ದೊಡ್ಡಬಳ್ಳಾಪುರ: ರಾತ್ರಿ ವೇಳೆ ದ್ವಿಚಕ್ರ ವಾಹನ ಸವಾರರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ, ಮೊಬೈಲ್ ಹಾಗೂ ಹಣ ದೋಚುತ್ತಿದ್ದ ಮೂವರು ಐನಾತಿ ಖದೀಮರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಯಲಹಂಕ ತಾಲೂಕಿನ ಚಿಕ್ಕಜಾಲದ ರಂಗಸ್ವಾಮಿ ಕ್ಯಾಂಪಿನ ನಿವಾಸಿ ಆಕಾಶ್(19), ಟೆಲಿಕಾಂ ಲೇಔಟ್ ನಿವಾಸಿ ಪ್ರವೀಣ್(18) ಹಾಗೂ ಜಾಲ ಹೋಬಳಿಯ ಮಾರನಾಯಕನಹಳ್ಳಿ ನಿವಾಸಿ ಹನುಮಂತ ಎಸ್.ಡಿ (22) ಬಂಧಿತ ಆರೋಪಿಗಳು.
ಏ.14 ರಂದು ರಾತ್ರಿ 11;30ರ ಸುಮಾರಿಗೆ ತಾಲೂಕಿನ ಆಲೂರು ದುದ್ದನಹಳ್ಳಿ ನಿವಾಸಿ ಅಮರ್ ಹಾಗೂ ಕೋಡಿಹಳ್ಳಿ ನಿವಾಸಿ ಅನಿಲ್ ಎಂಬುವರು ಬೈಕಿನಲ್ಲಿ ಸೊಣ್ಣಪ್ಪನಹಳ್ಳಿಗೆ ಮಾರ್ಗವಾಗಿ ಹೋಗುತ್ತಿದ್ದಾಗ ಮೂವರು ಆರೋಪಿಗಳು ವಾಹನ ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಬೆದರಿಸಿದ್ದಾರೆ.
ಆಗ ಬೈಕ್ ಸವಾರರಿಬ್ಬರು ತಮ್ಮ ಬಳಿಯಿದ್ದ ಮೊಬೈಲ್, ಹಣ ಕೊಡಲು ಹೋದಾಗ ಸುತ್ತಲಿನ ಗ್ರಾಮಗಳ ಜನರು ತಕ್ಷಣ ಆಗಮಿಸಿ, ಆರೋಪಿಗಳನ್ನು ಹಿಡಿದು ಗ್ರಾಮಾಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.
ಅರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ 4.20 ಲಕ್ಷ ರೂ. ಬೆಲೆ ಬಾಳುವ ವಿವಿಧ ಕಂಪನಿಗಳ 20 ಮೊಬೈಲ್ ಪೋನ್ ಹಾಗೂ ಬೈಕ್ ವಶಪಡಿಸಿಕೊಳ್ಳಲಾಗಿದೆ ಎಂದು ಗ್ರಾಮಾಂತರ ಪೊಲೀಸ್ ಠಾಣೆ ಸರ್ಕಲ್ ಇನ್ ಸ್ಪೆಕ್ಟರ್ ಸಾದಿಕ್ ಪಾಷಾ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಆರೋಪಿಗಳಿಂದ ವಶಪಡಿಸಿಕೊಂಡಿರುವ ಮೊಬೈಲ್ ಗಳನ್ನು ಪರಿಶೀಲಿಸಿ ವಾರಸುದಾರರಿಗೆ ಒಪ್ಪಿಸಲಾಗುವುದು ಎಂದು ಅವರು ಹೇಳಿದರು.
ಪ್ರಕರಣವನ್ನು ಗಂಭೀರವಾಗಿ ಪರಿಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಎಸ್ಪಿ ಪುರುಷೋತ್ತಮ್, 2ನೇ ಹೆಚ್ಚುವರಿ ಎಸ್ಪಿ ನಾಗರಾಜ್ ಕೆ.ಎಸ್., ಡಿವೈಎಸ್ಪಿ ಪಿ.ರವಿ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆ ಇನ್ ಸ್ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು.
ತನಿಖಾ ತಂಡದಲ್ಲಿ ಪಿಎಸ್ಐ ರವಿ ಟಿ.ಎನ್, ಸಿಬ್ಬಂದಿ ಅರ್ಜುನ್ ಲಮಾಣಿ, ಪ್ರವೀಣ್, ಸಚಿನ್ ಉಪ್ಪಾರ್, ಲಕ್ಷ್ಮೀಪತಿ ಅವರು ಆರೋಪಿಗಳಿಂದ ಹೆಚ್ಚಿನ ಮಾಲು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…