12ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು ಪ್ರಕರಣ. ಈ ಕುರಿತಂತೆ ಪ್ರತಿಕ್ರಿಯಿಸಿದ ವೈಟ್ ಫೀಲ್ಡ್ ಡಿಸಿಪಿ ಗಿರೀಶ್,
ಕ್ಲಾಸಿಕ್ ಅಪಾರ್ಟ್ಮೆಂಟ್ ನಲ್ಲಿ ಘಟನೆ ನಡೆದಿದ್ದು, 14 ವರ್ಷದ ಹುಡುಗಿ ಜೆಸ್ಸಿಕಾ 12ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಆತ್ಮಹತ್ಯೆಗೆ ಕಾರಣ ಏನು ಅಂತಾ ಗೊತ್ತಾಗಿಲ್ಲ. ತಂದೆ ಸಾಪ್ಟ್ ವೇರ್ ಇಂಜಿನಿಯರ್. ತಾಯಿ ಖಾಸಗಿ ಶಾಲೆಯಲ್ಲಿ ಟೀಚರ್ ಆಗಿದ್ದಾರೆ. ಇಂದು ಬೆಳಗ್ಗೆ ಬಾಲಕಿ ಶಾಲೆಗೆ ಹೋಗಿ ಪುನಃ ವಾಪಸ್ ಬಂದಿದ್ದಾರೆ. ನಂತರ ಟೀಚರ್ ತಾಯಿಗೆ ಕರೆ ಮಾಡಿ ಮಗಳು ಶಾಲೆಗೆ ಬಂದಿಲ್ಲ ಅಂತಾ ಹೇಳಿದ್ದಾರೆ. ನಂತರ ಪೋಷಕರು ಪರಿಶೀಲನೆ ಮಾಡಿದಾಗ ವಿಚಾರ ಗೊತ್ತಾಗಿದೆ ಎಂದು ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಹೇಳಿದ್ದಾರೆ.
ಮನೆಯಲ್ಲಿ ಅಕ್ಕ, ಎಲ್ಲಾ ಕೆಲಸಕ್ಕೆ ಹೋಗಿದ್ದಾರೆ ಯಾರು ಇರಲಿಲ್ಲ. ಪ್ರಾಥಮಿಕವಾಗಿ ಬಾಲಕಿ ಶಾಲೆಗೆ ಹೋಗಿ ಕ್ಲಾಸ್ ಅಟೆಂಡ್ ಮಾಡದೆ ವಾಪಸ್ ಬರ್ತಾ ಇದ್ದಳು ಅಂತಾ ಗೊತ್ತಾಗಿದೆ. ಅದರೆ ಘಟನೆ ನಿಖರ ಕಾರಣ ಏನು ಅನ್ನೋದು ಇನ್ನೂ ಗೊತ್ತಾಗಿಲ್ಲ
ಈ ಬಗ್ಗೆ ಬೆಳ್ಳಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಹೇಳಿದ್ದಾರೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…