12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ: ಹಾನಿಗೊಳಗಾದ ರೈತರಿಗೆ ಪರಿಹಾರ ಒದಗಿಸುವುದು ಸರ್ಕಾರದ ಕರ್ತವ್ಯ- ಸಿಎಂ ಸಿದ್ದರಾಮಯ್ಯ

ಹೊಸ ವರ್ಷದ ಮೊದಲ ದಿನವಾದ ಇಂದು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದು ನಮ್ಮ ಪದ್ಧತಿ. ಹಿಂದೂ ಪದ್ಧತಿಯಲ್ಲಿ ಯುಗಾದಿ ಹೊಸ ವರ್ಷವಾಗಿದ್ದರೂ, ಇಂಗ್ಲೀಷ್ ಕ್ಯಾಲೆಂಡರ್ ನಂತೆ ಇಂದು ಪ್ರಾರಂಭವಾಗುವ ಹೊಸ ವರ್ಷವನ್ನು ವಿಶ್ವದಾದ್ಯಂತ ಸಂಭ್ರಮಾಚರಣೆಯಿಂದ ಸ್ವಾಗತಿಸಲಾಗುತ್ತದೆ. 2026ರ ವರ್ಷ ರಾಜ್ಯಕ್ಕೆ ಸಮೃದ್ಧಿಯನ್ನು ತರಲಿ ಹಾಗೂ ರಾಜ್ಯದ ಜನತೆ ಸುಖ, ಸಮೃದ್ಧಿ, ಶಾಂತಿಯಿಂದಿರಲಿ, ಬಡವರ ಹಾಗೂ ರೈತರ ಮೊಗದಲ್ಲಿ ಸಂತೋಷ ಸದಾ ಇರಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಹೊಸ ವರ್ಷದ ಪ್ರಯುಕ್ತ ಸರ್ಕಾರದ ಎಲ್ಲಾ ಹಿರಿಯ ಅಧಿಕಾರಿಗಳಿಗೆ ಶುಭ ಹಾರೈಸಿ, ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಉತ್ತಮ ಮಳೆ – ಬೆಳೆಯಿಂದ ಹೆಚ್ಚಿನ ಸಮಸ್ಯೆ ಪರಿಹಾರವಾಗುತ್ತದೆ. 2025 ರಲ್ಲಿ ಭಾರೀ ಮಳೆಯಾದ ಜೊತೆಗೆ ಬೆಳೆಹಾನಿಯೂ ಸಂಭವಿಸಿತು. 12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದ್ದು, ಹಾನಿಗೊಳಗಾದ ರೈತರಿಗೆ ಪರಿಹಾರ ಒದಗಿಸುವುದು ಸರ್ಕಾರದ ಕರ್ತವ್ಯ. ಕೇಂದ್ರ ಸರ್ಕಾರ ಎನ್ ಡಿಆರ್ ಎಫ್ ನಿಂದ ಹಾಗೂ ರಾಜ್ಯ ಸರ್ಕಾರ ಎಸ್ ಡಿ ಆರ್ ಎಫ್ ನಿಂದ ಪರಿಹಾರವನ್ನು ನೀಡುತ್ತದೆ. ರೈತರಿಗೆ ಹೆಚ್ಚಿನ ಪರಿಹಾರಗಳನ್ನು ಒದಗಿಸುವ ಮೂಲಕ ಅವರ ಕಷ್ಟಗಳಿಗೆ ಸ್ಪಂದಿಸುವುದು ನಮ್ಮ ಕರ್ತವ್ಯ. ರೈತರ ಹಾಗೂ ಜನರ ಸಂಕಷ್ಟಗಳಿಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿರುತ್ತದೆ. 2025 ರಲ್ಲಿ ಖುಷ್ಕಿ, ನೀರಾವರಿ ಸೇರಿದಂತೆ ಬೆಳೆಗೆ ಪ್ರತಿ ಹೆಕ್ಟೇರ್‌ಗೆ 8,500 ರೂ ಪರಿಹಾರ ನೀಡಲಾಗಿದ್ದು, ರೈತರಿಗೆ ತುಸು ನೆಮ್ಮದಿ ಕಾಣುವಂತಾಗಿದೆ ಎಂದು ಹೇಳಿದರು.

