13 ವರ್ಷದ ದಾಂಪತ್ಯ ಜೀವನಕ್ಕೆ ಗುಡ್ ಬೈ: ವಾರದ ಪ್ರೀತಿಗೆ ವೆಲ್ ಕಮ್: ಇನ್ಸ್ಚಾಗ್ರಾಮ್ ನಲ್ಲಿ ಲವ್ & ಮ್ಯಾರೇಜ್

13 ವರ್ಷದ ದಾಂಪತ್ಯ ಜೀವನಕ್ಕೆ ಒಬ್ಬ‌ ಮಗನಿದ್ದಾನೆ. ಇನ್ಸ್ಚಾಗ್ರಾಮ್ ನಲ್ಲಿದ್ದ ಅವಳಿಗೆ ಹೊಸ ಲವರ್ ಸಿಕ್ಕಿದ್ದು, ವಾರದಲ್ಲಿ ಪ್ರೀತಿ ಮಾಡಿದ್ಳು, ಇದೀಗ ಲವರ್ ಜೊತೆ ಮದುವೆಯಾಗಿ ಗಂಡನಿಗೆ ಶಾಕ್ ನೀಡಿದ್ದಾಳೆ.

ನೆಲಮಂಗಲ ನಗರದ ಜಕ್ಕಸಂದ್ರದ ರಾಘವೇಂದ್ರ ನಗರದ ನೇತ್ರಾವತಿ ಎಂಬಾಕೆ ಗಂಡ ಮತ್ತು ಆತನ ಮನೆಯವರಿಗೆ ಬೀಗ್ ಶಾಕ್ ಕೊಟ್ಟಿದ್ದಾಳೆ.

ಗಂಡನ ಜೊತೆ ಜಗಳ ಮಾಡ್ಕೊಂಡ್ ಮನೆ ಬಿಟ್ಟು ಹೋಗಿದ್ದವಳು, ಇನ್ಸ್ಟಾ ಗ್ರಾಮ್ ನಲ್ಲಿ ಮದುವೆ ವಿಡಿಯೋ ಶೇರ್ ಮಾಡಿಕೊಂಡು, ಮತ್ತೊಂದು ಮದುವೆಯಾಗಿರುವುದಾಗಿ ಹೇಳಿದ್ದಾಳೆ.

ಪ್ರಕರಣ ಸಂಬಂಧ ಆಕೆಯ ಗಂಡನ ಕಡೆಯವರು ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

ನೇತ್ರಾವತಿ 13 ವರ್ಷಗಳ ಹಿಂದೆ ರಮೇಶ್ ಜೊತೆ ಮದುವೆಯಾಗಿದ್ಳು, ಇವರ ದಾಂಪತ್ಯಕ್ಕೆ ಒಬ್ಬ ಮಗ ಸಹ ಇದ್ದಾನೆ, ಡ್ರೈವರ್ ಕೆಲಸ ಮಾಡುವ ರಮೇಶ್ ಸಂಸಾರವನ್ನ ಚೆನ್ನಾಗಿಯೇ ನೋಡಿಕೊಂಡಿದ್ದ, ಇತ್ತಿಚೇಗೆ ಗಂಡ ಹೆಂಡತಿ ನಡುವೆ ಜಗಳವಾಗಿದೆ. ಜಗಳ ನಂತರ ನೇತ್ರಾವತಿ ಮನೆ ಬಿಟ್ಟು ಹೋಗಿದ್ದಾಳೆ. ವಾರದ ನಂತರ ಅವಳ ಇನ್ಸ್ಟಾಗ್ರಾಮ್ ನಲ್ಲಿ ಮದುವೆಯಾಗಿರುವ ವಿಡಿಯೋ ಶೇರ್ ಮಾಡಿದ್ದಾಳೆ.

