕರಾದ ಡಿ.ವಿ.ಗಿರೀಶ್, ಡಿ.ಪಿ.ಗೋಪಾಲ್, ಸನಾತನಮೂರ್ತಿ ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

ಪ್ರೊ. ಬಿ ಕೃಷ್ಣಪ್ಪ ಕರ್ನಾಟಕದ ಪ್ರಮುಖ ದಲಿತ ಚಳವಳಿಯ ಧೀಮಂತ ನಾಯಕ- ದಸಂಸ ಜಿಲ್ಲಾ ಸಂಚಾಲಕ ರಾಮಮೂರ್ತಿ(ರಾಮು)

ಸಮಾಜದಲ್ಲಿ ದಲಿತ ಸಮುದಾಯಗಳು ಎದುರಿಸುತ್ತಿದ್ದ ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಿದ ಪ್ರೊ. ಬಿ ಕೃಷ್ಣಪ್ಪ ಅವರು ಎಲ್ಲರಿಗೂ ಮಾದರಿ. ಅವರ…

6 hours ago

ಜೆಡಿಎಸ್ ಬಣ ಗುದ್ದಾಟದಲ್ಲಿ ಕಾರ್ಯಕರ್ತರಿಗೆ ಸಿಕ್ಕ ‘ಸ್ಮೈಲ್ ಕ್ಯಾಪ್ಟನ್ ಆನಂದ್’

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 40 ವರ್ಷಗಳಿಂದ ರಾಜಕಾರಣ ಮಾಡುತ್ತಾ, ಮನೆ ಮಾತಾಗಿರುವ ಹುಸ್ಕೂರು ಟಿ. ಆನಂದ್ ಜೆಡಿಎಸ್ ಪಕ್ಷದಲ್ಲಿ ರಾಜ್ಯ ಪ್ರಧಾನ…

15 hours ago

ವೇಶ್ಯಾವಾಟಿಕೆ ಜಗತ್ತಿನ ಹಳೆಯದಾದ ಒಂದು ಕ್ರಿಯೆ…?

ವೇಶ್ಯಾವಾಟಿಕೆ...... ಒಂದು ವೃತ್ತಿಯೇ, ಜೀವನ ನಿರ್ವಹಣೆಯ ಒಂದು ಮಾರ್ಗವೇ, ಒಂದು ಉದ್ಯೋಗವೇ, ಸಹಜ ಪ್ರಾಕೃತಿಕ ವಿಧಾನವೇ, ಹೆಣ್ಣಿನ ಶೋಷಣೆಯೇ, ಗಂಡಿನ…

15 hours ago

ಮಳೆಗಾಲ ಆರಂಭ: ರಸ್ತೆಗುಂಡಿಗಳ ದರ್ಬಾರ್: ಟೋಲ್ ತಪ್ಪಿಸಲು ಹಳ್ಳಿ ರಸ್ತೆಗಳ ಬಳಕೆ: ಜನರ ಜೀವದ ಜೊತೆ ಚೆಲ್ಲಾಟ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

ದೊಡ್ಡಬಳ್ಳಾಪುರ: ಮಳೆಗಾಲ ಆರಂಭವಾಗುತ್ತಿದ್ದಂತೆ ದೊಡ್ಡಬಳ್ಳಾಪುರ ನಗರ ಹಾಗೂ ಗ್ರಾಮೀಣ ಭಾಗಗಳ ರಸ್ತೆಗುಂಡಿಗಳ ಸಮಸ್ಯೆ ಮತ್ತೆ ತಲೆದೋರಿದ್ದು, ವಾಹನ ಸವಾರರು ಜೀವ…

16 hours ago

ಬೈಕ್ – ಕಾರಿನ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ರಾತ್ರಿ ದೊಡ್ಡಬಳ್ಳಾಪುರ…

1 day ago

ಕೃಷಿ ಚಟುವಟಿಕೆಯಲ್ಲಿ ರೈತರು ಡಿಎಪಿ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆಗೆ ಕೃಷಿ ಇಲಾಖೆ ಸಲಹೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆ ಮಾಡಲು ಕೃಷಿ ಇಲಾಖೆ…

1 day ago