ಹುಲಿಯೊಂದು ನೀರಿನಿಂದ ಪ್ಲಾಸ್ಟಿಕ್ ಬಾಟಲಿಯನ್ನು ಬಾಯಲ್ಲಿ ಕಚ್ಚಿ ಹೋಗುತ್ತಿರುವ ದೃಶ್ಯ ಮಾನವ ಕುಲ ನಾಚುವಂತೆ ಮಾಡಿದೆ.
ಆ ವಿಡಿಯೋ ತುಣುಕನ್ನ ಮಹಾರಾಷ್ಟ್ರ ಪ್ರವಾಸೋದ್ಯಮ ಇಲಾಖೆ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಸದ್ಯ ಈ ದೃಶ್ಯ ಫುಲ್ ವೈರಲ್ ಆಗಿದೆ. ಹುಲಿಯ ವರ್ತನೆಯಿಂದ ಮನುಷ್ಯ ಸಾಕಷ್ಟು ಕಲಿಯಬೇಕಿದೆ. ಈಗಲಾದರೂ ಪರಿಸರ ಬಗ್ಗೆ ಮನುಷ್ಯ ಕಾಳಜಿ ವಹಿಸಬೇಕಿದೆ.
ಪ್ರಕೃತಿಯ ವಿರುದ್ಧ ಮನುಷ್ಯರು ಹೋಗುತ್ತಿರುವ ರೀತಿ ಇಂದು ಪ್ರಾಕೃತಿಕ ವಿಕೋಪದ ಮೂಲಕ ಆತನನ್ನೇ ಬಲಿ ಪಡೆದುಕೊಳ್ಳುತ್ತಿದೆ. ತಾನೇ ತೋಡಿಕೊಂಡ ಹಳ್ಳಕ್ಕೆ ಬೀಳುವಂತಾಗಿದೆ ಮನುಷ್ಯನ ಪರಿಸ್ಥಿತಿ ನಿರ್ಮಾಣವಾಗಿದೆ.
ನಮ್ಮೆಲ್ಲರ ಬದುಕಿನಲ್ಲಿ ಹಾಸುಹೊಕ್ಕಾಗಿರುವ ‘ಪ್ಲಾಸ್ಟಿಕ್ ’ ಮಾಡುತ್ತಿರುವ ಅನಾಹುತ ಅಂತಿಂಥದ್ದಲ್ಲ. ಪರಿಸರ ಮಾತ್ರವಲ್ಲ ಮನುಷ್ಯರು, ಪ್ರಾಣಿಗಳ ಮೇಲೂ ಪ್ಲಾಸ್ಟಿಕ್ ದುಷ್ಪರಿಣಾಮ ಬೀರುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.
ಇನ್ನು ಮನುಷ್ಯನ ಜೊತೆಗೆ ಅದೆಷ್ಟೋ ಪ್ರಾಣಿಗಳು, ಜಲಚರಗಳು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತಿಂದು ಪ್ರಾಣ ಕಳೆದುಕೊಂಡಿವೆ. ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಬಿಸಾಡುವ ಪ್ಲಾಸ್ಟಿಕ್ ವಸ್ತುವಾಗಿರಬಹುದು, ಸಮುದ್ರದ ಒಡಲು ಸೇರುವ ಪ್ಲಾಸ್ಟಿಕ್ ತ್ಯಾಜ್ಯವಾಗಿರಬಹುದು ಅಲ್ಲಿನ ಜೀವಿಗಳ ಹೊಟ್ಟೆ ಸೇರಿ ಅವುಗಳನ್ನೇ ಬಲಿಪಡೆಯುತ್ತಿವೆ.
ಪ್ಲಾಸ್ಟಿಕ್ ನಿಂದ ಇಷ್ಟೆಲ್ಲಾ ತೊಂದರೆಗಳಿವೆ ಎಂದು ತಿಳಿದಿದ್ದರೂ , ಬಳಕೆಗೆ ಸುಲಭವಾಗಿದೆ ಅನ್ನುವ ಕಾರಣಕ್ಕೆ ಪ್ಲಾಸ್ಟಿಕನ್ನು ನೆಚ್ಚಿಕೊಂಡಿರುವವರು ಹಲವರು. ಪ್ಲಾಸ್ಟಿಕ್ ಬಳಕೆ ಕಡಿಮೆಗೊಳಿಸುವಂತೆ ಸರ್ಕಾರಗಳು, ಸಂಘ ಸಂಸ್ಥೆಗಳು ಮನವಿ ಮಾಡಿದರೂ ಅದನ್ನು ಉಪಯೋಗಿಸುವ ನಾವುಗಳು ಅದರ ಬಳಕೆಯನ್ನು ಕಡಿಮೆ ಮಾಡದಿದ್ದಲ್ಲಿ ಇನ್ನಷ್ಟು ಅನಾಹುತಗಳನ್ನು ನಾವೇ ಮೈಮೇಲೆ ಎಳೆದುಕೊಳ್ಳಬೇಕಾಗುತ್ತದೆ.
ನಮಗಾಗಿ ಇಷ್ಟೆಲ್ಲಾ ಕೊಟ್ಟಿರುವ ಪ್ರಕೃತಿಯ ಉಳಿವಿಗೆ ನಮ್ಮಿಂದ ಸಣ್ಣ ಕೊಡಗೆಯನ್ನಾದರೂ ನೀಡೋಣ. ಈ ಮೂಲಕ ನಮಗಾಗಿ, ನಮ್ಮ ಮುಂದಿನ ಪೀಳಿಗೆಗಾಗಿ ಪರಿಸರ ಉಳಿಸಲು ಪಣ ತೊಡೋಣ. ಪ್ಲಾಸ್ಟಿಕ್ ಮುಕ್ತ ಪರಿಸರ ಅಭಿಯಾನಕ್ಕೆ ಕೈ ಜೋಡಿಸೋಣ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…