ಹುಲಿಯೊಂದು ನೀರಿನಿಂದ ಪ್ಲಾಸ್ಟಿಕ್ ಬಾಟಲಿಯನ್ನು ಬಾಯಲ್ಲಿ ಕಚ್ಚಿ ಹೋಗುತ್ತಿರುವ ದೃಶ್ಯ ಮಾನವ ಕುಲ ನಾಚುವಂತೆ ಮಾಡಿದೆ.
ಆ ವಿಡಿಯೋ ತುಣುಕನ್ನ ಮಹಾರಾಷ್ಟ್ರ ಪ್ರವಾಸೋದ್ಯಮ ಇಲಾಖೆ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಸದ್ಯ ಈ ದೃಶ್ಯ ಫುಲ್ ವೈರಲ್ ಆಗಿದೆ. ಹುಲಿಯ ವರ್ತನೆಯಿಂದ ಮನುಷ್ಯ ಸಾಕಷ್ಟು ಕಲಿಯಬೇಕಿದೆ. ಈಗಲಾದರೂ ಪರಿಸರ ಬಗ್ಗೆ ಮನುಷ್ಯ ಕಾಳಜಿ ವಹಿಸಬೇಕಿದೆ.
ಪ್ರಕೃತಿಯ ವಿರುದ್ಧ ಮನುಷ್ಯರು ಹೋಗುತ್ತಿರುವ ರೀತಿ ಇಂದು ಪ್ರಾಕೃತಿಕ ವಿಕೋಪದ ಮೂಲಕ ಆತನನ್ನೇ ಬಲಿ ಪಡೆದುಕೊಳ್ಳುತ್ತಿದೆ. ತಾನೇ ತೋಡಿಕೊಂಡ ಹಳ್ಳಕ್ಕೆ ಬೀಳುವಂತಾಗಿದೆ ಮನುಷ್ಯನ ಪರಿಸ್ಥಿತಿ ನಿರ್ಮಾಣವಾಗಿದೆ.
ನಮ್ಮೆಲ್ಲರ ಬದುಕಿನಲ್ಲಿ ಹಾಸುಹೊಕ್ಕಾಗಿರುವ ‘ಪ್ಲಾಸ್ಟಿಕ್ ’ ಮಾಡುತ್ತಿರುವ ಅನಾಹುತ ಅಂತಿಂಥದ್ದಲ್ಲ. ಪರಿಸರ ಮಾತ್ರವಲ್ಲ ಮನುಷ್ಯರು, ಪ್ರಾಣಿಗಳ ಮೇಲೂ ಪ್ಲಾಸ್ಟಿಕ್ ದುಷ್ಪರಿಣಾಮ ಬೀರುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.
ಇನ್ನು ಮನುಷ್ಯನ ಜೊತೆಗೆ ಅದೆಷ್ಟೋ ಪ್ರಾಣಿಗಳು, ಜಲಚರಗಳು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತಿಂದು ಪ್ರಾಣ ಕಳೆದುಕೊಂಡಿವೆ. ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಬಿಸಾಡುವ ಪ್ಲಾಸ್ಟಿಕ್ ವಸ್ತುವಾಗಿರಬಹುದು, ಸಮುದ್ರದ ಒಡಲು ಸೇರುವ ಪ್ಲಾಸ್ಟಿಕ್ ತ್ಯಾಜ್ಯವಾಗಿರಬಹುದು ಅಲ್ಲಿನ ಜೀವಿಗಳ ಹೊಟ್ಟೆ ಸೇರಿ ಅವುಗಳನ್ನೇ ಬಲಿಪಡೆಯುತ್ತಿವೆ.
ಪ್ಲಾಸ್ಟಿಕ್ ನಿಂದ ಇಷ್ಟೆಲ್ಲಾ ತೊಂದರೆಗಳಿವೆ ಎಂದು ತಿಳಿದಿದ್ದರೂ , ಬಳಕೆಗೆ ಸುಲಭವಾಗಿದೆ ಅನ್ನುವ ಕಾರಣಕ್ಕೆ ಪ್ಲಾಸ್ಟಿಕನ್ನು ನೆಚ್ಚಿಕೊಂಡಿರುವವರು ಹಲವರು. ಪ್ಲಾಸ್ಟಿಕ್ ಬಳಕೆ ಕಡಿಮೆಗೊಳಿಸುವಂತೆ ಸರ್ಕಾರಗಳು, ಸಂಘ ಸಂಸ್ಥೆಗಳು ಮನವಿ ಮಾಡಿದರೂ ಅದನ್ನು ಉಪಯೋಗಿಸುವ ನಾವುಗಳು ಅದರ ಬಳಕೆಯನ್ನು ಕಡಿಮೆ ಮಾಡದಿದ್ದಲ್ಲಿ ಇನ್ನಷ್ಟು ಅನಾಹುತಗಳನ್ನು ನಾವೇ ಮೈಮೇಲೆ ಎಳೆದುಕೊಳ್ಳಬೇಕಾಗುತ್ತದೆ.
ನಮಗಾಗಿ ಇಷ್ಟೆಲ್ಲಾ ಕೊಟ್ಟಿರುವ ಪ್ರಕೃತಿಯ ಉಳಿವಿಗೆ ನಮ್ಮಿಂದ ಸಣ್ಣ ಕೊಡಗೆಯನ್ನಾದರೂ ನೀಡೋಣ. ಈ ಮೂಲಕ ನಮಗಾಗಿ, ನಮ್ಮ ಮುಂದಿನ ಪೀಳಿಗೆಗಾಗಿ ಪರಿಸರ ಉಳಿಸಲು ಪಣ ತೊಡೋಣ. ಪ್ಲಾಸ್ಟಿಕ್ ಮುಕ್ತ ಪರಿಸರ ಅಭಿಯಾನಕ್ಕೆ ಕೈ ಜೋಡಿಸೋಣ.
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…