ಸುಮಾರು 12 ವರ್ಷದ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ನಿನ್ನೆ(ಮೇ.29) ಬೆಳಗ್ಗೆ ಸುಮಾರು 10ಗಂಟೆ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಶ್ರೀನಗರದಲ್ಲಿ ನಡೆದಿದೆ…
ಘಟನೆ ತಡವಾಗಿ ಬೆಳಕಿಗೆ ಬಂದಿದೆ….
ಬಿಹಾರ ಮೂಲದ ಚಾಂದಿನಿ ಕುಮಾರಿ(12), ನೇಣಿಗೆ ಶರಣಾದ ಬಾಲಕಿ.
ತಂದೆ ಧಮೇಂದ್ರ, ತಾಯಿ ಹಾಗೂ ಒಂದು ಹೆಣ್ಣು, ಒಂದು ಗಂಡು ಮಗು ಸಮೇತ ಬಿಹಾರದಿಂದ ದೊಡ್ಡಬಳ್ಳಾಪುರ ನಗರಕ್ಕೆ ಬಂದು ಶ್ರೀನಗರದಲ್ಲಿ ಮನೆ ಮಾಡಿಕೊಂಡು ವಾಸವಿದ್ದರು ಎನ್ನಲಾಗಿದೆ.
ಮೃತಳ ತಂದೆ ಧಮೇಂದ್ರ ರೈಲ್ವೆ ನಿಲ್ದಾಣದಲ್ಲಿ ಸಿಮೆಂಟ್ ಇಳಿಸುವ ಕಾರ್ಮಿಕನಾಗಿ ಕೆಲಸ ಮಾಡುತ್ತಿರುತ್ತಾನೆ. ತಾಯಿ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿರುತ್ತಾರೆ. ಸುಮಾರು 7 ವರ್ಷದ ಗಂಡು ಮಗು ಸಹ ಇದೆ.
ಚಾಂದಿನಿ ಕುಮಾರಿ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿ ತಂದೆ ತಾಯಿ ಕೆಲಸಕ್ಕೆ ಹೋದ ಕೂಡಲೇ ಮನೆ ಬಾಗಿಲು ಹಾಕಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ….
ಘಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…..
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…