ಸಂತೋಷ ಎಂಬ ಯುವಕನನ್ನ ಮದುವೆಯಾಗಿರುವುದಾಗಿ ವಿಡಿಯೋದಲ್ಲಿ ಹೇಳಿದ್ದಾಳೆ, ಅಂದಹಾಗೇ, ವಾರದ ಹಿಂದೆ ಇನ್ಸ್ಟಾಗ್ರಾಮ್ ನಲ್ಲಿ ಸಂತೋಷ ಪರಿಚಯವಾಗಿದೆ, ನೇತ್ರಾವತಿ ಆತನನ್ನು ಪ್ರೀತಿ ಮಾಡಿದ್ದಾಳೆ, ವಾರದೊಳಗೆ ಆತನ ಜೊತೆ ಮದುವೆ ಆಗಿದ್ದಾಳೆ, ಇನ್ಸ್ಟಾಗ್ರಾಮ್ ನಲ್ಲಿ ಮದುವೆ ವಿಡಿಯೋ ನೋಡಿದ ಗಂಡ ರಮೇಶ್ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾನೆ.

ನೇತ್ರಾವತಿಗೆ ತಂದೆಯ ಮನೆಯಿಂದ 50 ಲಕ್ಷ ಮೌಲ್ಯದ ಆಸ್ತಿ ಬಂದಿದೆ, ಈ ಆಸ್ತಿಯನ್ನ ಹೊಡೆಯಲು ಸಂತೋಷ್ ಎಂಬ ಯುವಕ ನೇತ್ರಾವತಿಯನ್ನ ಮದುವೆಯಾಗಿದ್ದಾನೆಂದು ರಮೇಶ್ ಆರೋಪ ಮಾಡಿದ್ದಾನೆ, ನನಗೆ ನನ್ನ ಮಗ ಬೇಕು, ಹೆಂಡತಿಯಿಂದ ನ್ಯಾಯ ಬೇಕೆಂದು ದೂರು ನೀಡಿದ್ದಾನೆ.

Ramesh Babu

Journalist

Recent Posts

ಭೂಗಳ್ಳರಿಂದ 8 ಎಕರೆ ಜಮೀನು ರಕ್ಷಣೆ: ಆಶ್ರಯ ಯೋಜನೆಗೆ ಭೂಮಿ ಮಂಜೂರು: ಆಶ್ರಯ ಯೋಜನೆಯ ಯಶಸ್ವಿ ಕಾರ್ಯಕ್ರಮ ಆಯೋಜನೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120…

2 hours ago

ಶಾಲಾಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಪ್ರಕರಣ: ಸಿಎಂ ಸಿದ್ದರಾಮಯ್ಯ ಏನಂದ್ರು…?

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ…

6 hours ago

ಹೋರಾಟ ಮತ್ತು ಹೋರಾಟಗಾರರು……

ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ...... 1995/2000 ಇಸವಿಯ…

10 hours ago

ತಿರುಮಗೊಂಡಹಳ್ಳಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಘಾಟಿ ಪ್ರಾಧಿಕಾರದ ಸದಸ್ಯರ ಮನವಿ

ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ‌‌ ಗ್ರಾಮದ ಮೂಲಕ ಹಾದುಹೋಗುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥನ ರಸ್ತೆಗೆ ಅಡ್ಡಲಾಗಿ ರೈಲು ಹಳಿ ಹಾದುಹೋಗಿದ್ದು,…

23 hours ago

ಅಧಿಕಾರಿಗಳಲ್ಲಿ ಮಾಹಿತಿ ಕೊರತೆಯಿಂದ ಆರ್‌ಟಿಐ ಅರ್ಜಿಗಳ ವಿಲೇವಾರಿ ವಿಳಂಬ- ಮಾಹಿತಿ ಆಯುಕ್ತ ಹರೀಶ್ ಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ…

1 day ago

ಧರ್ಮಸ್ಥಳ ಕೇಸ್ ವಿಚಾರ: ತನಿಖೆ ಬೇಗ ಮುಗಿಸಿ ನ್ಯಾಯ ಕೊಡಿಸಿ ಭಾರತೀಯ ಪರಂಪರೆಯನ್ನ ಉಳಿಸಬೇಕು- ಸಚಿವ ವಿ.ಸೋಮಣ್ಣ

ಧರ್ಮಸ್ಥಳ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿ, ಧರ್ಮಸ್ಥಳ ವಿಶ್ವದಲ್ಲೇ ಪವಿತ್ರವಾದ ಸ್ಥಳ. ಅವಷೇಶ ಮತ್ತೊಂದು…

1 day ago