ವಿರೋಧ ಪಕ್ಷಗಳು ಟೀಕೆ ಮಾಡುವ ಸಲುವಾಗಿಯೇ ಟೀಕೆ ಮಾಡುತ್ತಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಕಷ್ಟಸುಖಗಳಿಗೆ ಸ್ಪಂದಿಸಲು ಹೆಚ್ಚಿನ ಆದ್ಯತೆ ನೀಡಬೇಕಿದೆ. ರಾಜ್ಯದ ಎಲ್ಲ ಜನತೆಗೆ ನ್ಯಾಯ ಒದಗಿಸುವುದು ಅವಶ್ಯ. ಜನರಿಗೆ ಅವಶ್ಯವಿರುವ ಸರ್ಕಾರದ ಸೇವೆಗಳನ್ನು ವಿಳಂಬ ಮಾಡದೇ ಪೂರೈಸಬೇಕು. ವಿಳಂಬ ನೀತಿ ಅನುಸರಿಸುವುದೂ ಒಂದು ರೀತಿಯ ಅಪರಾಧವೇ ಆಗಿದೆ ಎಂದರು.

ಹೊಸ ವರ್ಷ ಜನರ ಕೆಲಸ ನಿರ್ವಹಿಸಲು ಹೊಸ ಉತ್ಸಾಹದಿಂದ ಶ್ರಮಿಸಬೇಕು. ಅಧಿಕಾರಿಗಳು 30-40 ವರ್ಷಗಳು ಅಧಿಕಾರದಲ್ಲಿದ್ದರೆ, ನಾವು ಅಧಿಕಾರದಲ್ಲಿ ಐದು ವರ್ಷಗಳು ಇರುತ್ತೇವೆ. ರಾಜ್ಯದ ಜನರು ನಿನ್ನೆ ಮತ್ತು ಇಂದು ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ. ನೂತನ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಅತ್ಯಂತ ಶ್ರಮವಹಿಸಿ ಕಾರ್ಯನಿರ್ವಹಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಸಂಭ್ರಮಾಚರಣೆ ನಡೆದಿದೆ. ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿರುವ ಇಲಾಖೆಗೆ ಅಭಿನಂದನೆಗಳು ಎಂದು ತಿಳಿಸಿದರು.

ರಾಜ್ಯದ ಜನತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಾಗ ಅಧಿಕಾರಿಗಳು ಜಾತ್ಯತೀತವಾಗಿ, ಮಾನವೀಯ ನೆಲೆಯಲ್ಲಿ ಸಾರ್ವಜನಿಕರಿಗೆ ಸ್ಪಂದಿಸಬೇಕು. ಸಾಮಾಜಿಕ ನ್ಯಾಯದಿಂದ ವಂಚಿತರಾದವರಿಗೆ ನ್ಯಾಯ ಒದಗಿಸಲು ಪ್ರತಿಯೊಬ್ಬರು ಶ್ರಮಿಸಬೇಕು ಎಂದರು.

Ramesh Babu

Journalist

Recent Posts

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

46 minutes ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

1 hour ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

8 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

9 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ” ರಘು ದೀಕ್ಷಿತ್ ಸಂಗೀತದೊಂದಿಗೆ ತೆರೆ: ಮಹಿಳೆಯರ ಮನ ಗೆದ್ದ ಸ್ಯಾರಿ ಸಂತೆ: 2 ಕೋಟಿಗೂ ಅಧಿಕ ವಹಿವಾಟು

ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…

20 hours ago

ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿ ಮಾರಾಟ ಮಾಡುತ್ತಿದ್ದ ದಂಪತಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ.!

ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…

1 day ago