ಹುಲಿಯೊಂದು ನೀರಿನಿಂದ ಪ್ಲಾಸ್ಟಿಕ್ ಬಾಟಲಿಯನ್ನು ಬಾಯಲ್ಲಿ ಕಚ್ಚಿ ಹೋಗುತ್ತಿರುವ ದೃಶ್ಯ ಮಾನವ ಕುಲ ನಾಚುವಂತೆ ಮಾಡಿದೆ.
ಆ ವಿಡಿಯೋ ತುಣುಕನ್ನ ಮಹಾರಾಷ್ಟ್ರ ಪ್ರವಾಸೋದ್ಯಮ ಇಲಾಖೆ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಸದ್ಯ ಈ ದೃಶ್ಯ ಫುಲ್ ವೈರಲ್ ಆಗಿದೆ. ಹುಲಿಯ ವರ್ತನೆಯಿಂದ ಮನುಷ್ಯ ಸಾಕಷ್ಟು ಕಲಿಯಬೇಕಿದೆ. ಈಗಲಾದರೂ ಪರಿಸರ ಬಗ್ಗೆ ಮನುಷ್ಯ ಕಾಳಜಿ ವಹಿಸಬೇಕಿದೆ.
ಪ್ರಕೃತಿಯ ವಿರುದ್ಧ ಮನುಷ್ಯರು ಹೋಗುತ್ತಿರುವ ರೀತಿ ಇಂದು ಪ್ರಾಕೃತಿಕ ವಿಕೋಪದ ಮೂಲಕ ಆತನನ್ನೇ ಬಲಿ ಪಡೆದುಕೊಳ್ಳುತ್ತಿದೆ. ತಾನೇ ತೋಡಿಕೊಂಡ ಹಳ್ಳಕ್ಕೆ ಬೀಳುವಂತಾಗಿದೆ ಮನುಷ್ಯನ ಪರಿಸ್ಥಿತಿ ನಿರ್ಮಾಣವಾಗಿದೆ.
ನಮ್ಮೆಲ್ಲರ ಬದುಕಿನಲ್ಲಿ ಹಾಸುಹೊಕ್ಕಾಗಿರುವ ‘ಪ್ಲಾಸ್ಟಿಕ್ ’ ಮಾಡುತ್ತಿರುವ ಅನಾಹುತ ಅಂತಿಂಥದ್ದಲ್ಲ. ಪರಿಸರ ಮಾತ್ರವಲ್ಲ ಮನುಷ್ಯರು, ಪ್ರಾಣಿಗಳ ಮೇಲೂ ಪ್ಲಾಸ್ಟಿಕ್ ದುಷ್ಪರಿಣಾಮ ಬೀರುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.
ಇನ್ನು ಮನುಷ್ಯನ ಜೊತೆಗೆ ಅದೆಷ್ಟೋ ಪ್ರಾಣಿಗಳು, ಜಲಚರಗಳು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತಿಂದು ಪ್ರಾಣ ಕಳೆದುಕೊಂಡಿವೆ. ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಬಿಸಾಡುವ ಪ್ಲಾಸ್ಟಿಕ್ ವಸ್ತುವಾಗಿರಬಹುದು, ಸಮುದ್ರದ ಒಡಲು ಸೇರುವ ಪ್ಲಾಸ್ಟಿಕ್ ತ್ಯಾಜ್ಯವಾಗಿರಬಹುದು ಅಲ್ಲಿನ ಜೀವಿಗಳ ಹೊಟ್ಟೆ ಸೇರಿ ಅವುಗಳನ್ನೇ ಬಲಿಪಡೆಯುತ್ತಿವೆ.
ಪ್ಲಾಸ್ಟಿಕ್ ನಿಂದ ಇಷ್ಟೆಲ್ಲಾ ತೊಂದರೆಗಳಿವೆ ಎಂದು ತಿಳಿದಿದ್ದರೂ , ಬಳಕೆಗೆ ಸುಲಭವಾಗಿದೆ ಅನ್ನುವ ಕಾರಣಕ್ಕೆ ಪ್ಲಾಸ್ಟಿಕನ್ನು ನೆಚ್ಚಿಕೊಂಡಿರುವವರು ಹಲವರು. ಪ್ಲಾಸ್ಟಿಕ್ ಬಳಕೆ ಕಡಿಮೆಗೊಳಿಸುವಂತೆ ಸರ್ಕಾರಗಳು, ಸಂಘ ಸಂಸ್ಥೆಗಳು ಮನವಿ ಮಾಡಿದರೂ ಅದನ್ನು ಉಪಯೋಗಿಸುವ ನಾವುಗಳು ಅದರ ಬಳಕೆಯನ್ನು ಕಡಿಮೆ ಮಾಡದಿದ್ದಲ್ಲಿ ಇನ್ನಷ್ಟು ಅನಾಹುತಗಳನ್ನು ನಾವೇ ಮೈಮೇಲೆ ಎಳೆದುಕೊಳ್ಳಬೇಕಾಗುತ್ತದೆ.
ನಮಗಾಗಿ ಇಷ್ಟೆಲ್ಲಾ ಕೊಟ್ಟಿರುವ ಪ್ರಕೃತಿಯ ಉಳಿವಿಗೆ ನಮ್ಮಿಂದ ಸಣ್ಣ ಕೊಡಗೆಯನ್ನಾದರೂ ನೀಡೋಣ. ಈ ಮೂಲಕ ನಮಗಾಗಿ, ನಮ್ಮ ಮುಂದಿನ ಪೀಳಿಗೆಗಾಗಿ ಪರಿಸರ ಉಳಿಸಲು ಪಣ ತೊಡೋಣ. ಪ್ಲಾಸ್ಟಿಕ್ ಮುಕ್ತ ಪರಿಸರ ಅಭಿಯಾನಕ್ಕೆ ಕೈ ಜೋಡಿಸೋಣ.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…