2023ರ ಸಾರ್ವತ್ರಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ಅಳೆದು ತೂಗಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧೆ ಮಾಡಲಿದ್ದು. ಕೋಲಾರ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಇನ್ನೂ ಬಿಡುಗಡೆ ಮಾಡಿಲ್ಲ.
ಸಾಕಷ್ಟು ಕುತೂಹಲ ಕೆರಳಿಸಿದ್ದ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಗೊಂದಲಕ್ಕೆ ಹಾಲಿ ಶಾಸಕ ಟಿ.ವೆಂಕಟರಮಣಯ್ಯಗೆ ಟಿಕೆಟ್ ಘೋಷಣೆ ಆಗಿರುವುದರಿಂದ ಪೂರ್ಣವಿರಾಮ ಹಾಕಿದೆ.
ಶಾಸಕ ಟಿ.ವೆಂಕಟರಮಣಯ್ಯಗೆ ಟಿಕೆಟ್ ನೀಡಬಾರದು ಎಂದು ತೀವ್ರವಾಗಿ ವಿರೋಧಿಸಿದ್ದ ಸ್ವಾಭಿಮಾನಿ ಕಾಂಗ್ರೆಸ್ ಬಳಗ. ಕೊನೆಗೂ ಮೊದಲ ಪಟ್ಟಿಯಲ್ಲಿ ಹಾಲಿ ಶಾಸಕರಿಗೆ ಗ್ರೀನ್ ಸಿಗ್ನಲ್ ನೀಡಿರುವುದು ಬಾರಿ ಕುತೂಹಲಕ್ಕೆ ಕಾರಣವಾಗಿದೆ. ಮುಂದೆ ಸ್ವಾಭಿಮಾನಿ ಕಾಂಗ್ರೆಸ್ ಬಳಗದ ನಡೆ ಯಾವ ರೀತಿ ಇರುತ್ತೆ ಎಂಬುದು ಕಾದು ನೋಡಬೇಕಿದೆ.
ಈ ಬಾರಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲು ತಮ್ಮ ತಮ್ಮ ಕ್ಷೇತ್ರದಲ್ಲಿ ಗೆಲ್ಲುವ ಲೆಕ್ಕಾಚಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಸದ್ಯ ಬಿಡುಗಡೆಯಾಗಿರುವ 124 ಕ್ಷೇತ್ರಗಳಲ್ಲಿ 100 ಕ್ಷೇತ್ರಗಳಲ್ಲಿ ಗೆಲುವಿನ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ, ಅದರ ಆಧಾರದ ಮೇಲೆ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…