Categories: ಕ್ರೀಡೆ

11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಟೂರ್ನಿ ಇಂದಿನಿಂದ ಆರಂಭ: ಉದ್ಘಾಟನಾ ಪಂದ್ಯದಲ್ಲಿ ಕಾದಾಡಲಿರುವ ಬೆಂಗಳೂರು ಬುಲ್ಸ್ ಹಾಗೂ ತೆಲುಗು ಟೈಟಾನ್ಸ್

11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಇಂದು(ಶುಕ್ರವಾರ) ಹೈದರಾಬಾದ್‌ನಲ್ಲಿ ಪ್ರಾರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಮಾಜಿ ಚಾಂಪಿಯನ್‌ ಬೆಂಗಳೂರು ಬುಲ್ಸ್‌ ಹಾಗೂ ತೆಲುಗು ಟೈಟಾನ್ಸ್‌ ತಂಡಗಳ ನಡುವೆ ಕಾದಾಟವಾಗಲಿದೆ. ದಿನದ 2ನೇ ಪಂದ್ಯದಲ್ಲಿ ದಬಾಂಗ್‌ ಡೆಲ್ಲಿ ತಂಡ ಯು ಮುಂಬಾ ವಿರುದ್ಧ ಸೆಣಸಾಡಲಿದೆ.

ಈ ಬಾರಿ ಟೂರ್ನಿಗೆ ಒಟ್ಟು 3 ನಗರಗಳು ಆತಿಥ್ಯ ವಹಿಸಲಿವೆ. ಮೊದಲ ಚರಣದ ಪಂದ್ಯಗಳು ಹೈದರಾಬಾದ್‌ನ ಗಚ್ಚಿಬೌಲಿ ಕ್ರೀಡಾಂಗಣದಲ್ಲಿ ಆಯೋಜನೆಗೊಳ್ಳಲಿವೆ. ಲೀಗ್‌ ಹಂತದ ಪಂದ್ಯಗಳು ಡಿ.24ರ ವರೆಗೂ ನಡೆಯಲಿದ್ದು, ಒಟ್ಟು 132 ಪಂದ್ಯಗಳು ನಡೆಯಲಿವೆ. ಟೂರ್ನಿಯ ಪ್ಲೇ-ಆಫ್‌ ಪಂದ್ಯಗಳ ವೇಳಾಪಟ್ಟಿ ಇನ್ನಷ್ಟೇ ಪ್ರಕಟಗೊಳ್ಳಬೇಕಿದೆ.

ಟೂರ್ನಿಯಲ್ಲಿ ಒಟ್ಟು 12 ತಂಡಗಳು ಪಾಲ್ಗೊಳ್ಳಲಿದ್ದು, ಲೀಗ್‌ ಹಂತದಲ್ಲಿ ತಲಾ 2 ಬಾರಿ ಪರಸ್ಪರ ಸೆಣಸಾಡಲಿವೆ. ಲೀಗ್‌ ಹಂತ ಮುಕ್ತಾಯದ ಬಳಿಕ ಅಗ್ರ-6 ತಂಡಗಳು ಪ್ಲೇ-ಆಫ್‌ ಪ್ರವೇಶಿಸಲಿವೆ. ಪ್ರತಿ ದಿನವೂ 2 ಪಂದ್ಯಗಳು ಆಯೋಜನೆಗೊಳ್ಳಲಿದ್ದು, ಮೊದಲ ಪಂದ್ಯ ರಾತ್ರಿ 8 ಗಂಟೆಗೆ, 2ನೇ ಪಂದ್ಯ ರಾತ್ರಿ 9 ಗಂಟೆಗೆ ಶುರುವಾಗಲಿದೆ

ಟೂರ್ನಿ ಈ ಬಾರಿ 3 ನಗರಗಳ ಕ್ಯಾರವಾನ್‌ ಮಾದರಿಯಲ್ಲಿ ಹೈದರಾಬಾದ್‌, ನೋಯ್ಡಾ ಹಾಗೂ ಪುಣೆಯಲ್ಲಿ ನಡೆಯಲಿವೆ. ಅ.18ರಿಂದ ನ.9ರ ವರೆಗೆ ಹೈದರಾಬಾದ್‌ನಲ್ಲಿ ಪಂದ್ಯಗಳು ನಡೆಯಲಿವೆ. ಬಳಿಕ ನ.10ರಿಂದ ಡಿ.1ರ ವರೆಗೆ ನೋಯ್ಡಾ ಹಾಗೂ ಡಿ.3ರಿಂದ 24ರ ವರೆಗೆ ಪುಣೆಯಲ್ಲಿ ಆಯೋಜನೆಗೊಳ್ಳಲಿವೆ. ಈ ಬಾರಿ ಬೆಂಗಳೂರಿನಲ್ಲಿ ಪಂದ್ಯಗಳು ನಡೆಯುವುದಿಲ್ಲ.

Ramesh Babu

Journalist

Recent Posts

ಮಾ.6ರಂದು ಗುತ್ತಿಗೆದಾರರ ಸಂಘದಿಂದ ಪ್ರತಿಭಟನೆ: ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್‌ಗಾಗಿ ಆಗ್ರಹ

ಕಳೆದ ಎರಡ್ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್‌ಗಾಗಿ ಆಗ್ರಹಿಸಿ ಮಾ.6ರಂದು ಬೆಂಗಳೂರಿನ…

38 minutes ago

ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮ: ವಿಜೇತರಿಗೆ ಬಹುಮಾನ ವಿತರಣೆ

ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…

4 hours ago

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

16 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

16 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

17 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

19 hours ago