11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಇಂದು(ಶುಕ್ರವಾರ) ಹೈದರಾಬಾದ್ನಲ್ಲಿ ಪ್ರಾರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಮಾಜಿ ಚಾಂಪಿಯನ್ ಬೆಂಗಳೂರು ಬುಲ್ಸ್ ಹಾಗೂ ತೆಲುಗು ಟೈಟಾನ್ಸ್ ತಂಡಗಳ ನಡುವೆ ಕಾದಾಟವಾಗಲಿದೆ. ದಿನದ 2ನೇ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ತಂಡ ಯು ಮುಂಬಾ ವಿರುದ್ಧ ಸೆಣಸಾಡಲಿದೆ.
ಈ ಬಾರಿ ಟೂರ್ನಿಗೆ ಒಟ್ಟು 3 ನಗರಗಳು ಆತಿಥ್ಯ ವಹಿಸಲಿವೆ. ಮೊದಲ ಚರಣದ ಪಂದ್ಯಗಳು ಹೈದರಾಬಾದ್ನ ಗಚ್ಚಿಬೌಲಿ ಕ್ರೀಡಾಂಗಣದಲ್ಲಿ ಆಯೋಜನೆಗೊಳ್ಳಲಿವೆ. ಲೀಗ್ ಹಂತದ ಪಂದ್ಯಗಳು ಡಿ.24ರ ವರೆಗೂ ನಡೆಯಲಿದ್ದು, ಒಟ್ಟು 132 ಪಂದ್ಯಗಳು ನಡೆಯಲಿವೆ. ಟೂರ್ನಿಯ ಪ್ಲೇ-ಆಫ್ ಪಂದ್ಯಗಳ ವೇಳಾಪಟ್ಟಿ ಇನ್ನಷ್ಟೇ ಪ್ರಕಟಗೊಳ್ಳಬೇಕಿದೆ.
ಟೂರ್ನಿಯಲ್ಲಿ ಒಟ್ಟು 12 ತಂಡಗಳು ಪಾಲ್ಗೊಳ್ಳಲಿದ್ದು, ಲೀಗ್ ಹಂತದಲ್ಲಿ ತಲಾ 2 ಬಾರಿ ಪರಸ್ಪರ ಸೆಣಸಾಡಲಿವೆ. ಲೀಗ್ ಹಂತ ಮುಕ್ತಾಯದ ಬಳಿಕ ಅಗ್ರ-6 ತಂಡಗಳು ಪ್ಲೇ-ಆಫ್ ಪ್ರವೇಶಿಸಲಿವೆ. ಪ್ರತಿ ದಿನವೂ 2 ಪಂದ್ಯಗಳು ಆಯೋಜನೆಗೊಳ್ಳಲಿದ್ದು, ಮೊದಲ ಪಂದ್ಯ ರಾತ್ರಿ 8 ಗಂಟೆಗೆ, 2ನೇ ಪಂದ್ಯ ರಾತ್ರಿ 9 ಗಂಟೆಗೆ ಶುರುವಾಗಲಿದೆ
ಟೂರ್ನಿ ಈ ಬಾರಿ 3 ನಗರಗಳ ಕ್ಯಾರವಾನ್ ಮಾದರಿಯಲ್ಲಿ ಹೈದರಾಬಾದ್, ನೋಯ್ಡಾ ಹಾಗೂ ಪುಣೆಯಲ್ಲಿ ನಡೆಯಲಿವೆ. ಅ.18ರಿಂದ ನ.9ರ ವರೆಗೆ ಹೈದರಾಬಾದ್ನಲ್ಲಿ ಪಂದ್ಯಗಳು ನಡೆಯಲಿವೆ. ಬಳಿಕ ನ.10ರಿಂದ ಡಿ.1ರ ವರೆಗೆ ನೋಯ್ಡಾ ಹಾಗೂ ಡಿ.3ರಿಂದ 24ರ ವರೆಗೆ ಪುಣೆಯಲ್ಲಿ ಆಯೋಜನೆಗೊಳ್ಳಲಿವೆ. ಈ ಬಾರಿ ಬೆಂಗಳೂರಿನಲ್ಲಿ ಪಂದ್ಯಗಳು ನಡೆಯುವುದಿಲ್ಲ.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…