2023ರ ಸಾರ್ವತ್ರಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ಅಳೆದು ತೂಗಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧೆ ಮಾಡಲಿದ್ದು. ಕೋಲಾರ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಇನ್ನೂ ಬಿಡುಗಡೆ ಮಾಡಿಲ್ಲ.
ಸಾಕಷ್ಟು ಕುತೂಹಲ ಕೆರಳಿಸಿದ್ದ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಗೊಂದಲಕ್ಕೆ ಹಾಲಿ ಶಾಸಕ ಟಿ.ವೆಂಕಟರಮಣಯ್ಯಗೆ ಟಿಕೆಟ್ ಘೋಷಣೆ ಆಗಿರುವುದರಿಂದ ಪೂರ್ಣವಿರಾಮ ಹಾಕಿದೆ.
ಶಾಸಕ ಟಿ.ವೆಂಕಟರಮಣಯ್ಯಗೆ ಟಿಕೆಟ್ ನೀಡಬಾರದು ಎಂದು ತೀವ್ರವಾಗಿ ವಿರೋಧಿಸಿದ್ದ ಸ್ವಾಭಿಮಾನಿ ಕಾಂಗ್ರೆಸ್ ಬಳಗ. ಕೊನೆಗೂ ಮೊದಲ ಪಟ್ಟಿಯಲ್ಲಿ ಹಾಲಿ ಶಾಸಕರಿಗೆ ಗ್ರೀನ್ ಸಿಗ್ನಲ್ ನೀಡಿರುವುದು ಬಾರಿ ಕುತೂಹಲಕ್ಕೆ ಕಾರಣವಾಗಿದೆ. ಮುಂದೆ ಸ್ವಾಭಿಮಾನಿ ಕಾಂಗ್ರೆಸ್ ಬಳಗದ ನಡೆ ಯಾವ ರೀತಿ ಇರುತ್ತೆ ಎಂಬುದು ಕಾದು ನೋಡಬೇಕಿದೆ.
ಈ ಬಾರಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲು ತಮ್ಮ ತಮ್ಮ ಕ್ಷೇತ್ರದಲ್ಲಿ ಗೆಲ್ಲುವ ಲೆಕ್ಕಾಚಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಸದ್ಯ ಬಿಡುಗಡೆಯಾಗಿರುವ 124 ಕ್ಷೇತ್ರಗಳಲ್ಲಿ 100 ಕ್ಷೇತ್ರಗಳಲ್ಲಿ ಗೆಲುವಿನ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ, ಅದರ ಆಧಾರದ ಮೇಲೆ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗಿದೆ.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…