ಗೌರಿಬಿದನೂರು : ಇ-ಖಾತೆ ಮಾಡಿಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನಿಂದ 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಇಲ್ಲಿನ ನಗರಸಭೆ ಕಂದಾಯ ಅಧಿಕಾರಿ ಹಾಗೂ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ನಗರಸಭೆಯ ಕಂದಾಯ ಅಧಿಕಾರಿ ನಾರಾಯಣ್ ಹಾಗೂ ಬಿಲ್ ಕಲೆಕ್ಟರ್ ಎಂದು ಹೇಳಿಕೊಂಡಿದ್ದ ಕೃಷ್ಣಮೂರ್ತಿ ಲೋಕಾಯುಕ್ತರ ಬಲೆಗೆ ಬಿದ್ದವರು.
ವೇದಲವೇಣಿ ಗ್ರಾಮ ನಗರಸಭೆ ವ್ಯಾಪ್ತಿಗೆ ಸೇರಿದ್ದು, ವೇದಲವೇಣಿ ಗ್ರಾಮ ವ್ಯಾಪ್ತಿಯಲ್ಲಿರುವ ತಮ್ಮ ತಾಯಿ ಹಾಗೂ ಸಹೋದರಿಯರ ಜಮೀನಿಗೆ ಇ-ಖಾತೆ ಮಾಡಿಕೊಂಡುವಂತೆ ನಗರದ ಹೊರವಲಯದ ಸಿರಗುಪ್ಪ ಸಕ್ಕರೆ ಕಾರ್ಖಾನೆ ಬಳಿಯ ವಾಸಿ ಜುಲ್ಫಿಕರ್ ಎಂಬುವರು ನಗರಸಭೆಗೆ ಮನವಿ ಸಲ್ಲಿಸಿದ್ದರು.
ಒಟ್ಟು 6 ಖಾತೆಗಳನ್ನು ಮಾಡಿಕೊಂಡುವಂತೆ ಅರ್ಜಿ ಸಲ್ಲಿಸಿದ್ದರು. 6 ಖಾತೆ ಮಾಡಿಕೊಡಲು ಪ್ರತಿ ಖಾತೆಗೆ ತಲಾ 10 ಸಾವಿರದಂತೆ 60 ಸಾವಿರ ರೂ. ಲಂಚ ನೀಡುವಂತೆ ನಗರಸಭೆ ಕಂದಾಯ ಅಧಿಕಾರಿ ನಾರಾಯಣ್ ಬೇಡಿಕೆ ಇಟ್ಟಿದ್ದರು. ತಾನು ಬಿಲ್ ಕಲೆಕ್ಟರ್ ಎಂದು ಹೇಳಿಕೊಳ್ಳುವ ವಾಟರ್ ಮನ್ ಕೃಷ್ಣಮೂರ್ತಿ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದರು. ಅಂತಿಮವಾಗಿ 50 ಸಾವಿರಕ್ಕೆ ಒಪ್ಪಿಕೊಳ್ಳಲಾಗಿತ್ತು.
ಲಂಚಕ್ಕೆ ಬೇಡಿಕೆಯಿಟ್ಟಿರುವ ಬಗ್ಗೆ ಅರ್ಜಿದಾರ ಜುಲ್ಫಿಕರ್ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.
ಮೊದಲೇ ರೂಪಿಸಿದ್ದ ಯೋಜನೆಯಂತೆ 15 ಸಾವಿರ ರೂ. ಮುಂಗಡ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ನಾರಾಯಣ್ ಹಾಗೂ ಕೃಷ್ಣಮೂರ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಲೋಕಾಯುಕ್ತ ಎಸ್.ಪಿ ಆಂಥೋನಿ ದಾಸ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ವೀರೇಂದ್ರ ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿತು.
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…
ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…
ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…
ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ…