12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ: ಹಾನಿಗೊಳಗಾದ ರೈತರಿಗೆ ಪರಿಹಾರ ಒದಗಿಸುವುದು ಸರ್ಕಾರದ ಕರ್ತವ್ಯ- ಸಿಎಂ ಸಿದ್ದರಾಮಯ್ಯ

ಹೊಸ ವರ್ಷದ ಮೊದಲ ದಿನವಾದ ಇಂದು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದು ನಮ್ಮ ಪದ್ಧತಿ. ಹಿಂದೂ ಪದ್ಧತಿಯಲ್ಲಿ ಯುಗಾದಿ ಹೊಸ ವರ್ಷವಾಗಿದ್ದರೂ, ಇಂಗ್ಲೀಷ್ ಕ್ಯಾಲೆಂಡರ್ ನಂತೆ ಇಂದು ಪ್ರಾರಂಭವಾಗುವ ಹೊಸ ವರ್ಷವನ್ನು ವಿಶ್ವದಾದ್ಯಂತ ಸಂಭ್ರಮಾಚರಣೆಯಿಂದ ಸ್ವಾಗತಿಸಲಾಗುತ್ತದೆ. 2026ರ ವರ್ಷ ರಾಜ್ಯಕ್ಕೆ ಸಮೃದ್ಧಿಯನ್ನು ತರಲಿ ಹಾಗೂ ರಾಜ್ಯದ ಜನತೆ ಸುಖ, ಸಮೃದ್ಧಿ, ಶಾಂತಿಯಿಂದಿರಲಿ, ಬಡವರ ಹಾಗೂ ರೈತರ ಮೊಗದಲ್ಲಿ ಸಂತೋಷ ಸದಾ ಇರಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಹೊಸ ವರ್ಷದ ಪ್ರಯುಕ್ತ ಸರ್ಕಾರದ ಎಲ್ಲಾ ಹಿರಿಯ ಅಧಿಕಾರಿಗಳಿಗೆ ಶುಭ ಹಾರೈಸಿ, ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಉತ್ತಮ ಮಳೆ – ಬೆಳೆಯಿಂದ ಹೆಚ್ಚಿನ ಸಮಸ್ಯೆ ಪರಿಹಾರವಾಗುತ್ತದೆ. 2025 ರಲ್ಲಿ ಭಾರೀ ಮಳೆಯಾದ ಜೊತೆಗೆ ಬೆಳೆಹಾನಿಯೂ ಸಂಭವಿಸಿತು. 12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದ್ದು, ಹಾನಿಗೊಳಗಾದ ರೈತರಿಗೆ ಪರಿಹಾರ ಒದಗಿಸುವುದು ಸರ್ಕಾರದ ಕರ್ತವ್ಯ. ಕೇಂದ್ರ ಸರ್ಕಾರ ಎನ್ ಡಿಆರ್ ಎಫ್ ನಿಂದ ಹಾಗೂ ರಾಜ್ಯ ಸರ್ಕಾರ ಎಸ್ ಡಿ ಆರ್ ಎಫ್ ನಿಂದ ಪರಿಹಾರವನ್ನು ನೀಡುತ್ತದೆ. ರೈತರಿಗೆ ಹೆಚ್ಚಿನ ಪರಿಹಾರಗಳನ್ನು ಒದಗಿಸುವ ಮೂಲಕ ಅವರ ಕಷ್ಟಗಳಿಗೆ ಸ್ಪಂದಿಸುವುದು ನಮ್ಮ ಕರ್ತವ್ಯ. ರೈತರ ಹಾಗೂ ಜನರ ಸಂಕಷ್ಟಗಳಿಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿರುತ್ತದೆ. 2025 ರಲ್ಲಿ ಖುಷ್ಕಿ, ನೀರಾವರಿ ಸೇರಿದಂತೆ ಬೆಳೆಗೆ ಪ್ರತಿ ಹೆಕ್ಟೇರ್‌ಗೆ 8,500 ರೂ ಪರಿಹಾರ ನೀಡಲಾಗಿದ್ದು, ರೈತರಿಗೆ ತುಸು ನೆಮ್ಮದಿ ಕಾಣುವಂತಾಗಿದೆ ಎಂದು ಹೇಳಿದರು.

ವಿರೋಧ ಪಕ್ಷಗಳು ಟೀಕೆ ಮಾಡುವ ಸಲುವಾಗಿಯೇ ಟೀಕೆ ಮಾಡುತ್ತಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಕಷ್ಟಸುಖಗಳಿಗೆ ಸ್ಪಂದಿಸಲು ಹೆಚ್ಚಿನ ಆದ್ಯತೆ ನೀಡಬೇಕಿದೆ. ರಾಜ್ಯದ ಎಲ್ಲ ಜನತೆಗೆ ನ್ಯಾಯ ಒದಗಿಸುವುದು ಅವಶ್ಯ. ಜನರಿಗೆ ಅವಶ್ಯವಿರುವ ಸರ್ಕಾರದ ಸೇವೆಗಳನ್ನು ವಿಳಂಬ ಮಾಡದೇ ಪೂರೈಸಬೇಕು. ವಿಳಂಬ ನೀತಿ ಅನುಸರಿಸುವುದೂ ಒಂದು ರೀತಿಯ ಅಪರಾಧವೇ ಆಗಿದೆ ಎಂದರು.

ಹೊಸ ವರ್ಷ ಜನರ ಕೆಲಸ ನಿರ್ವಹಿಸಲು ಹೊಸ ಉತ್ಸಾಹದಿಂದ ಶ್ರಮಿಸಬೇಕು. ಅಧಿಕಾರಿಗಳು 30-40 ವರ್ಷಗಳು ಅಧಿಕಾರದಲ್ಲಿದ್ದರೆ, ನಾವು ಅಧಿಕಾರದಲ್ಲಿ ಐದು ವರ್ಷಗಳು ಇರುತ್ತೇವೆ. ರಾಜ್ಯದ ಜನರು ನಿನ್ನೆ ಮತ್ತು ಇಂದು ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ. ನೂತನ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಅತ್ಯಂತ ಶ್ರಮವಹಿಸಿ ಕಾರ್ಯನಿರ್ವಹಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಸಂಭ್ರಮಾಚರಣೆ ನಡೆದಿದೆ. ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿರುವ ಇಲಾಖೆಗೆ ಅಭಿನಂದನೆಗಳು ಎಂದು ತಿಳಿಸಿದರು.

ರಾಜ್ಯದ ಜನತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಾಗ ಅಧಿಕಾರಿಗಳು ಜಾತ್ಯತೀತವಾಗಿ, ಮಾನವೀಯ ನೆಲೆಯಲ್ಲಿ ಸಾರ್ವಜನಿಕರಿಗೆ ಸ್ಪಂದಿಸಬೇಕು. ಸಾಮಾಜಿಕ ನ್ಯಾಯದಿಂದ ವಂಚಿತರಾದವರಿಗೆ ನ್ಯಾಯ ಒದಗಿಸಲು ಪ್ರತಿಯೊಬ್ಬರು ಶ್ರಮಿಸಬೇಕು ಎಂದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

16 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

23 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

24 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago