11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಇಂದು(ಶುಕ್ರವಾರ) ಹೈದರಾಬಾದ್ನಲ್ಲಿ ಪ್ರಾರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಮಾಜಿ ಚಾಂಪಿಯನ್ ಬೆಂಗಳೂರು ಬುಲ್ಸ್ ಹಾಗೂ ತೆಲುಗು ಟೈಟಾನ್ಸ್ ತಂಡಗಳ ನಡುವೆ ಕಾದಾಟವಾಗಲಿದೆ. ದಿನದ 2ನೇ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ತಂಡ ಯು ಮುಂಬಾ ವಿರುದ್ಧ ಸೆಣಸಾಡಲಿದೆ.
ಈ ಬಾರಿ ಟೂರ್ನಿಗೆ ಒಟ್ಟು 3 ನಗರಗಳು ಆತಿಥ್ಯ ವಹಿಸಲಿವೆ. ಮೊದಲ ಚರಣದ ಪಂದ್ಯಗಳು ಹೈದರಾಬಾದ್ನ ಗಚ್ಚಿಬೌಲಿ ಕ್ರೀಡಾಂಗಣದಲ್ಲಿ ಆಯೋಜನೆಗೊಳ್ಳಲಿವೆ. ಲೀಗ್ ಹಂತದ ಪಂದ್ಯಗಳು ಡಿ.24ರ ವರೆಗೂ ನಡೆಯಲಿದ್ದು, ಒಟ್ಟು 132 ಪಂದ್ಯಗಳು ನಡೆಯಲಿವೆ. ಟೂರ್ನಿಯ ಪ್ಲೇ-ಆಫ್ ಪಂದ್ಯಗಳ ವೇಳಾಪಟ್ಟಿ ಇನ್ನಷ್ಟೇ ಪ್ರಕಟಗೊಳ್ಳಬೇಕಿದೆ.
ಟೂರ್ನಿಯಲ್ಲಿ ಒಟ್ಟು 12 ತಂಡಗಳು ಪಾಲ್ಗೊಳ್ಳಲಿದ್ದು, ಲೀಗ್ ಹಂತದಲ್ಲಿ ತಲಾ 2 ಬಾರಿ ಪರಸ್ಪರ ಸೆಣಸಾಡಲಿವೆ. ಲೀಗ್ ಹಂತ ಮುಕ್ತಾಯದ ಬಳಿಕ ಅಗ್ರ-6 ತಂಡಗಳು ಪ್ಲೇ-ಆಫ್ ಪ್ರವೇಶಿಸಲಿವೆ. ಪ್ರತಿ ದಿನವೂ 2 ಪಂದ್ಯಗಳು ಆಯೋಜನೆಗೊಳ್ಳಲಿದ್ದು, ಮೊದಲ ಪಂದ್ಯ ರಾತ್ರಿ 8 ಗಂಟೆಗೆ, 2ನೇ ಪಂದ್ಯ ರಾತ್ರಿ 9 ಗಂಟೆಗೆ ಶುರುವಾಗಲಿದೆ
ಟೂರ್ನಿ ಈ ಬಾರಿ 3 ನಗರಗಳ ಕ್ಯಾರವಾನ್ ಮಾದರಿಯಲ್ಲಿ ಹೈದರಾಬಾದ್, ನೋಯ್ಡಾ ಹಾಗೂ ಪುಣೆಯಲ್ಲಿ ನಡೆಯಲಿವೆ. ಅ.18ರಿಂದ ನ.9ರ ವರೆಗೆ ಹೈದರಾಬಾದ್ನಲ್ಲಿ ಪಂದ್ಯಗಳು ನಡೆಯಲಿವೆ. ಬಳಿಕ ನ.10ರಿಂದ ಡಿ.1ರ ವರೆಗೆ ನೋಯ್ಡಾ ಹಾಗೂ ಡಿ.3ರಿಂದ 24ರ ವರೆಗೆ ಪುಣೆಯಲ್ಲಿ ಆಯೋಜನೆಗೊಳ್ಳಲಿವೆ. ಈ ಬಾರಿ ಬೆಂಗಳೂರಿನಲ್ಲಿ ಪಂದ್ಯಗಳು ನಡೆಯುವುದಿಲ್ಲ.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…