ಗೌರಿಬಿದನೂರು : ಇ-ಖಾತೆ ಮಾಡಿಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನಿಂದ 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಇಲ್ಲಿನ ನಗರಸಭೆ ಕಂದಾಯ ಅಧಿಕಾರಿ ಹಾಗೂ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ನಗರಸಭೆಯ ಕಂದಾಯ ಅಧಿಕಾರಿ ನಾರಾಯಣ್ ಹಾಗೂ ಬಿಲ್ ಕಲೆಕ್ಟರ್ ಎಂದು ಹೇಳಿಕೊಂಡಿದ್ದ ಕೃಷ್ಣಮೂರ್ತಿ ಲೋಕಾಯುಕ್ತರ ಬಲೆಗೆ ಬಿದ್ದವರು.
ವೇದಲವೇಣಿ ಗ್ರಾಮ ನಗರಸಭೆ ವ್ಯಾಪ್ತಿಗೆ ಸೇರಿದ್ದು, ವೇದಲವೇಣಿ ಗ್ರಾಮ ವ್ಯಾಪ್ತಿಯಲ್ಲಿರುವ ತಮ್ಮ ತಾಯಿ ಹಾಗೂ ಸಹೋದರಿಯರ ಜಮೀನಿಗೆ ಇ-ಖಾತೆ ಮಾಡಿಕೊಂಡುವಂತೆ ನಗರದ ಹೊರವಲಯದ ಸಿರಗುಪ್ಪ ಸಕ್ಕರೆ ಕಾರ್ಖಾನೆ ಬಳಿಯ ವಾಸಿ ಜುಲ್ಫಿಕರ್ ಎಂಬುವರು ನಗರಸಭೆಗೆ ಮನವಿ ಸಲ್ಲಿಸಿದ್ದರು.
ಒಟ್ಟು 6 ಖಾತೆಗಳನ್ನು ಮಾಡಿಕೊಂಡುವಂತೆ ಅರ್ಜಿ ಸಲ್ಲಿಸಿದ್ದರು. 6 ಖಾತೆ ಮಾಡಿಕೊಡಲು ಪ್ರತಿ ಖಾತೆಗೆ ತಲಾ 10 ಸಾವಿರದಂತೆ 60 ಸಾವಿರ ರೂ. ಲಂಚ ನೀಡುವಂತೆ ನಗರಸಭೆ ಕಂದಾಯ ಅಧಿಕಾರಿ ನಾರಾಯಣ್ ಬೇಡಿಕೆ ಇಟ್ಟಿದ್ದರು. ತಾನು ಬಿಲ್ ಕಲೆಕ್ಟರ್ ಎಂದು ಹೇಳಿಕೊಳ್ಳುವ ವಾಟರ್ ಮನ್ ಕೃಷ್ಣಮೂರ್ತಿ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದರು. ಅಂತಿಮವಾಗಿ 50 ಸಾವಿರಕ್ಕೆ ಒಪ್ಪಿಕೊಳ್ಳಲಾಗಿತ್ತು.
ಲಂಚಕ್ಕೆ ಬೇಡಿಕೆಯಿಟ್ಟಿರುವ ಬಗ್ಗೆ ಅರ್ಜಿದಾರ ಜುಲ್ಫಿಕರ್ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.
ಮೊದಲೇ ರೂಪಿಸಿದ್ದ ಯೋಜನೆಯಂತೆ 15 ಸಾವಿರ ರೂ. ಮುಂಗಡ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ನಾರಾಯಣ್ ಹಾಗೂ ಕೃಷ್ಣಮೂರ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಲೋಕಾಯುಕ್ತ ಎಸ್.ಪಿ ಆಂಥೋನಿ ದಾಸ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ವೀರೇಂದ್ರ ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿತು.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…