11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಇಂದು(ಶುಕ್ರವಾರ) ಹೈದರಾಬಾದ್ನಲ್ಲಿ ಪ್ರಾರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಮಾಜಿ ಚಾಂಪಿಯನ್ ಬೆಂಗಳೂರು ಬುಲ್ಸ್ ಹಾಗೂ ತೆಲುಗು ಟೈಟಾನ್ಸ್ ತಂಡಗಳ ನಡುವೆ ಕಾದಾಟವಾಗಲಿದೆ. ದಿನದ 2ನೇ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ತಂಡ ಯು ಮುಂಬಾ ವಿರುದ್ಧ ಸೆಣಸಾಡಲಿದೆ.
ಈ ಬಾರಿ ಟೂರ್ನಿಗೆ ಒಟ್ಟು 3 ನಗರಗಳು ಆತಿಥ್ಯ ವಹಿಸಲಿವೆ. ಮೊದಲ ಚರಣದ ಪಂದ್ಯಗಳು ಹೈದರಾಬಾದ್ನ ಗಚ್ಚಿಬೌಲಿ ಕ್ರೀಡಾಂಗಣದಲ್ಲಿ ಆಯೋಜನೆಗೊಳ್ಳಲಿವೆ. ಲೀಗ್ ಹಂತದ ಪಂದ್ಯಗಳು ಡಿ.24ರ ವರೆಗೂ ನಡೆಯಲಿದ್ದು, ಒಟ್ಟು 132 ಪಂದ್ಯಗಳು ನಡೆಯಲಿವೆ. ಟೂರ್ನಿಯ ಪ್ಲೇ-ಆಫ್ ಪಂದ್ಯಗಳ ವೇಳಾಪಟ್ಟಿ ಇನ್ನಷ್ಟೇ ಪ್ರಕಟಗೊಳ್ಳಬೇಕಿದೆ.
ಟೂರ್ನಿಯಲ್ಲಿ ಒಟ್ಟು 12 ತಂಡಗಳು ಪಾಲ್ಗೊಳ್ಳಲಿದ್ದು, ಲೀಗ್ ಹಂತದಲ್ಲಿ ತಲಾ 2 ಬಾರಿ ಪರಸ್ಪರ ಸೆಣಸಾಡಲಿವೆ. ಲೀಗ್ ಹಂತ ಮುಕ್ತಾಯದ ಬಳಿಕ ಅಗ್ರ-6 ತಂಡಗಳು ಪ್ಲೇ-ಆಫ್ ಪ್ರವೇಶಿಸಲಿವೆ. ಪ್ರತಿ ದಿನವೂ 2 ಪಂದ್ಯಗಳು ಆಯೋಜನೆಗೊಳ್ಳಲಿದ್ದು, ಮೊದಲ ಪಂದ್ಯ ರಾತ್ರಿ 8 ಗಂಟೆಗೆ, 2ನೇ ಪಂದ್ಯ ರಾತ್ರಿ 9 ಗಂಟೆಗೆ ಶುರುವಾಗಲಿದೆ
ಟೂರ್ನಿ ಈ ಬಾರಿ 3 ನಗರಗಳ ಕ್ಯಾರವಾನ್ ಮಾದರಿಯಲ್ಲಿ ಹೈದರಾಬಾದ್, ನೋಯ್ಡಾ ಹಾಗೂ ಪುಣೆಯಲ್ಲಿ ನಡೆಯಲಿವೆ. ಅ.18ರಿಂದ ನ.9ರ ವರೆಗೆ ಹೈದರಾಬಾದ್ನಲ್ಲಿ ಪಂದ್ಯಗಳು ನಡೆಯಲಿವೆ. ಬಳಿಕ ನ.10ರಿಂದ ಡಿ.1ರ ವರೆಗೆ ನೋಯ್ಡಾ ಹಾಗೂ ಡಿ.3ರಿಂದ 24ರ ವರೆಗೆ ಪುಣೆಯಲ್ಲಿ ಆಯೋಜನೆಗೊಳ್ಳಲಿವೆ. ಈ ಬಾರಿ ಬೆಂಗಳೂರಿನಲ್ಲಿ ಪಂದ್ಯಗಳು ನಡೆಯುವುದಿಲ್ಲ.
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…