12 ವರ್ಷಗಳಿಂದೆ ಮಾಡಿದ ಜಾತಿಗಣತಿಯನ್ನ ಈಗ ಅನುಷ್ಟಾನಕ್ಕೆ ತುರುವುದು ಎಷ್ಟು ಮಟ್ಟಿಗೆ ವೈಜ್ಞಾನಿಕ- ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿ

ಸರ್ಕಾರದಿಂದ ಜಾತಿ ಜನಗಣತಿ ಬಿಡುಗಡೆಗೆ ಸಿದ್ಧತೆ ವಿಚಾರ

ಸರ್ಕಾರದಿಂದ ಜಾತಿ ಜನಗಣತಿ ಬಿಡುಗಡೆಗೆ ಸಿದ್ದತೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾತನಾಡಿದ ಅವರು, ಈಗಾಗಲೇ ಜಾತಿ ಗಣತಿ ಮಾಡಿ ಸುಮಾರು ಹನ್ನೆರೆಡು ವರ್ಷಗಳೇ ಕಳೆದಿವೆ. 10 ವರ್ಷಗಳಿಗೊಮ್ಮೆ ಜಾತಿ ಗಣತಿ ಮಾಡಬೇಕು. ಅದನ್ನ ಈಗಿನ ಕಾಂಗ್ರೆಸ್ ಸರ್ಕಾರ ಮಾಡಿಲ್ಲ. ಕೇಂದ್ರದಲ್ಲಿ ಜಾತಿ ಗಣತಿ‌ ಮಾಡಬೇಕು ಎಂದು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಇತ್ತೀಚಿಗೆ ನಿಧನರಾದ ಜೆಡಿಎಸ್ ಹಿರಿಯ ಮುಖಂಡ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಅಪ್ಪಯ್ಯಣ್ಣ ಅವರ ನುಡಿ ನಮನ ಕಾರ್ಯಕ್ರಮವನ್ನು ಹಾಡೋನಹಳ್ಳಿ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹೊಸದಾಗಿ ರಾಜ್ಯ ಸರ್ಕಾರ ಜಾತಿ ಗಣತಿ ಮಾಡುವುದಾದರೆ ಮಾಡಲಿ, ಇಲ್ಲದಿದ್ದಲ್ಲಿ ಕೇಂದ್ರ ಸರ್ಕಾರ ಮಾಡುವ ತನಕ‌ವಾದರೂ ಕಾಯಬೇಕು. 12 ವರ್ಷಗಳಿಂದೆ ಮಾಡಿದ ಜಾತಿಗಣತಿಯನ್ನ ಈಗ ಅನುಷ್ಟಾನಕ್ಕೆ ತುರುವುದು ಎಷ್ಟು ಮಟ್ಟಿಗೆ ವೈಜ್ಞಾನಿಕ. ಅದರ ಸಾಧಕ ಭಾದಕಗಳನ್ನ ಚರ್ಚೆ ಮಾಡೋಣ ಎಂದರು.

ಸಿಟಿ ರವಿಗೆ ಪ್ರಾಣ ಬೆದರಿಕೆ ಪತ್ರ ವಿಚಾರ

ಸಿಟಿ ರವಿಗೆ ಪ್ರಾಣ ಬೆದರಿಕೆ ಪತ್ರ ವಿಚಾರಕ್ಕೆ ಸಂಬಂಧಸಿದಂತೆ ಮಾತನಾಡಿದ ಅವರು, ಪ್ರಾಣ ಬೆದರಿಕೆ ಪತ್ರ ಅದನ್ನೆಲ್ಲ ಗಂಭೀರವಾಗಿ ತೆಗೆದುಕೊಳ್ಳಲು ಆಗುವುದಿಲ್ಲ ಎಂದು ಹೇಳಿದರು.

ಅಪ್ಪಯ್ಯಣ್ಣನವರಿಗೆ ನುಡಿನಮನ

ರಾಜಕೀಯ, ಸಮಾಜ ಸೇವೆಯಲ್ಲಿ ಅಪ್ಪಯ್ಯಣ್ಣರವರು ಬಹಳ ಕೆಲಸ ಮಾಡಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ರಾಜಕೀಯ ಮಾಡುವುದು ಅಷ್ಟೊಂದು ಸುಲಭವಾಗಿರಲಿಲ್ಲ. ಇಂತಹ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನ ಕಟ್ಟಿ ಬೆಳೆಸಿದವರು ಅಪ್ಪಯ್ಯಣ್ಣರವರು. ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರ ಜೊತೆಯಲ್ಲಿ ಉತ್ತಮ ಸಂಬಂಧ  ಹೊಂದಿದ್ದರು. ಚುನಾವಣೆ ಬಂದಾಗ ಪಕ್ಷದ ನಿಷ್ಠಾವಂತರಾಗಿ ಕೆಲಸ ಮಾಡಿದ್ದವರು. ಅವರ ಪಕ್ಷ ನಿಷ್ಠೆಯಿಂದ ತಳ ಮಟ್ಟದಲ್ಲಿ ಪಕ್ಷ ಬೆಳೆಯಲು ಸಹಾಯವಾಗಿದೆ ಎಂದರು.

ಅವರ ಸಾವಿನ ದಿನ ನಮ್ಮ ಕುಟುಂಬದಿಂದ ಯಾರೂಬ್ಬರು ಬಾರದೆ ಇರುವುದಕ್ಕೆ ಬಹಳ ನೋವಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಶ್ರದ್ಧಾಂಜಲಿ ಸಲ್ಲಿಸಿದರು.

ಈ ವೇಳೆ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮಿಜಿ, ಶಾಸಕ ಧೀರಜ್ ಮುನಿರಾಜ್, ಬೆಂಗಳೂರು ಗ್ರಾಮಾಂತರ  ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಪಿಳ್ಳ ಮುನಿಶ್ಯಾಮಪ್ಪ, ಜೆಡಿಎಸ್ ತಾಲೂಕು ಅಧ್ಯಕ್ಷ ಲಕ್ಷ್ಮೀಪತಯ್ಯ, ಮಾಜಿ ಎಂಎಲ್ಸಿ ರಮೇಶ್ ಗೌಡ, ತೆಂಗು ನಾರು ಮಂಡಳಿ ಅಧ್ಯಕ್ಷ ಗಂಟಿಗಾನಹಳ್ಳಿ ಬಾಬು, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಸೇರಿದಂತೆ‌ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

3 hours ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

13 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

24 hours ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

1 day ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

2 days ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

2 days ago