12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ: ಹಾನಿಗೊಳಗಾದ ರೈತರಿಗೆ ಪರಿಹಾರ ಒದಗಿಸುವುದು ಸರ್ಕಾರದ ಕರ್ತವ್ಯ- ಸಿಎಂ ಸಿದ್ದರಾಮಯ್ಯ

ಹೊಸ ವರ್ಷದ ಮೊದಲ ದಿನವಾದ ಇಂದು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದು ನಮ್ಮ ಪದ್ಧತಿ. ಹಿಂದೂ ಪದ್ಧತಿಯಲ್ಲಿ ಯುಗಾದಿ ಹೊಸ ವರ್ಷವಾಗಿದ್ದರೂ, ಇಂಗ್ಲೀಷ್ ಕ್ಯಾಲೆಂಡರ್ ನಂತೆ ಇಂದು ಪ್ರಾರಂಭವಾಗುವ ಹೊಸ ವರ್ಷವನ್ನು ವಿಶ್ವದಾದ್ಯಂತ ಸಂಭ್ರಮಾಚರಣೆಯಿಂದ ಸ್ವಾಗತಿಸಲಾಗುತ್ತದೆ. 2026ರ ವರ್ಷ ರಾಜ್ಯಕ್ಕೆ ಸಮೃದ್ಧಿಯನ್ನು ತರಲಿ ಹಾಗೂ ರಾಜ್ಯದ ಜನತೆ ಸುಖ, ಸಮೃದ್ಧಿ, ಶಾಂತಿಯಿಂದಿರಲಿ, ಬಡವರ ಹಾಗೂ ರೈತರ ಮೊಗದಲ್ಲಿ ಸಂತೋಷ ಸದಾ ಇರಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಹೊಸ ವರ್ಷದ ಪ್ರಯುಕ್ತ ಸರ್ಕಾರದ ಎಲ್ಲಾ ಹಿರಿಯ ಅಧಿಕಾರಿಗಳಿಗೆ ಶುಭ ಹಾರೈಸಿ, ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಉತ್ತಮ ಮಳೆ – ಬೆಳೆಯಿಂದ ಹೆಚ್ಚಿನ ಸಮಸ್ಯೆ ಪರಿಹಾರವಾಗುತ್ತದೆ. 2025 ರಲ್ಲಿ ಭಾರೀ ಮಳೆಯಾದ ಜೊತೆಗೆ ಬೆಳೆಹಾನಿಯೂ ಸಂಭವಿಸಿತು. 12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದ್ದು, ಹಾನಿಗೊಳಗಾದ ರೈತರಿಗೆ ಪರಿಹಾರ ಒದಗಿಸುವುದು ಸರ್ಕಾರದ ಕರ್ತವ್ಯ. ಕೇಂದ್ರ ಸರ್ಕಾರ ಎನ್ ಡಿಆರ್ ಎಫ್ ನಿಂದ ಹಾಗೂ ರಾಜ್ಯ ಸರ್ಕಾರ ಎಸ್ ಡಿ ಆರ್ ಎಫ್ ನಿಂದ ಪರಿಹಾರವನ್ನು ನೀಡುತ್ತದೆ. ರೈತರಿಗೆ ಹೆಚ್ಚಿನ ಪರಿಹಾರಗಳನ್ನು ಒದಗಿಸುವ ಮೂಲಕ ಅವರ ಕಷ್ಟಗಳಿಗೆ ಸ್ಪಂದಿಸುವುದು ನಮ್ಮ ಕರ್ತವ್ಯ. ರೈತರ ಹಾಗೂ ಜನರ ಸಂಕಷ್ಟಗಳಿಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿರುತ್ತದೆ. 2025 ರಲ್ಲಿ ಖುಷ್ಕಿ, ನೀರಾವರಿ ಸೇರಿದಂತೆ ಬೆಳೆಗೆ ಪ್ರತಿ ಹೆಕ್ಟೇರ್‌ಗೆ 8,500 ರೂ ಪರಿಹಾರ ನೀಡಲಾಗಿದ್ದು, ರೈತರಿಗೆ ತುಸು ನೆಮ್ಮದಿ ಕಾಣುವಂತಾಗಿದೆ ಎಂದು ಹೇಳಿದರು.

ವಿರೋಧ ಪಕ್ಷಗಳು ಟೀಕೆ ಮಾಡುವ ಸಲುವಾಗಿಯೇ ಟೀಕೆ ಮಾಡುತ್ತಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಕಷ್ಟಸುಖಗಳಿಗೆ ಸ್ಪಂದಿಸಲು ಹೆಚ್ಚಿನ ಆದ್ಯತೆ ನೀಡಬೇಕಿದೆ. ರಾಜ್ಯದ ಎಲ್ಲ ಜನತೆಗೆ ನ್ಯಾಯ ಒದಗಿಸುವುದು ಅವಶ್ಯ. ಜನರಿಗೆ ಅವಶ್ಯವಿರುವ ಸರ್ಕಾರದ ಸೇವೆಗಳನ್ನು ವಿಳಂಬ ಮಾಡದೇ ಪೂರೈಸಬೇಕು. ವಿಳಂಬ ನೀತಿ ಅನುಸರಿಸುವುದೂ ಒಂದು ರೀತಿಯ ಅಪರಾಧವೇ ಆಗಿದೆ ಎಂದರು.

ಹೊಸ ವರ್ಷ ಜನರ ಕೆಲಸ ನಿರ್ವಹಿಸಲು ಹೊಸ ಉತ್ಸಾಹದಿಂದ ಶ್ರಮಿಸಬೇಕು. ಅಧಿಕಾರಿಗಳು 30-40 ವರ್ಷಗಳು ಅಧಿಕಾರದಲ್ಲಿದ್ದರೆ, ನಾವು ಅಧಿಕಾರದಲ್ಲಿ ಐದು ವರ್ಷಗಳು ಇರುತ್ತೇವೆ. ರಾಜ್ಯದ ಜನರು ನಿನ್ನೆ ಮತ್ತು ಇಂದು ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ. ನೂತನ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಅತ್ಯಂತ ಶ್ರಮವಹಿಸಿ ಕಾರ್ಯನಿರ್ವಹಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಸಂಭ್ರಮಾಚರಣೆ ನಡೆದಿದೆ. ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿರುವ ಇಲಾಖೆಗೆ ಅಭಿನಂದನೆಗಳು ಎಂದು ತಿಳಿಸಿದರು.

ರಾಜ್ಯದ ಜನತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಾಗ ಅಧಿಕಾರಿಗಳು ಜಾತ್ಯತೀತವಾಗಿ, ಮಾನವೀಯ ನೆಲೆಯಲ್ಲಿ ಸಾರ್ವಜನಿಕರಿಗೆ ಸ್ಪಂದಿಸಬೇಕು. ಸಾಮಾಜಿಕ ನ್ಯಾಯದಿಂದ ವಂಚಿತರಾದವರಿಗೆ ನ್ಯಾಯ ಒದಗಿಸಲು ಪ್ರತಿಯೊಬ್ಬರು ಶ್ರಮಿಸಬೇಕು ಎಂದರು.

Ramesh Babu

Journalist

Recent Posts

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

1 hour ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

15 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

16 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

17 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

18 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

1 day ago