ರಾತ್ರಿ ವೇಳೆ ದ್ವಿಚಕ್ರ ವಾಹನ ಸವಾರರನ್ನು ಅಡ್ಡಗಟ್ಟಿ‌ ಮಾರಕಾಸ್ತ್ರಗಳಿಂದ ಬೆದರಿಕೆ: ಮೊಬೈಲ್ ಹಾಗೂ ಹಣ ದೋಚುತ್ತಿದ್ದ ಮೂವರು ಐನಾತಿ ಖದೀಮರನ್ನ ವಶಕ್ಕೆ ಪಡೆದ ಪೊಲೀಸರು

ದೊಡ್ಡಬಳ್ಳಾಪುರ: ರಾತ್ರಿ ವೇಳೆ ದ್ವಿಚಕ್ರ ವಾಹನ ಸವಾರರನ್ನು ಅಡ್ಡಗಟ್ಟಿ‌ ಮಾರಕಾಸ್ತ್ರಗಳಿಂದ ಬೆದರಿಸಿ, ಮೊಬೈಲ್ ಹಾಗೂ ಹಣ ದೋಚುತ್ತಿದ್ದ ಮೂವರು ಐನಾತಿ ಖದೀಮರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಯಲಹಂಕ ತಾಲೂಕಿನ ಚಿಕ್ಕಜಾಲ‌ದ ರಂಗಸ್ವಾಮಿ ಕ್ಯಾಂಪಿನ ನಿವಾಸಿ ಆಕಾಶ್(19), ಟೆಲಿಕಾಂ ಲೇಔಟ್ ನಿವಾಸಿ ಪ್ರವೀಣ್(18) ಹಾಗೂ ಜಾಲ ಹೋಬಳಿಯ ಮಾರನಾಯಕನಹಳ್ಳಿ ನಿವಾಸಿ ಹನುಮಂತ ಎಸ್.ಡಿ (22) ಬಂಧಿತ ಆರೋಪಿಗಳು.

ಏ.14 ರಂದು ರಾತ್ರಿ 11;30ರ ಸುಮಾರಿಗೆ ತಾಲೂಕಿನ ಆಲೂರು ದುದ್ದನಹಳ್ಳಿ ನಿವಾಸಿ ಅಮರ್ ಹಾಗೂ ಕೋಡಿಹಳ್ಳಿ ನಿವಾಸಿ ಅನಿಲ್‌ ಎಂಬುವರು ಬೈಕಿನಲ್ಲಿ ಸೊಣ್ಣಪ್ಪನಹಳ್ಳಿಗೆ ಮಾರ್ಗವಾಗಿ ಹೋಗುತ್ತಿದ್ದಾಗ ಮೂವರು ಆರೋಪಿಗಳು ವಾಹನ ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಬೆದರಿಸಿದ್ದಾರೆ.

ಆಗ ಬೈಕ್ ಸವಾರರಿಬ್ಬರು ತಮ್ಮ ಬಳಿಯಿದ್ದ ಮೊಬೈಲ್‌, ಹಣ ಕೊಡಲು ಹೋದಾಗ ಸುತ್ತಲಿನ ಗ್ರಾಮಗಳ ಜನರು ತಕ್ಷಣ ಆಗಮಿಸಿ, ಆರೋಪಿಗಳನ್ನು ಹಿಡಿದು ಗ್ರಾಮಾಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಅರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ 4.20 ಲಕ್ಷ ರೂ. ಬೆಲೆ ಬಾಳುವ ವಿವಿಧ ಕಂಪನಿಗಳ 20 ಮೊಬೈಲ್ ಪೋನ್ ಹಾಗೂ‌ ಬೈಕ್ ವಶಪಡಿಸಿಕೊಳ್ಳಲಾಗಿದೆ ಎಂದು ಗ್ರಾಮಾಂತರ ಪೊಲೀಸ್ ಠಾಣೆ ಸರ್ಕಲ್ ಇನ್ ಸ್ಪೆಕ್ಟರ್ ಸಾದಿಕ್ ಪಾಷಾ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಆರೋಪಿಗಳಿಂದ ವಶಪಡಿಸಿಕೊಂಡಿರುವ ಮೊಬೈಲ್ ಗಳನ್ನು ಪರಿಶೀಲಿಸಿ ವಾರಸುದಾರರಿಗೆ ಒಪ್ಪಿಸಲಾಗುವುದು ಎಂದು ಅವರು ಹೇಳಿದರು.

ಪ್ರಕರಣವನ್ನು ಗಂಭೀರವಾಗಿ ಪರಿಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಎಸ್ಪಿ ಪುರುಷೋತ್ತಮ್, 2ನೇ ಹೆಚ್ಚುವರಿ ಎಸ್ಪಿ ನಾಗರಾಜ್ ಕೆ.ಎಸ್., ಡಿವೈಎಸ್ಪಿ ಪಿ.ರವಿ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆ ಇನ್ ಸ್ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು.

ತನಿಖಾ ತಂಡದಲ್ಲಿ ಪಿಎಸ್ಐ ರವಿ ಟಿ.ಎನ್, ಸಿಬ್ಬಂದಿ ಅರ್ಜುನ್ ಲಮಾಣಿ, ಪ್ರವೀಣ್, ಸಚಿನ್ ಉಪ್ಪಾರ್, ಲಕ್ಷ್ಮೀಪತಿ ಅವರು ಆರೋಪಿಗಳಿಂದ ಹೆಚ್ಚಿನ ಮಾಲು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

22 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago