13 ವರ್ಷದ ದಾಂಪತ್ಯ ಜೀವನಕ್ಕೆ ಗುಡ್ ಬೈ: ವಾರದ ಪ್ರೀತಿಗೆ ವೆಲ್ ಕಮ್: ಇನ್ಸ್ಚಾಗ್ರಾಮ್ ನಲ್ಲಿ ಲವ್ & ಮ್ಯಾರೇಜ್

13 ವರ್ಷದ ದಾಂಪತ್ಯ ಜೀವನಕ್ಕೆ ಒಬ್ಬ‌ ಮಗನಿದ್ದಾನೆ. ಇನ್ಸ್ಚಾಗ್ರಾಮ್ ನಲ್ಲಿದ್ದ ಅವಳಿಗೆ ಹೊಸ ಲವರ್ ಸಿಕ್ಕಿದ್ದು, ವಾರದಲ್ಲಿ ಪ್ರೀತಿ ಮಾಡಿದ್ಳು, ಇದೀಗ ಲವರ್ ಜೊತೆ ಮದುವೆಯಾಗಿ ಗಂಡನಿಗೆ ಶಾಕ್ ನೀಡಿದ್ದಾಳೆ.

ನೆಲಮಂಗಲ ನಗರದ ಜಕ್ಕಸಂದ್ರದ ರಾಘವೇಂದ್ರ ನಗರದ ನೇತ್ರಾವತಿ ಎಂಬಾಕೆ ಗಂಡ ಮತ್ತು ಆತನ ಮನೆಯವರಿಗೆ ಬೀಗ್ ಶಾಕ್ ಕೊಟ್ಟಿದ್ದಾಳೆ.

ಗಂಡನ ಜೊತೆ ಜಗಳ ಮಾಡ್ಕೊಂಡ್ ಮನೆ ಬಿಟ್ಟು ಹೋಗಿದ್ದವಳು, ಇನ್ಸ್ಟಾ ಗ್ರಾಮ್ ನಲ್ಲಿ ಮದುವೆ ವಿಡಿಯೋ ಶೇರ್ ಮಾಡಿಕೊಂಡು, ಮತ್ತೊಂದು ಮದುವೆಯಾಗಿರುವುದಾಗಿ ಹೇಳಿದ್ದಾಳೆ.

ಪ್ರಕರಣ ಸಂಬಂಧ ಆಕೆಯ ಗಂಡನ ಕಡೆಯವರು ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

ನೇತ್ರಾವತಿ 13 ವರ್ಷಗಳ ಹಿಂದೆ ರಮೇಶ್ ಜೊತೆ ಮದುವೆಯಾಗಿದ್ಳು, ಇವರ ದಾಂಪತ್ಯಕ್ಕೆ ಒಬ್ಬ ಮಗ ಸಹ ಇದ್ದಾನೆ, ಡ್ರೈವರ್ ಕೆಲಸ ಮಾಡುವ ರಮೇಶ್ ಸಂಸಾರವನ್ನ ಚೆನ್ನಾಗಿಯೇ ನೋಡಿಕೊಂಡಿದ್ದ, ಇತ್ತಿಚೇಗೆ ಗಂಡ ಹೆಂಡತಿ ನಡುವೆ ಜಗಳವಾಗಿದೆ. ಜಗಳ ನಂತರ ನೇತ್ರಾವತಿ ಮನೆ ಬಿಟ್ಟು ಹೋಗಿದ್ದಾಳೆ. ವಾರದ ನಂತರ ಅವಳ ಇನ್ಸ್ಟಾಗ್ರಾಮ್ ನಲ್ಲಿ ಮದುವೆಯಾಗಿರುವ ವಿಡಿಯೋ ಶೇರ್ ಮಾಡಿದ್ದಾಳೆ.

ಸಂತೋಷ ಎಂಬ ಯುವಕನನ್ನ ಮದುವೆಯಾಗಿರುವುದಾಗಿ ವಿಡಿಯೋದಲ್ಲಿ ಹೇಳಿದ್ದಾಳೆ, ಅಂದಹಾಗೇ, ವಾರದ ಹಿಂದೆ ಇನ್ಸ್ಟಾಗ್ರಾಮ್ ನಲ್ಲಿ ಸಂತೋಷ ಪರಿಚಯವಾಗಿದೆ, ನೇತ್ರಾವತಿ ಆತನನ್ನು ಪ್ರೀತಿ ಮಾಡಿದ್ದಾಳೆ, ವಾರದೊಳಗೆ ಆತನ ಜೊತೆ ಮದುವೆ ಆಗಿದ್ದಾಳೆ, ಇನ್ಸ್ಟಾಗ್ರಾಮ್ ನಲ್ಲಿ ಮದುವೆ ವಿಡಿಯೋ ನೋಡಿದ ಗಂಡ ರಮೇಶ್ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾನೆ.

ನೇತ್ರಾವತಿಗೆ ತಂದೆಯ ಮನೆಯಿಂದ 50 ಲಕ್ಷ ಮೌಲ್ಯದ ಆಸ್ತಿ ಬಂದಿದೆ, ಈ ಆಸ್ತಿಯನ್ನ ಹೊಡೆಯಲು ಸಂತೋಷ್ ಎಂಬ ಯುವಕ ನೇತ್ರಾವತಿಯನ್ನ ಮದುವೆಯಾಗಿದ್ದಾನೆಂದು ರಮೇಶ್ ಆರೋಪ ಮಾಡಿದ್ದಾನೆ, ನನಗೆ ನನ್ನ ಮಗ ಬೇಕು, ಹೆಂಡತಿಯಿಂದ ನ್ಯಾಯ ಬೇಕೆಂದು ದೂರು ನೀಡಿದ್ದಾನೆ.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

2 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

3 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

11 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago