ರಾತ್ರಿ ವೇಳೆ ದ್ವಿಚಕ್ರ ವಾಹನ ಸವಾರರನ್ನು ಅಡ್ಡಗಟ್ಟಿ‌ ಮಾರಕಾಸ್ತ್ರಗಳಿಂದ ಬೆದರಿಕೆ: ಮೊಬೈಲ್ ಹಾಗೂ ಹಣ ದೋಚುತ್ತಿದ್ದ ಮೂವರು ಐನಾತಿ ಖದೀಮರನ್ನ ವಶಕ್ಕೆ ಪಡೆದ ಪೊಲೀಸರು

ದೊಡ್ಡಬಳ್ಳಾಪುರ: ರಾತ್ರಿ ವೇಳೆ ದ್ವಿಚಕ್ರ ವಾಹನ ಸವಾರರನ್ನು ಅಡ್ಡಗಟ್ಟಿ‌ ಮಾರಕಾಸ್ತ್ರಗಳಿಂದ ಬೆದರಿಸಿ, ಮೊಬೈಲ್ ಹಾಗೂ ಹಣ ದೋಚುತ್ತಿದ್ದ ಮೂವರು ಐನಾತಿ ಖದೀಮರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಯಲಹಂಕ ತಾಲೂಕಿನ ಚಿಕ್ಕಜಾಲ‌ದ ರಂಗಸ್ವಾಮಿ ಕ್ಯಾಂಪಿನ ನಿವಾಸಿ ಆಕಾಶ್(19), ಟೆಲಿಕಾಂ ಲೇಔಟ್ ನಿವಾಸಿ ಪ್ರವೀಣ್(18) ಹಾಗೂ ಜಾಲ ಹೋಬಳಿಯ ಮಾರನಾಯಕನಹಳ್ಳಿ ನಿವಾಸಿ ಹನುಮಂತ ಎಸ್.ಡಿ (22) ಬಂಧಿತ ಆರೋಪಿಗಳು.

ಏ.14 ರಂದು ರಾತ್ರಿ 11;30ರ ಸುಮಾರಿಗೆ ತಾಲೂಕಿನ ಆಲೂರು ದುದ್ದನಹಳ್ಳಿ ನಿವಾಸಿ ಅಮರ್ ಹಾಗೂ ಕೋಡಿಹಳ್ಳಿ ನಿವಾಸಿ ಅನಿಲ್‌ ಎಂಬುವರು ಬೈಕಿನಲ್ಲಿ ಸೊಣ್ಣಪ್ಪನಹಳ್ಳಿಗೆ ಮಾರ್ಗವಾಗಿ ಹೋಗುತ್ತಿದ್ದಾಗ ಮೂವರು ಆರೋಪಿಗಳು ವಾಹನ ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಬೆದರಿಸಿದ್ದಾರೆ.

ಆಗ ಬೈಕ್ ಸವಾರರಿಬ್ಬರು ತಮ್ಮ ಬಳಿಯಿದ್ದ ಮೊಬೈಲ್‌, ಹಣ ಕೊಡಲು ಹೋದಾಗ ಸುತ್ತಲಿನ ಗ್ರಾಮಗಳ ಜನರು ತಕ್ಷಣ ಆಗಮಿಸಿ, ಆರೋಪಿಗಳನ್ನು ಹಿಡಿದು ಗ್ರಾಮಾಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಅರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ 4.20 ಲಕ್ಷ ರೂ. ಬೆಲೆ ಬಾಳುವ ವಿವಿಧ ಕಂಪನಿಗಳ 20 ಮೊಬೈಲ್ ಪೋನ್ ಹಾಗೂ‌ ಬೈಕ್ ವಶಪಡಿಸಿಕೊಳ್ಳಲಾಗಿದೆ ಎಂದು ಗ್ರಾಮಾಂತರ ಪೊಲೀಸ್ ಠಾಣೆ ಸರ್ಕಲ್ ಇನ್ ಸ್ಪೆಕ್ಟರ್ ಸಾದಿಕ್ ಪಾಷಾ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಆರೋಪಿಗಳಿಂದ ವಶಪಡಿಸಿಕೊಂಡಿರುವ ಮೊಬೈಲ್ ಗಳನ್ನು ಪರಿಶೀಲಿಸಿ ವಾರಸುದಾರರಿಗೆ ಒಪ್ಪಿಸಲಾಗುವುದು ಎಂದು ಅವರು ಹೇಳಿದರು.

ಪ್ರಕರಣವನ್ನು ಗಂಭೀರವಾಗಿ ಪರಿಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಎಸ್ಪಿ ಪುರುಷೋತ್ತಮ್, 2ನೇ ಹೆಚ್ಚುವರಿ ಎಸ್ಪಿ ನಾಗರಾಜ್ ಕೆ.ಎಸ್., ಡಿವೈಎಸ್ಪಿ ಪಿ.ರವಿ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆ ಇನ್ ಸ್ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು.

ತನಿಖಾ ತಂಡದಲ್ಲಿ ಪಿಎಸ್ಐ ರವಿ ಟಿ.ಎನ್, ಸಿಬ್ಬಂದಿ ಅರ್ಜುನ್ ಲಮಾಣಿ, ಪ್ರವೀಣ್, ಸಚಿನ್ ಉಪ್ಪಾರ್, ಲಕ್ಷ್ಮೀಪತಿ ಅವರು ಆರೋಪಿಗಳಿಂದ ಹೆಚ್ಚಿನ ಮಾಲು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

Ramesh Babu

Journalist

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

6 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

7 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

19 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

22 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

23 hours ago