2023ರ ಸಾರ್ವತ್ರಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ಅಳೆದು ತೂಗಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧೆ ಮಾಡಲಿದ್ದು. ಕೋಲಾರ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಇನ್ನೂ ಬಿಡುಗಡೆ ಮಾಡಿಲ್ಲ.
ಸಾಕಷ್ಟು ಕುತೂಹಲ ಕೆರಳಿಸಿದ್ದ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಗೊಂದಲಕ್ಕೆ ಹಾಲಿ ಶಾಸಕ ಟಿ.ವೆಂಕಟರಮಣಯ್ಯಗೆ ಟಿಕೆಟ್ ಘೋಷಣೆ ಆಗಿರುವುದರಿಂದ ಪೂರ್ಣವಿರಾಮ ಹಾಕಿದೆ.
ಶಾಸಕ ಟಿ.ವೆಂಕಟರಮಣಯ್ಯಗೆ ಟಿಕೆಟ್ ನೀಡಬಾರದು ಎಂದು ತೀವ್ರವಾಗಿ ವಿರೋಧಿಸಿದ್ದ ಸ್ವಾಭಿಮಾನಿ ಕಾಂಗ್ರೆಸ್ ಬಳಗ. ಕೊನೆಗೂ ಮೊದಲ ಪಟ್ಟಿಯಲ್ಲಿ ಹಾಲಿ ಶಾಸಕರಿಗೆ ಗ್ರೀನ್ ಸಿಗ್ನಲ್ ನೀಡಿರುವುದು ಬಾರಿ ಕುತೂಹಲಕ್ಕೆ ಕಾರಣವಾಗಿದೆ. ಮುಂದೆ ಸ್ವಾಭಿಮಾನಿ ಕಾಂಗ್ರೆಸ್ ಬಳಗದ ನಡೆ ಯಾವ ರೀತಿ ಇರುತ್ತೆ ಎಂಬುದು ಕಾದು ನೋಡಬೇಕಿದೆ.
ಈ ಬಾರಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲು ತಮ್ಮ ತಮ್ಮ ಕ್ಷೇತ್ರದಲ್ಲಿ ಗೆಲ್ಲುವ ಲೆಕ್ಕಾಚಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಸದ್ಯ ಬಿಡುಗಡೆಯಾಗಿರುವ 124 ಕ್ಷೇತ್ರಗಳಲ್ಲಿ 100 ಕ್ಷೇತ್ರಗಳಲ್ಲಿ ಗೆಲುವಿನ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ, ಅದರ ಆಧಾರದ ಮೇಲೆ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗಿದೆ.
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…