Categories: ಕೋಲಾರ

ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ವಿದ್ಯಾರ್ಧಿಗಳಿಗೆ ಲ್ಯಾಪ್ ಟಾಪ್ ವಿತರಿಸುವುದು ನಿಮ್ಮ ಅಭ್ಯಾಸಕ್ಕೆ ಸಹಾಯವಾಗಲೆಂದು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಉತ್ತಮ ಅಭ್ಯಾಸ ಮಾಡಬೇಕು. ಅದನ್ನು ಬಿಟ್ಟು ವಿಡಿಯೋಗಳನ್ನು ನೋಡಿಕೊಂಡು ಗೇಮ್ ಆಡುವುದಕ್ಕಲ್ಲ ವಾಮಮಾರ್ಗ ಹಿಡಿದು ದಾರಿ ತಪ್ಪುವುದು ಬೇಡ ಎಂದು ಶಾಸಕ ಕೊತ್ತೂರು ಮಂಜುನಾಥ್ ವಿಧ್ಯಾರ್ಥಿಗಳಿಗೆ ಕವಿ ಮಾತು ಹೇಳಿದರು

ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸರಕಾರ ಹಾಗೂ ಕಾರ್ಮಿಕ ಇಲಾಖೆಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿದ ಅವರು, ಸರಕಾರವು ವಿಧ್ಯಾರ್ಥಿಗಳಿಗೆ ಓದಲು ಪೂರಕವಾದ ವಾತಾವರಣವನ್ನು ಸೃಷ್ಟಿಸುವ ಉದ್ದೇಶದಿಂದ ಅನೇಕ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಇದರ ಸದುಪಯೋಗ ಪಡೆಸಿಕೊಂಡು ಉತ್ತಮ ಅಭ್ಯಾಸದ ಜೊತೆಗೆ ತಂದೆತಾಯಿಗೆ ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕು ಎಂದರು‌

ಕಟ್ಟಡ ಕಾರ್ಮಿಕರು ದಿನನಿತ್ಯ ಕಷ್ಟಪಟ್ಟು ದುಡಿಯುತ್ತಾರೆ ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳತ್ತಾರೆ ಶ್ರೀಮಂತರ ಮಕ್ಕಳು ಖಾಸಗಿ ಶಾಲಾ ಕಾಲೇಜುಗಳಲ್ಲಿ ಓದಿದ್ದರೂ ಸರಕಾರಿ ಶಾಲಾ ಕಾಲೇಜುಗಳಲ್ಲಿ ಓದಿ ಪೈಪೋಟಿ ನೀಡುವಂತಾಗಿದ್ದಾರೆ ಕಷ್ಟ ಪಟ್ಟು ಪ್ರಯತ್ನ ಪಟ್ಟರೆ ಖಂಡಿತವಾಗಿ ಪ್ರತಿಫಲ ಇದ್ದೇ ಇರುತ್ತದೆ ಸಂವಿಧಾನದ ಹಕ್ಕುಗಳ ಜಾರಿಗಾಗಿ ಸಮಾಜಕ್ಕೆ ಏನಾದರೂ ಕೊಡುಗೆ ನೀಡುವಂತವರು ಆಗಿ ನೀವು ಎಲ್ಲರೂ ಬೆಳೆಯಬೇಕು ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಕಾರ್ಮಿಕರ ಮಕ್ಕಳು ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಓದಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ ವಿದ್ಯೆ ಕಲೆ ಎಂಬುದು ಯಾರ ಒಬ್ಬರ ಸ್ವತ್ತು ಅಲ್ಲ ಎಲ್ಲರಿಗೂ ಸಿಗುತ್ತದೆ ವಿದ್ಯಾರ್ಥಿಗಳು ಮುಂದಿನ ಭವಿಷ್ಯದ ಗುರಿ ಇಟ್ಟುಕೊಂಡು ಹೋಗಬೇಕು ಅವಾಗ ಮಾತ್ರವೇ ಉನ್ನತ ಸ್ಥಾನಮಾನವನ್ನು ಪಡೆಯಲು ಸಾಧ್ಯವಾಗುತ್ತದೆ ಸ್ಪರ್ಧಾತ್ಮಕ ಯುಗದಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದರೆ ಮಾತ್ರ ಉದ್ಯೋಗ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಕಾರ್ಮಿಕ ನೀರಿಕ್ಷಕರಾದ ರಾಜೇಶ್ವರಿ ಮಾತನಾಡಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸರಕಾರ ಮತ್ತು ಕಾರ್ಮಿಕ ಇಲಾಖೆಯ ವತಿಯಿಂದ ಲ್ಯಾಪ್‌ಟಾಪ್ ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿತ್ತು ತಾಲೂಕಿನಲ್ಲಿ ಸುಮಾರು 680 ಅರ್ಜಿಗಳಲ್ಲಿ 168 ಅರ್ಜಿಗಳನ್ನು ಪರಿಶೀಲನೆ ಮಾಡಿ ಅದರಲ್ಲೂ 41 ನೈಜ ಕಟ್ಟಡ ಕಾರ್ಮಿಕರನ್ನು ಗುರುತಿಸಲಾಗಿತ್ತು ಎಸ್.ಎಸ್.ಎಲ್.ಸಿ ಯಲ್ಲಿ ಅತಿಹೆಚ್ಚು ಅಂಕ ಗಳಿಸಿದ 33 ಮಕ್ಕಳನ್ನು ಆಯ್ಕೆ ಮಾಡಿ ತಿತರಿಸಲಾಗುತ್ತಾ ಇದೆ ಎಂದು ವಿವರಿಸಿದರು ಈ ಸಂದರ್ಭದಲ್ಲಿ ತಾಪಂ ಇಒ ಮುನಿಯಪ್ಪ ಮುಂತಾದವರು ಇದ್ದರು

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

6 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

10 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

19 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago