ಗೌರಿಬಿದನೂರು : ಇ-ಖಾತೆ ಮಾಡಿಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನಿಂದ 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಇಲ್ಲಿನ ನಗರಸಭೆ ಕಂದಾಯ ಅಧಿಕಾರಿ ಹಾಗೂ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ನಗರಸಭೆಯ ಕಂದಾಯ ಅಧಿಕಾರಿ ನಾರಾಯಣ್ ಹಾಗೂ ಬಿಲ್ ಕಲೆಕ್ಟರ್ ಎಂದು ಹೇಳಿಕೊಂಡಿದ್ದ ಕೃಷ್ಣಮೂರ್ತಿ ಲೋಕಾಯುಕ್ತರ ಬಲೆಗೆ ಬಿದ್ದವರು.
ವೇದಲವೇಣಿ ಗ್ರಾಮ ನಗರಸಭೆ ವ್ಯಾಪ್ತಿಗೆ ಸೇರಿದ್ದು, ವೇದಲವೇಣಿ ಗ್ರಾಮ ವ್ಯಾಪ್ತಿಯಲ್ಲಿರುವ ತಮ್ಮ ತಾಯಿ ಹಾಗೂ ಸಹೋದರಿಯರ ಜಮೀನಿಗೆ ಇ-ಖಾತೆ ಮಾಡಿಕೊಂಡುವಂತೆ ನಗರದ ಹೊರವಲಯದ ಸಿರಗುಪ್ಪ ಸಕ್ಕರೆ ಕಾರ್ಖಾನೆ ಬಳಿಯ ವಾಸಿ ಜುಲ್ಫಿಕರ್ ಎಂಬುವರು ನಗರಸಭೆಗೆ ಮನವಿ ಸಲ್ಲಿಸಿದ್ದರು.
ಒಟ್ಟು 6 ಖಾತೆಗಳನ್ನು ಮಾಡಿಕೊಂಡುವಂತೆ ಅರ್ಜಿ ಸಲ್ಲಿಸಿದ್ದರು. 6 ಖಾತೆ ಮಾಡಿಕೊಡಲು ಪ್ರತಿ ಖಾತೆಗೆ ತಲಾ 10 ಸಾವಿರದಂತೆ 60 ಸಾವಿರ ರೂ. ಲಂಚ ನೀಡುವಂತೆ ನಗರಸಭೆ ಕಂದಾಯ ಅಧಿಕಾರಿ ನಾರಾಯಣ್ ಬೇಡಿಕೆ ಇಟ್ಟಿದ್ದರು. ತಾನು ಬಿಲ್ ಕಲೆಕ್ಟರ್ ಎಂದು ಹೇಳಿಕೊಳ್ಳುವ ವಾಟರ್ ಮನ್ ಕೃಷ್ಣಮೂರ್ತಿ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದರು. ಅಂತಿಮವಾಗಿ 50 ಸಾವಿರಕ್ಕೆ ಒಪ್ಪಿಕೊಳ್ಳಲಾಗಿತ್ತು.
ಲಂಚಕ್ಕೆ ಬೇಡಿಕೆಯಿಟ್ಟಿರುವ ಬಗ್ಗೆ ಅರ್ಜಿದಾರ ಜುಲ್ಫಿಕರ್ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.
ಮೊದಲೇ ರೂಪಿಸಿದ್ದ ಯೋಜನೆಯಂತೆ 15 ಸಾವಿರ ರೂ. ಮುಂಗಡ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ನಾರಾಯಣ್ ಹಾಗೂ ಕೃಷ್ಣಮೂರ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಲೋಕಾಯುಕ್ತ ಎಸ್.ಪಿ ಆಂಥೋನಿ ದಾಸ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ವೀರೇಂದ್ರ ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿತು.
ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…
ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…