124 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್; ದೊಡ್ಡಬಳ್ಳಾಪುರದಿಂದ ಟಿ.ವೆಂಕಟರಮಣಯ್ಯ; ದೇವನಹಳ್ಳಿಯಿಂದ ಕೆ.ಹೆಚ್.ಮುನಿಯಪ್ಪ ಕಣಕ್ಕೆ

2023ರ ಸಾರ್ವತ್ರಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ಅಳೆದು ತೂಗಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧೆ ಮಾಡಲಿದ್ದು. ಕೋಲಾರ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಇನ್ನೂ ಬಿಡುಗಡೆ ಮಾಡಿಲ್ಲ.

ಸಾಕಷ್ಟು ಕುತೂಹಲ ಕೆರಳಿಸಿದ್ದ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಗೊಂದಲಕ್ಕೆ ಹಾಲಿ ಶಾಸಕ ಟಿ.ವೆಂಕಟರಮಣಯ್ಯಗೆ ಟಿಕೆಟ್ ಘೋಷಣೆ ಆಗಿರುವುದರಿಂದ ಪೂರ್ಣವಿರಾಮ ಹಾಕಿದೆ.

ಶಾಸಕ ಟಿ.ವೆಂಕಟರಮಣಯ್ಯಗೆ ಟಿಕೆಟ್ ನೀಡಬಾರದು ಎಂದು ತೀವ್ರವಾಗಿ ವಿರೋಧಿಸಿದ್ದ ಸ್ವಾಭಿಮಾನಿ ಕಾಂಗ್ರೆಸ್ ಬಳಗ. ಕೊನೆಗೂ ಮೊದಲ ಪಟ್ಟಿಯಲ್ಲಿ ಹಾಲಿ ಶಾಸಕರಿಗೆ ಗ್ರೀನ್ ಸಿಗ್ನಲ್ ನೀಡಿರುವುದು ಬಾರಿ ಕುತೂಹಲಕ್ಕೆ ಕಾರಣವಾಗಿದೆ. ಮುಂದೆ ಸ್ವಾಭಿಮಾನಿ ಕಾಂಗ್ರೆಸ್ ಬಳಗದ ನಡೆ ಯಾವ ರೀತಿ ಇರುತ್ತೆ ಎಂಬುದು ಕಾದು ನೋಡಬೇಕಿದೆ.

ಈ ಬಾರಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲು ತಮ್ಮ ತಮ್ಮ ಕ್ಷೇತ್ರದಲ್ಲಿ ಗೆಲ್ಲುವ ಲೆಕ್ಕಾಚಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಸದ್ಯ ಬಿಡುಗಡೆಯಾಗಿರುವ 124 ಕ್ಷೇತ್ರಗಳಲ್ಲಿ 100 ಕ್ಷೇತ್ರಗಳಲ್ಲಿ ಗೆಲುವಿನ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ, ಅದರ ಆಧಾರದ ಮೇಲೆ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗಿದೆ.

Ramesh Babu

Journalist

Recent Posts

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

23 minutes ago

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

13 hours ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

14 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

14 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

14 hours ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

16 hours ago