11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಇಂದು(ಶುಕ್ರವಾರ) ಹೈದರಾಬಾದ್ನಲ್ಲಿ ಪ್ರಾರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಮಾಜಿ ಚಾಂಪಿಯನ್ ಬೆಂಗಳೂರು ಬುಲ್ಸ್ ಹಾಗೂ ತೆಲುಗು ಟೈಟಾನ್ಸ್ ತಂಡಗಳ ನಡುವೆ ಕಾದಾಟವಾಗಲಿದೆ. ದಿನದ 2ನೇ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ತಂಡ ಯು ಮುಂಬಾ ವಿರುದ್ಧ ಸೆಣಸಾಡಲಿದೆ.
ಈ ಬಾರಿ ಟೂರ್ನಿಗೆ ಒಟ್ಟು 3 ನಗರಗಳು ಆತಿಥ್ಯ ವಹಿಸಲಿವೆ. ಮೊದಲ ಚರಣದ ಪಂದ್ಯಗಳು ಹೈದರಾಬಾದ್ನ ಗಚ್ಚಿಬೌಲಿ ಕ್ರೀಡಾಂಗಣದಲ್ಲಿ ಆಯೋಜನೆಗೊಳ್ಳಲಿವೆ. ಲೀಗ್ ಹಂತದ ಪಂದ್ಯಗಳು ಡಿ.24ರ ವರೆಗೂ ನಡೆಯಲಿದ್ದು, ಒಟ್ಟು 132 ಪಂದ್ಯಗಳು ನಡೆಯಲಿವೆ. ಟೂರ್ನಿಯ ಪ್ಲೇ-ಆಫ್ ಪಂದ್ಯಗಳ ವೇಳಾಪಟ್ಟಿ ಇನ್ನಷ್ಟೇ ಪ್ರಕಟಗೊಳ್ಳಬೇಕಿದೆ.
ಟೂರ್ನಿಯಲ್ಲಿ ಒಟ್ಟು 12 ತಂಡಗಳು ಪಾಲ್ಗೊಳ್ಳಲಿದ್ದು, ಲೀಗ್ ಹಂತದಲ್ಲಿ ತಲಾ 2 ಬಾರಿ ಪರಸ್ಪರ ಸೆಣಸಾಡಲಿವೆ. ಲೀಗ್ ಹಂತ ಮುಕ್ತಾಯದ ಬಳಿಕ ಅಗ್ರ-6 ತಂಡಗಳು ಪ್ಲೇ-ಆಫ್ ಪ್ರವೇಶಿಸಲಿವೆ. ಪ್ರತಿ ದಿನವೂ 2 ಪಂದ್ಯಗಳು ಆಯೋಜನೆಗೊಳ್ಳಲಿದ್ದು, ಮೊದಲ ಪಂದ್ಯ ರಾತ್ರಿ 8 ಗಂಟೆಗೆ, 2ನೇ ಪಂದ್ಯ ರಾತ್ರಿ 9 ಗಂಟೆಗೆ ಶುರುವಾಗಲಿದೆ
ಟೂರ್ನಿ ಈ ಬಾರಿ 3 ನಗರಗಳ ಕ್ಯಾರವಾನ್ ಮಾದರಿಯಲ್ಲಿ ಹೈದರಾಬಾದ್, ನೋಯ್ಡಾ ಹಾಗೂ ಪುಣೆಯಲ್ಲಿ ನಡೆಯಲಿವೆ. ಅ.18ರಿಂದ ನ.9ರ ವರೆಗೆ ಹೈದರಾಬಾದ್ನಲ್ಲಿ ಪಂದ್ಯಗಳು ನಡೆಯಲಿವೆ. ಬಳಿಕ ನ.10ರಿಂದ ಡಿ.1ರ ವರೆಗೆ ನೋಯ್ಡಾ ಹಾಗೂ ಡಿ.3ರಿಂದ 24ರ ವರೆಗೆ ಪುಣೆಯಲ್ಲಿ ಆಯೋಜನೆಗೊಳ್ಳಲಿವೆ. ಈ ಬಾರಿ ಬೆಂಗಳೂರಿನಲ್ಲಿ ಪಂದ್ಯಗಳು ನಡೆಯುವುದಿಲ್ಲ.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…