ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ನನ್ನ ಸ್ಪರ್ಧೆ ಹೈಕಮಾಂಡ್ ತೀರ್ಮಾನ ಮಾಡುತ್ತೆ- ಕೆ.ಹೆಚ್.ಮುನಿಯಪ್ಪ: ಕ್ಷೇತ್ರದ ಜನತೆಗೆ ಧನ್ಯವಾದ

ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡುವ ವಿಚಾರ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು, ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಮಾಜಿ‌ ಸಂಸದ ಕೆ.ಹೆಚ್.ಮುನಿಯಪ್ಪ ಹೇಳಿದರು.

ಟಿಕೆಟ್ ಕೊಡೊದು ಬಿಡೊದು ಪಕ್ಷ ತೀರ್ಮಾನ ಮಾಡುತ್ತದೆ, ನಾವು ಪಕ್ಷ ಗೆಲುವಿಗೆ ಕೆಲಸ‌ ಮಾಡುತ್ತಿದ್ದೇವೆ ಟಿಕೆಟ್ ಗಾಗಿ ಅಲ್ಲ. ನಮ್ಮ ಗುರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರೋದು, ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿಯನ್ನಾಗಿ ಮಾಡೋದು ಎಂದು ತಿಳಿಸಿದರು.

ಕೋಲಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆದ್ದೆ ಗೆಲ್ಲುತ್ತಾರೆ. ನಾವೆಲ್ಲಾ ಒಟ್ಟಿಗೆ ಕೆಲಸ ಮಾಡಿ ಅವರನ್ನು ಜಯಶೀಲರನ್ನಾಗಿ ಮಾಡುತ್ತೇವೆ.ಅವರ ಸರಕಾರದಲ್ಲಿ ಅತ್ಯಂತ ಜನಪ್ರಿಯ ಯೋಜನೆಗಳನ್ನು ನೀಡಿದ್ದಾರೆ. ಅವರನ್ನು ಜನರು ಗೆಲ್ಲಿಸುತ್ತಾರೆ.ಯಾವುದೇ ಆತಂಕವಿಲ್ಲದೆ ಒಂದಾಗಿ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿ ಕಾಂಗ್ರೆಸ್ ಸರಕಾರವನ್ನು ಅಧಿಕಾರಕ್ಕೆ ತರುತ್ತೇವೆ ಎಂದರು.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಜನತೆ ನನ್ನ ಮೇಲೆ ಅಭಿಮಾನ ಇಟ್ಟಿರೋದಕ್ಕೆ ನಾನು ಚಿರರುಣಿ ಎಂದು ತಿಳಿಸಿದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 minutes ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

7 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

8 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

23 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago