ಹುಲಿಯೊಂದು ನೀರಿನಿಂದ ಪ್ಲಾಸ್ಟಿಕ್ ಬಾಟಲಿಯನ್ನು ಬಾಯಲ್ಲಿ ಕಚ್ಚಿ ಹೋಗುತ್ತಿರುವ ದೃಶ್ಯ ಮಾನವ ಕುಲ ನಾಚುವಂತೆ ಮಾಡಿದೆ.
ಆ ವಿಡಿಯೋ ತುಣುಕನ್ನ ಮಹಾರಾಷ್ಟ್ರ ಪ್ರವಾಸೋದ್ಯಮ ಇಲಾಖೆ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಸದ್ಯ ಈ ದೃಶ್ಯ ಫುಲ್ ವೈರಲ್ ಆಗಿದೆ. ಹುಲಿಯ ವರ್ತನೆಯಿಂದ ಮನುಷ್ಯ ಸಾಕಷ್ಟು ಕಲಿಯಬೇಕಿದೆ. ಈಗಲಾದರೂ ಪರಿಸರ ಬಗ್ಗೆ ಮನುಷ್ಯ ಕಾಳಜಿ ವಹಿಸಬೇಕಿದೆ.
ಪ್ರಕೃತಿಯ ವಿರುದ್ಧ ಮನುಷ್ಯರು ಹೋಗುತ್ತಿರುವ ರೀತಿ ಇಂದು ಪ್ರಾಕೃತಿಕ ವಿಕೋಪದ ಮೂಲಕ ಆತನನ್ನೇ ಬಲಿ ಪಡೆದುಕೊಳ್ಳುತ್ತಿದೆ. ತಾನೇ ತೋಡಿಕೊಂಡ ಹಳ್ಳಕ್ಕೆ ಬೀಳುವಂತಾಗಿದೆ ಮನುಷ್ಯನ ಪರಿಸ್ಥಿತಿ ನಿರ್ಮಾಣವಾಗಿದೆ.
ನಮ್ಮೆಲ್ಲರ ಬದುಕಿನಲ್ಲಿ ಹಾಸುಹೊಕ್ಕಾಗಿರುವ ‘ಪ್ಲಾಸ್ಟಿಕ್ ’ ಮಾಡುತ್ತಿರುವ ಅನಾಹುತ ಅಂತಿಂಥದ್ದಲ್ಲ. ಪರಿಸರ ಮಾತ್ರವಲ್ಲ ಮನುಷ್ಯರು, ಪ್ರಾಣಿಗಳ ಮೇಲೂ ಪ್ಲಾಸ್ಟಿಕ್ ದುಷ್ಪರಿಣಾಮ ಬೀರುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.
ಇನ್ನು ಮನುಷ್ಯನ ಜೊತೆಗೆ ಅದೆಷ್ಟೋ ಪ್ರಾಣಿಗಳು, ಜಲಚರಗಳು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತಿಂದು ಪ್ರಾಣ ಕಳೆದುಕೊಂಡಿವೆ. ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಬಿಸಾಡುವ ಪ್ಲಾಸ್ಟಿಕ್ ವಸ್ತುವಾಗಿರಬಹುದು, ಸಮುದ್ರದ ಒಡಲು ಸೇರುವ ಪ್ಲಾಸ್ಟಿಕ್ ತ್ಯಾಜ್ಯವಾಗಿರಬಹುದು ಅಲ್ಲಿನ ಜೀವಿಗಳ ಹೊಟ್ಟೆ ಸೇರಿ ಅವುಗಳನ್ನೇ ಬಲಿಪಡೆಯುತ್ತಿವೆ.
ಪ್ಲಾಸ್ಟಿಕ್ ನಿಂದ ಇಷ್ಟೆಲ್ಲಾ ತೊಂದರೆಗಳಿವೆ ಎಂದು ತಿಳಿದಿದ್ದರೂ , ಬಳಕೆಗೆ ಸುಲಭವಾಗಿದೆ ಅನ್ನುವ ಕಾರಣಕ್ಕೆ ಪ್ಲಾಸ್ಟಿಕನ್ನು ನೆಚ್ಚಿಕೊಂಡಿರುವವರು ಹಲವರು. ಪ್ಲಾಸ್ಟಿಕ್ ಬಳಕೆ ಕಡಿಮೆಗೊಳಿಸುವಂತೆ ಸರ್ಕಾರಗಳು, ಸಂಘ ಸಂಸ್ಥೆಗಳು ಮನವಿ ಮಾಡಿದರೂ ಅದನ್ನು ಉಪಯೋಗಿಸುವ ನಾವುಗಳು ಅದರ ಬಳಕೆಯನ್ನು ಕಡಿಮೆ ಮಾಡದಿದ್ದಲ್ಲಿ ಇನ್ನಷ್ಟು ಅನಾಹುತಗಳನ್ನು ನಾವೇ ಮೈಮೇಲೆ ಎಳೆದುಕೊಳ್ಳಬೇಕಾಗುತ್ತದೆ.
ನಮಗಾಗಿ ಇಷ್ಟೆಲ್ಲಾ ಕೊಟ್ಟಿರುವ ಪ್ರಕೃತಿಯ ಉಳಿವಿಗೆ ನಮ್ಮಿಂದ ಸಣ್ಣ ಕೊಡಗೆಯನ್ನಾದರೂ ನೀಡೋಣ. ಈ ಮೂಲಕ ನಮಗಾಗಿ, ನಮ್ಮ ಮುಂದಿನ ಪೀಳಿಗೆಗಾಗಿ ಪರಿಸರ ಉಳಿಸಲು ಪಣ ತೊಡೋಣ. ಪ್ಲಾಸ್ಟಿಕ್ ಮುಕ್ತ ಪರಿಸರ ಅಭಿಯಾನಕ್ಕೆ ಕೈ ಜೋಡಿಸೋಣ.
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…
ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…
2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…