ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ನನ್ನ ಸ್ಪರ್ಧೆ ಹೈಕಮಾಂಡ್ ತೀರ್ಮಾನ ಮಾಡುತ್ತೆ- ಕೆ.ಹೆಚ್.ಮುನಿಯಪ್ಪ: ಕ್ಷೇತ್ರದ ಜನತೆಗೆ ಧನ್ಯವಾದ

ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡುವ ವಿಚಾರ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು, ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಮಾಜಿ‌ ಸಂಸದ ಕೆ.ಹೆಚ್.ಮುನಿಯಪ್ಪ ಹೇಳಿದರು.

ಟಿಕೆಟ್ ಕೊಡೊದು ಬಿಡೊದು ಪಕ್ಷ ತೀರ್ಮಾನ ಮಾಡುತ್ತದೆ, ನಾವು ಪಕ್ಷ ಗೆಲುವಿಗೆ ಕೆಲಸ‌ ಮಾಡುತ್ತಿದ್ದೇವೆ ಟಿಕೆಟ್ ಗಾಗಿ ಅಲ್ಲ. ನಮ್ಮ ಗುರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರೋದು, ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿಯನ್ನಾಗಿ ಮಾಡೋದು ಎಂದು ತಿಳಿಸಿದರು.

ಕೋಲಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆದ್ದೆ ಗೆಲ್ಲುತ್ತಾರೆ. ನಾವೆಲ್ಲಾ ಒಟ್ಟಿಗೆ ಕೆಲಸ ಮಾಡಿ ಅವರನ್ನು ಜಯಶೀಲರನ್ನಾಗಿ ಮಾಡುತ್ತೇವೆ.ಅವರ ಸರಕಾರದಲ್ಲಿ ಅತ್ಯಂತ ಜನಪ್ರಿಯ ಯೋಜನೆಗಳನ್ನು ನೀಡಿದ್ದಾರೆ. ಅವರನ್ನು ಜನರು ಗೆಲ್ಲಿಸುತ್ತಾರೆ.ಯಾವುದೇ ಆತಂಕವಿಲ್ಲದೆ ಒಂದಾಗಿ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿ ಕಾಂಗ್ರೆಸ್ ಸರಕಾರವನ್ನು ಅಧಿಕಾರಕ್ಕೆ ತರುತ್ತೇವೆ ಎಂದರು.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಜನತೆ ನನ್ನ ಮೇಲೆ ಅಭಿಮಾನ ಇಟ್ಟಿರೋದಕ್ಕೆ ನಾನು ಚಿರರುಣಿ ಎಂದು ತಿಳಿಸಿದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

47 minutes ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

12 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

13 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

13 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

15 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

18 hours ago