2023ರ ಸಾರ್ವತ್ರಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ಅಳೆದು ತೂಗಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧೆ ಮಾಡಲಿದ್ದು. ಕೋಲಾರ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಇನ್ನೂ ಬಿಡುಗಡೆ ಮಾಡಿಲ್ಲ.
ಸಾಕಷ್ಟು ಕುತೂಹಲ ಕೆರಳಿಸಿದ್ದ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಗೊಂದಲಕ್ಕೆ ಹಾಲಿ ಶಾಸಕ ಟಿ.ವೆಂಕಟರಮಣಯ್ಯಗೆ ಟಿಕೆಟ್ ಘೋಷಣೆ ಆಗಿರುವುದರಿಂದ ಪೂರ್ಣವಿರಾಮ ಹಾಕಿದೆ.
ಶಾಸಕ ಟಿ.ವೆಂಕಟರಮಣಯ್ಯಗೆ ಟಿಕೆಟ್ ನೀಡಬಾರದು ಎಂದು ತೀವ್ರವಾಗಿ ವಿರೋಧಿಸಿದ್ದ ಸ್ವಾಭಿಮಾನಿ ಕಾಂಗ್ರೆಸ್ ಬಳಗ. ಕೊನೆಗೂ ಮೊದಲ ಪಟ್ಟಿಯಲ್ಲಿ ಹಾಲಿ ಶಾಸಕರಿಗೆ ಗ್ರೀನ್ ಸಿಗ್ನಲ್ ನೀಡಿರುವುದು ಬಾರಿ ಕುತೂಹಲಕ್ಕೆ ಕಾರಣವಾಗಿದೆ. ಮುಂದೆ ಸ್ವಾಭಿಮಾನಿ ಕಾಂಗ್ರೆಸ್ ಬಳಗದ ನಡೆ ಯಾವ ರೀತಿ ಇರುತ್ತೆ ಎಂಬುದು ಕಾದು ನೋಡಬೇಕಿದೆ.
ಈ ಬಾರಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲು ತಮ್ಮ ತಮ್ಮ ಕ್ಷೇತ್ರದಲ್ಲಿ ಗೆಲ್ಲುವ ಲೆಕ್ಕಾಚಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಸದ್ಯ ಬಿಡುಗಡೆಯಾಗಿರುವ 124 ಕ್ಷೇತ್ರಗಳಲ್ಲಿ 100 ಕ್ಷೇತ್ರಗಳಲ್ಲಿ ಗೆಲುವಿನ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ, ಅದರ ಆಧಾರದ ಮೇಲೆ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗಿದೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…