ಹುಲಿಯೊಂದು ನೀರಿನಿಂದ ಪ್ಲಾಸ್ಟಿಕ್ ಬಾಟಲಿಯನ್ನು ಬಾಯಲ್ಲಿ ಕಚ್ಚಿ ಹೋಗುತ್ತಿರುವ ದೃಶ್ಯ ಮಾನವ ಕುಲ ನಾಚುವಂತೆ ಮಾಡಿದೆ.
ಆ ವಿಡಿಯೋ ತುಣುಕನ್ನ ಮಹಾರಾಷ್ಟ್ರ ಪ್ರವಾಸೋದ್ಯಮ ಇಲಾಖೆ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಸದ್ಯ ಈ ದೃಶ್ಯ ಫುಲ್ ವೈರಲ್ ಆಗಿದೆ. ಹುಲಿಯ ವರ್ತನೆಯಿಂದ ಮನುಷ್ಯ ಸಾಕಷ್ಟು ಕಲಿಯಬೇಕಿದೆ. ಈಗಲಾದರೂ ಪರಿಸರ ಬಗ್ಗೆ ಮನುಷ್ಯ ಕಾಳಜಿ ವಹಿಸಬೇಕಿದೆ.
ಪ್ರಕೃತಿಯ ವಿರುದ್ಧ ಮನುಷ್ಯರು ಹೋಗುತ್ತಿರುವ ರೀತಿ ಇಂದು ಪ್ರಾಕೃತಿಕ ವಿಕೋಪದ ಮೂಲಕ ಆತನನ್ನೇ ಬಲಿ ಪಡೆದುಕೊಳ್ಳುತ್ತಿದೆ. ತಾನೇ ತೋಡಿಕೊಂಡ ಹಳ್ಳಕ್ಕೆ ಬೀಳುವಂತಾಗಿದೆ ಮನುಷ್ಯನ ಪರಿಸ್ಥಿತಿ ನಿರ್ಮಾಣವಾಗಿದೆ.
ನಮ್ಮೆಲ್ಲರ ಬದುಕಿನಲ್ಲಿ ಹಾಸುಹೊಕ್ಕಾಗಿರುವ ‘ಪ್ಲಾಸ್ಟಿಕ್ ’ ಮಾಡುತ್ತಿರುವ ಅನಾಹುತ ಅಂತಿಂಥದ್ದಲ್ಲ. ಪರಿಸರ ಮಾತ್ರವಲ್ಲ ಮನುಷ್ಯರು, ಪ್ರಾಣಿಗಳ ಮೇಲೂ ಪ್ಲಾಸ್ಟಿಕ್ ದುಷ್ಪರಿಣಾಮ ಬೀರುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.
ಇನ್ನು ಮನುಷ್ಯನ ಜೊತೆಗೆ ಅದೆಷ್ಟೋ ಪ್ರಾಣಿಗಳು, ಜಲಚರಗಳು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತಿಂದು ಪ್ರಾಣ ಕಳೆದುಕೊಂಡಿವೆ. ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಬಿಸಾಡುವ ಪ್ಲಾಸ್ಟಿಕ್ ವಸ್ತುವಾಗಿರಬಹುದು, ಸಮುದ್ರದ ಒಡಲು ಸೇರುವ ಪ್ಲಾಸ್ಟಿಕ್ ತ್ಯಾಜ್ಯವಾಗಿರಬಹುದು ಅಲ್ಲಿನ ಜೀವಿಗಳ ಹೊಟ್ಟೆ ಸೇರಿ ಅವುಗಳನ್ನೇ ಬಲಿಪಡೆಯುತ್ತಿವೆ.
ಪ್ಲಾಸ್ಟಿಕ್ ನಿಂದ ಇಷ್ಟೆಲ್ಲಾ ತೊಂದರೆಗಳಿವೆ ಎಂದು ತಿಳಿದಿದ್ದರೂ , ಬಳಕೆಗೆ ಸುಲಭವಾಗಿದೆ ಅನ್ನುವ ಕಾರಣಕ್ಕೆ ಪ್ಲಾಸ್ಟಿಕನ್ನು ನೆಚ್ಚಿಕೊಂಡಿರುವವರು ಹಲವರು. ಪ್ಲಾಸ್ಟಿಕ್ ಬಳಕೆ ಕಡಿಮೆಗೊಳಿಸುವಂತೆ ಸರ್ಕಾರಗಳು, ಸಂಘ ಸಂಸ್ಥೆಗಳು ಮನವಿ ಮಾಡಿದರೂ ಅದನ್ನು ಉಪಯೋಗಿಸುವ ನಾವುಗಳು ಅದರ ಬಳಕೆಯನ್ನು ಕಡಿಮೆ ಮಾಡದಿದ್ದಲ್ಲಿ ಇನ್ನಷ್ಟು ಅನಾಹುತಗಳನ್ನು ನಾವೇ ಮೈಮೇಲೆ ಎಳೆದುಕೊಳ್ಳಬೇಕಾಗುತ್ತದೆ.
ನಮಗಾಗಿ ಇಷ್ಟೆಲ್ಲಾ ಕೊಟ್ಟಿರುವ ಪ್ರಕೃತಿಯ ಉಳಿವಿಗೆ ನಮ್ಮಿಂದ ಸಣ್ಣ ಕೊಡಗೆಯನ್ನಾದರೂ ನೀಡೋಣ. ಈ ಮೂಲಕ ನಮಗಾಗಿ, ನಮ್ಮ ಮುಂದಿನ ಪೀಳಿಗೆಗಾಗಿ ಪರಿಸರ ಉಳಿಸಲು ಪಣ ತೊಡೋಣ. ಪ್ಲಾಸ್ಟಿಕ್ ಮುಕ್ತ ಪರಿಸರ ಅಭಿಯಾನಕ್ಕೆ ಕೈ ಜೋಡಿಸೋಣ.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…