12 ವರ್ಷಗಳಿಂದೆ ಮಾಡಿದ ಜಾತಿಗಣತಿಯನ್ನ ಈಗ ಅನುಷ್ಟಾನಕ್ಕೆ ತುರುವುದು ಎಷ್ಟು ಮಟ್ಟಿಗೆ ವೈಜ್ಞಾನಿಕ- ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿ

ಸರ್ಕಾರದಿಂದ ಜಾತಿ ಜನಗಣತಿ ಬಿಡುಗಡೆಗೆ ಸಿದ್ಧತೆ ವಿಚಾರ

ಸರ್ಕಾರದಿಂದ ಜಾತಿ ಜನಗಣತಿ ಬಿಡುಗಡೆಗೆ ಸಿದ್ದತೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾತನಾಡಿದ ಅವರು, ಈಗಾಗಲೇ ಜಾತಿ ಗಣತಿ ಮಾಡಿ ಸುಮಾರು ಹನ್ನೆರೆಡು ವರ್ಷಗಳೇ ಕಳೆದಿವೆ. 10 ವರ್ಷಗಳಿಗೊಮ್ಮೆ ಜಾತಿ ಗಣತಿ ಮಾಡಬೇಕು. ಅದನ್ನ ಈಗಿನ ಕಾಂಗ್ರೆಸ್ ಸರ್ಕಾರ ಮಾಡಿಲ್ಲ. ಕೇಂದ್ರದಲ್ಲಿ ಜಾತಿ ಗಣತಿ‌ ಮಾಡಬೇಕು ಎಂದು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಇತ್ತೀಚಿಗೆ ನಿಧನರಾದ ಜೆಡಿಎಸ್ ಹಿರಿಯ ಮುಖಂಡ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಅಪ್ಪಯ್ಯಣ್ಣ ಅವರ ನುಡಿ ನಮನ ಕಾರ್ಯಕ್ರಮವನ್ನು ಹಾಡೋನಹಳ್ಳಿ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹೊಸದಾಗಿ ರಾಜ್ಯ ಸರ್ಕಾರ ಜಾತಿ ಗಣತಿ ಮಾಡುವುದಾದರೆ ಮಾಡಲಿ, ಇಲ್ಲದಿದ್ದಲ್ಲಿ ಕೇಂದ್ರ ಸರ್ಕಾರ ಮಾಡುವ ತನಕ‌ವಾದರೂ ಕಾಯಬೇಕು. 12 ವರ್ಷಗಳಿಂದೆ ಮಾಡಿದ ಜಾತಿಗಣತಿಯನ್ನ ಈಗ ಅನುಷ್ಟಾನಕ್ಕೆ ತುರುವುದು ಎಷ್ಟು ಮಟ್ಟಿಗೆ ವೈಜ್ಞಾನಿಕ. ಅದರ ಸಾಧಕ ಭಾದಕಗಳನ್ನ ಚರ್ಚೆ ಮಾಡೋಣ ಎಂದರು.

ಸಿಟಿ ರವಿಗೆ ಪ್ರಾಣ ಬೆದರಿಕೆ ಪತ್ರ ವಿಚಾರ

ಸಿಟಿ ರವಿಗೆ ಪ್ರಾಣ ಬೆದರಿಕೆ ಪತ್ರ ವಿಚಾರಕ್ಕೆ ಸಂಬಂಧಸಿದಂತೆ ಮಾತನಾಡಿದ ಅವರು, ಪ್ರಾಣ ಬೆದರಿಕೆ ಪತ್ರ ಅದನ್ನೆಲ್ಲ ಗಂಭೀರವಾಗಿ ತೆಗೆದುಕೊಳ್ಳಲು ಆಗುವುದಿಲ್ಲ ಎಂದು ಹೇಳಿದರು.

ಅಪ್ಪಯ್ಯಣ್ಣನವರಿಗೆ ನುಡಿನಮನ

ರಾಜಕೀಯ, ಸಮಾಜ ಸೇವೆಯಲ್ಲಿ ಅಪ್ಪಯ್ಯಣ್ಣರವರು ಬಹಳ ಕೆಲಸ ಮಾಡಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ರಾಜಕೀಯ ಮಾಡುವುದು ಅಷ್ಟೊಂದು ಸುಲಭವಾಗಿರಲಿಲ್ಲ. ಇಂತಹ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನ ಕಟ್ಟಿ ಬೆಳೆಸಿದವರು ಅಪ್ಪಯ್ಯಣ್ಣರವರು. ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರ ಜೊತೆಯಲ್ಲಿ ಉತ್ತಮ ಸಂಬಂಧ  ಹೊಂದಿದ್ದರು. ಚುನಾವಣೆ ಬಂದಾಗ ಪಕ್ಷದ ನಿಷ್ಠಾವಂತರಾಗಿ ಕೆಲಸ ಮಾಡಿದ್ದವರು. ಅವರ ಪಕ್ಷ ನಿಷ್ಠೆಯಿಂದ ತಳ ಮಟ್ಟದಲ್ಲಿ ಪಕ್ಷ ಬೆಳೆಯಲು ಸಹಾಯವಾಗಿದೆ ಎಂದರು.

ಅವರ ಸಾವಿನ ದಿನ ನಮ್ಮ ಕುಟುಂಬದಿಂದ ಯಾರೂಬ್ಬರು ಬಾರದೆ ಇರುವುದಕ್ಕೆ ಬಹಳ ನೋವಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಶ್ರದ್ಧಾಂಜಲಿ ಸಲ್ಲಿಸಿದರು.

ಈ ವೇಳೆ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮಿಜಿ, ಶಾಸಕ ಧೀರಜ್ ಮುನಿರಾಜ್, ಬೆಂಗಳೂರು ಗ್ರಾಮಾಂತರ  ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಪಿಳ್ಳ ಮುನಿಶ್ಯಾಮಪ್ಪ, ಜೆಡಿಎಸ್ ತಾಲೂಕು ಅಧ್ಯಕ್ಷ ಲಕ್ಷ್ಮೀಪತಯ್ಯ, ಮಾಜಿ ಎಂಎಲ್ಸಿ ರಮೇಶ್ ಗೌಡ, ತೆಂಗು ನಾರು ಮಂಡಳಿ ಅಧ್ಯಕ್ಷ ಗಂಟಿಗಾನಹಳ್ಳಿ ಬಾಬು, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಸೇರಿದಂತೆ‌ ಇತರರು ಉಪಸ್ಥಿತರಿದ್ದರು.

Ramesh Babu

Journalist

Share
Published by
Ramesh Babu

Recent Posts

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

2 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

2 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

15 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

17 hours ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

19 hours ago