Categories: ಕ್ರೀಡೆ

11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಟೂರ್ನಿ ಇಂದಿನಿಂದ ಆರಂಭ: ಉದ್ಘಾಟನಾ ಪಂದ್ಯದಲ್ಲಿ ಕಾದಾಡಲಿರುವ ಬೆಂಗಳೂರು ಬುಲ್ಸ್ ಹಾಗೂ ತೆಲುಗು ಟೈಟಾನ್ಸ್

11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಇಂದು(ಶುಕ್ರವಾರ) ಹೈದರಾಬಾದ್‌ನಲ್ಲಿ ಪ್ರಾರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಮಾಜಿ ಚಾಂಪಿಯನ್‌ ಬೆಂಗಳೂರು ಬುಲ್ಸ್‌ ಹಾಗೂ ತೆಲುಗು ಟೈಟಾನ್ಸ್‌ ತಂಡಗಳ ನಡುವೆ ಕಾದಾಟವಾಗಲಿದೆ. ದಿನದ 2ನೇ ಪಂದ್ಯದಲ್ಲಿ ದಬಾಂಗ್‌ ಡೆಲ್ಲಿ ತಂಡ ಯು ಮುಂಬಾ ವಿರುದ್ಧ ಸೆಣಸಾಡಲಿದೆ.

ಈ ಬಾರಿ ಟೂರ್ನಿಗೆ ಒಟ್ಟು 3 ನಗರಗಳು ಆತಿಥ್ಯ ವಹಿಸಲಿವೆ. ಮೊದಲ ಚರಣದ ಪಂದ್ಯಗಳು ಹೈದರಾಬಾದ್‌ನ ಗಚ್ಚಿಬೌಲಿ ಕ್ರೀಡಾಂಗಣದಲ್ಲಿ ಆಯೋಜನೆಗೊಳ್ಳಲಿವೆ. ಲೀಗ್‌ ಹಂತದ ಪಂದ್ಯಗಳು ಡಿ.24ರ ವರೆಗೂ ನಡೆಯಲಿದ್ದು, ಒಟ್ಟು 132 ಪಂದ್ಯಗಳು ನಡೆಯಲಿವೆ. ಟೂರ್ನಿಯ ಪ್ಲೇ-ಆಫ್‌ ಪಂದ್ಯಗಳ ವೇಳಾಪಟ್ಟಿ ಇನ್ನಷ್ಟೇ ಪ್ರಕಟಗೊಳ್ಳಬೇಕಿದೆ.

ಟೂರ್ನಿಯಲ್ಲಿ ಒಟ್ಟು 12 ತಂಡಗಳು ಪಾಲ್ಗೊಳ್ಳಲಿದ್ದು, ಲೀಗ್‌ ಹಂತದಲ್ಲಿ ತಲಾ 2 ಬಾರಿ ಪರಸ್ಪರ ಸೆಣಸಾಡಲಿವೆ. ಲೀಗ್‌ ಹಂತ ಮುಕ್ತಾಯದ ಬಳಿಕ ಅಗ್ರ-6 ತಂಡಗಳು ಪ್ಲೇ-ಆಫ್‌ ಪ್ರವೇಶಿಸಲಿವೆ. ಪ್ರತಿ ದಿನವೂ 2 ಪಂದ್ಯಗಳು ಆಯೋಜನೆಗೊಳ್ಳಲಿದ್ದು, ಮೊದಲ ಪಂದ್ಯ ರಾತ್ರಿ 8 ಗಂಟೆಗೆ, 2ನೇ ಪಂದ್ಯ ರಾತ್ರಿ 9 ಗಂಟೆಗೆ ಶುರುವಾಗಲಿದೆ

ಟೂರ್ನಿ ಈ ಬಾರಿ 3 ನಗರಗಳ ಕ್ಯಾರವಾನ್‌ ಮಾದರಿಯಲ್ಲಿ ಹೈದರಾಬಾದ್‌, ನೋಯ್ಡಾ ಹಾಗೂ ಪುಣೆಯಲ್ಲಿ ನಡೆಯಲಿವೆ. ಅ.18ರಿಂದ ನ.9ರ ವರೆಗೆ ಹೈದರಾಬಾದ್‌ನಲ್ಲಿ ಪಂದ್ಯಗಳು ನಡೆಯಲಿವೆ. ಬಳಿಕ ನ.10ರಿಂದ ಡಿ.1ರ ವರೆಗೆ ನೋಯ್ಡಾ ಹಾಗೂ ಡಿ.3ರಿಂದ 24ರ ವರೆಗೆ ಪುಣೆಯಲ್ಲಿ ಆಯೋಜನೆಗೊಳ್ಳಲಿವೆ. ಈ ಬಾರಿ ಬೆಂಗಳೂರಿನಲ್ಲಿ ಪಂದ್ಯಗಳು ನಡೆಯುವುದಿಲ್ಲ.

Ramesh Babu

Journalist

Recent Posts

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

2 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

23 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

1 day ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

1 day ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

1 day ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

2 days ago