ಹುಲಿಯೊಂದು ನೀರಿನಿಂದ ಪ್ಲಾಸ್ಟಿಕ್ ಬಾಟಲಿಯನ್ನು ಬಾಯಲ್ಲಿ ಕಚ್ಚಿ ಹೋಗುತ್ತಿರುವ ದೃಶ್ಯ ಮಾನವ ಕುಲ ನಾಚುವಂತೆ ಮಾಡಿದೆ.
ಆ ವಿಡಿಯೋ ತುಣುಕನ್ನ ಮಹಾರಾಷ್ಟ್ರ ಪ್ರವಾಸೋದ್ಯಮ ಇಲಾಖೆ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಸದ್ಯ ಈ ದೃಶ್ಯ ಫುಲ್ ವೈರಲ್ ಆಗಿದೆ. ಹುಲಿಯ ವರ್ತನೆಯಿಂದ ಮನುಷ್ಯ ಸಾಕಷ್ಟು ಕಲಿಯಬೇಕಿದೆ. ಈಗಲಾದರೂ ಪರಿಸರ ಬಗ್ಗೆ ಮನುಷ್ಯ ಕಾಳಜಿ ವಹಿಸಬೇಕಿದೆ.
ಪ್ರಕೃತಿಯ ವಿರುದ್ಧ ಮನುಷ್ಯರು ಹೋಗುತ್ತಿರುವ ರೀತಿ ಇಂದು ಪ್ರಾಕೃತಿಕ ವಿಕೋಪದ ಮೂಲಕ ಆತನನ್ನೇ ಬಲಿ ಪಡೆದುಕೊಳ್ಳುತ್ತಿದೆ. ತಾನೇ ತೋಡಿಕೊಂಡ ಹಳ್ಳಕ್ಕೆ ಬೀಳುವಂತಾಗಿದೆ ಮನುಷ್ಯನ ಪರಿಸ್ಥಿತಿ ನಿರ್ಮಾಣವಾಗಿದೆ.
ನಮ್ಮೆಲ್ಲರ ಬದುಕಿನಲ್ಲಿ ಹಾಸುಹೊಕ್ಕಾಗಿರುವ ‘ಪ್ಲಾಸ್ಟಿಕ್ ’ ಮಾಡುತ್ತಿರುವ ಅನಾಹುತ ಅಂತಿಂಥದ್ದಲ್ಲ. ಪರಿಸರ ಮಾತ್ರವಲ್ಲ ಮನುಷ್ಯರು, ಪ್ರಾಣಿಗಳ ಮೇಲೂ ಪ್ಲಾಸ್ಟಿಕ್ ದುಷ್ಪರಿಣಾಮ ಬೀರುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.
ಇನ್ನು ಮನುಷ್ಯನ ಜೊತೆಗೆ ಅದೆಷ್ಟೋ ಪ್ರಾಣಿಗಳು, ಜಲಚರಗಳು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತಿಂದು ಪ್ರಾಣ ಕಳೆದುಕೊಂಡಿವೆ. ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಬಿಸಾಡುವ ಪ್ಲಾಸ್ಟಿಕ್ ವಸ್ತುವಾಗಿರಬಹುದು, ಸಮುದ್ರದ ಒಡಲು ಸೇರುವ ಪ್ಲಾಸ್ಟಿಕ್ ತ್ಯಾಜ್ಯವಾಗಿರಬಹುದು ಅಲ್ಲಿನ ಜೀವಿಗಳ ಹೊಟ್ಟೆ ಸೇರಿ ಅವುಗಳನ್ನೇ ಬಲಿಪಡೆಯುತ್ತಿವೆ.
ಪ್ಲಾಸ್ಟಿಕ್ ನಿಂದ ಇಷ್ಟೆಲ್ಲಾ ತೊಂದರೆಗಳಿವೆ ಎಂದು ತಿಳಿದಿದ್ದರೂ , ಬಳಕೆಗೆ ಸುಲಭವಾಗಿದೆ ಅನ್ನುವ ಕಾರಣಕ್ಕೆ ಪ್ಲಾಸ್ಟಿಕನ್ನು ನೆಚ್ಚಿಕೊಂಡಿರುವವರು ಹಲವರು. ಪ್ಲಾಸ್ಟಿಕ್ ಬಳಕೆ ಕಡಿಮೆಗೊಳಿಸುವಂತೆ ಸರ್ಕಾರಗಳು, ಸಂಘ ಸಂಸ್ಥೆಗಳು ಮನವಿ ಮಾಡಿದರೂ ಅದನ್ನು ಉಪಯೋಗಿಸುವ ನಾವುಗಳು ಅದರ ಬಳಕೆಯನ್ನು ಕಡಿಮೆ ಮಾಡದಿದ್ದಲ್ಲಿ ಇನ್ನಷ್ಟು ಅನಾಹುತಗಳನ್ನು ನಾವೇ ಮೈಮೇಲೆ ಎಳೆದುಕೊಳ್ಳಬೇಕಾಗುತ್ತದೆ.
ನಮಗಾಗಿ ಇಷ್ಟೆಲ್ಲಾ ಕೊಟ್ಟಿರುವ ಪ್ರಕೃತಿಯ ಉಳಿವಿಗೆ ನಮ್ಮಿಂದ ಸಣ್ಣ ಕೊಡಗೆಯನ್ನಾದರೂ ನೀಡೋಣ. ಈ ಮೂಲಕ ನಮಗಾಗಿ, ನಮ್ಮ ಮುಂದಿನ ಪೀಳಿಗೆಗಾಗಿ ಪರಿಸರ ಉಳಿಸಲು ಪಣ ತೊಡೋಣ. ಪ್ಲಾಸ್ಟಿಕ್ ಮುಕ್ತ ಪರಿಸರ ಅಭಿಯಾನಕ್ಕೆ ಕೈ ಜೋಡಿಸೋಣ.
ರಾತ್ರಿ 8 - 30 ರ ಸಮಯ....... ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಿನ್ನೆ ರಾತ್ರಿ 8.30 ರ…
ಬೆಂಗಳೂರು ಗ್ರಾಮಾಂತರ ಜಿ.ಪಂ ನೂತನ ಸಿ.ಇ.ಒ ಆಗಿ ಡಾ.ವಸಂತಿ ಅಮರ್ ಬಿ.ವಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.19 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F02-Raghunathapura, F07-Locall, F14-Scoutcamp & F21-KVN…
ಏಪ್ರಿಲ್ 20 ರಂದು ಬಸವ ಜಯಂತಿ ಮತ್ತು ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಬಾಲ್ಯವಿವಾಹಗಳು ಆಗುವ ಸಾಧ್ಯತೆ ಇದ್ದು, ಬಾಲ್ಯ ವಿವಾಹಗಳನ್ನು…
ಬಿಲ್ ಕಲೆಕ್ಟರ್ ಲೋಕಾ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.. ಲೋಕಾ ಬಲೆಗೆ ಬಿದ್ದ ಬಿಲ್ ಕಲೆಕ್ಟರ್ 'ಇ' ಖಾತೆ…
ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಚಾಲಕ ಸಾವನ್ನಪ್ಪಿರುವ ಘಟನೆ ದಾಬಸ್ ಪೇಟೆ - ಹೊಸಕೋಟೆ…