ಹುಲಿಯೊಂದು ನೀರಿನಿಂದ ಪ್ಲಾಸ್ಟಿಕ್ ಬಾಟಲಿಯನ್ನು ಬಾಯಲ್ಲಿ ಕಚ್ಚಿ ಹೋಗುತ್ತಿರುವ ದೃಶ್ಯ ಮಾನವ ಕುಲ ನಾಚುವಂತೆ ಮಾಡಿದೆ.
ಆ ವಿಡಿಯೋ ತುಣುಕನ್ನ ಮಹಾರಾಷ್ಟ್ರ ಪ್ರವಾಸೋದ್ಯಮ ಇಲಾಖೆ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಸದ್ಯ ಈ ದೃಶ್ಯ ಫುಲ್ ವೈರಲ್ ಆಗಿದೆ. ಹುಲಿಯ ವರ್ತನೆಯಿಂದ ಮನುಷ್ಯ ಸಾಕಷ್ಟು ಕಲಿಯಬೇಕಿದೆ. ಈಗಲಾದರೂ ಪರಿಸರ ಬಗ್ಗೆ ಮನುಷ್ಯ ಕಾಳಜಿ ವಹಿಸಬೇಕಿದೆ.
ಪ್ರಕೃತಿಯ ವಿರುದ್ಧ ಮನುಷ್ಯರು ಹೋಗುತ್ತಿರುವ ರೀತಿ ಇಂದು ಪ್ರಾಕೃತಿಕ ವಿಕೋಪದ ಮೂಲಕ ಆತನನ್ನೇ ಬಲಿ ಪಡೆದುಕೊಳ್ಳುತ್ತಿದೆ. ತಾನೇ ತೋಡಿಕೊಂಡ ಹಳ್ಳಕ್ಕೆ ಬೀಳುವಂತಾಗಿದೆ ಮನುಷ್ಯನ ಪರಿಸ್ಥಿತಿ ನಿರ್ಮಾಣವಾಗಿದೆ.
ನಮ್ಮೆಲ್ಲರ ಬದುಕಿನಲ್ಲಿ ಹಾಸುಹೊಕ್ಕಾಗಿರುವ ‘ಪ್ಲಾಸ್ಟಿಕ್ ’ ಮಾಡುತ್ತಿರುವ ಅನಾಹುತ ಅಂತಿಂಥದ್ದಲ್ಲ. ಪರಿಸರ ಮಾತ್ರವಲ್ಲ ಮನುಷ್ಯರು, ಪ್ರಾಣಿಗಳ ಮೇಲೂ ಪ್ಲಾಸ್ಟಿಕ್ ದುಷ್ಪರಿಣಾಮ ಬೀರುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.
ಇನ್ನು ಮನುಷ್ಯನ ಜೊತೆಗೆ ಅದೆಷ್ಟೋ ಪ್ರಾಣಿಗಳು, ಜಲಚರಗಳು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತಿಂದು ಪ್ರಾಣ ಕಳೆದುಕೊಂಡಿವೆ. ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಬಿಸಾಡುವ ಪ್ಲಾಸ್ಟಿಕ್ ವಸ್ತುವಾಗಿರಬಹುದು, ಸಮುದ್ರದ ಒಡಲು ಸೇರುವ ಪ್ಲಾಸ್ಟಿಕ್ ತ್ಯಾಜ್ಯವಾಗಿರಬಹುದು ಅಲ್ಲಿನ ಜೀವಿಗಳ ಹೊಟ್ಟೆ ಸೇರಿ ಅವುಗಳನ್ನೇ ಬಲಿಪಡೆಯುತ್ತಿವೆ.
ಪ್ಲಾಸ್ಟಿಕ್ ನಿಂದ ಇಷ್ಟೆಲ್ಲಾ ತೊಂದರೆಗಳಿವೆ ಎಂದು ತಿಳಿದಿದ್ದರೂ , ಬಳಕೆಗೆ ಸುಲಭವಾಗಿದೆ ಅನ್ನುವ ಕಾರಣಕ್ಕೆ ಪ್ಲಾಸ್ಟಿಕನ್ನು ನೆಚ್ಚಿಕೊಂಡಿರುವವರು ಹಲವರು. ಪ್ಲಾಸ್ಟಿಕ್ ಬಳಕೆ ಕಡಿಮೆಗೊಳಿಸುವಂತೆ ಸರ್ಕಾರಗಳು, ಸಂಘ ಸಂಸ್ಥೆಗಳು ಮನವಿ ಮಾಡಿದರೂ ಅದನ್ನು ಉಪಯೋಗಿಸುವ ನಾವುಗಳು ಅದರ ಬಳಕೆಯನ್ನು ಕಡಿಮೆ ಮಾಡದಿದ್ದಲ್ಲಿ ಇನ್ನಷ್ಟು ಅನಾಹುತಗಳನ್ನು ನಾವೇ ಮೈಮೇಲೆ ಎಳೆದುಕೊಳ್ಳಬೇಕಾಗುತ್ತದೆ.
ನಮಗಾಗಿ ಇಷ್ಟೆಲ್ಲಾ ಕೊಟ್ಟಿರುವ ಪ್ರಕೃತಿಯ ಉಳಿವಿಗೆ ನಮ್ಮಿಂದ ಸಣ್ಣ ಕೊಡಗೆಯನ್ನಾದರೂ ನೀಡೋಣ. ಈ ಮೂಲಕ ನಮಗಾಗಿ, ನಮ್ಮ ಮುಂದಿನ ಪೀಳಿಗೆಗಾಗಿ ಪರಿಸರ ಉಳಿಸಲು ಪಣ ತೊಡೋಣ. ಪ್ಲಾಸ್ಟಿಕ್ ಮುಕ್ತ ಪರಿಸರ ಅಭಿಯಾನಕ್ಕೆ ಕೈ ಜೋಡಿಸೋಣ.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…