ದೊಡ್ಡಬಳ್ಳಾಪುರ: ರಾತ್ರಿ ವೇಳೆ ದ್ವಿಚಕ್ರ ವಾಹನ ಸವಾರರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ, ಮೊಬೈಲ್ ಹಾಗೂ ಹಣ ದೋಚುತ್ತಿದ್ದ ಮೂವರು ಐನಾತಿ ಖದೀಮರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಯಲಹಂಕ ತಾಲೂಕಿನ ಚಿಕ್ಕಜಾಲದ ರಂಗಸ್ವಾಮಿ ಕ್ಯಾಂಪಿನ ನಿವಾಸಿ ಆಕಾಶ್(19), ಟೆಲಿಕಾಂ ಲೇಔಟ್ ನಿವಾಸಿ ಪ್ರವೀಣ್(18) ಹಾಗೂ ಜಾಲ ಹೋಬಳಿಯ ಮಾರನಾಯಕನಹಳ್ಳಿ ನಿವಾಸಿ ಹನುಮಂತ ಎಸ್.ಡಿ (22) ಬಂಧಿತ ಆರೋಪಿಗಳು.
ಏ.14 ರಂದು ರಾತ್ರಿ 11;30ರ ಸುಮಾರಿಗೆ ತಾಲೂಕಿನ ಆಲೂರು ದುದ್ದನಹಳ್ಳಿ ನಿವಾಸಿ ಅಮರ್ ಹಾಗೂ ಕೋಡಿಹಳ್ಳಿ ನಿವಾಸಿ ಅನಿಲ್ ಎಂಬುವರು ಬೈಕಿನಲ್ಲಿ ಸೊಣ್ಣಪ್ಪನಹಳ್ಳಿಗೆ ಮಾರ್ಗವಾಗಿ ಹೋಗುತ್ತಿದ್ದಾಗ ಮೂವರು ಆರೋಪಿಗಳು ವಾಹನ ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಬೆದರಿಸಿದ್ದಾರೆ.
ಆಗ ಬೈಕ್ ಸವಾರರಿಬ್ಬರು ತಮ್ಮ ಬಳಿಯಿದ್ದ ಮೊಬೈಲ್, ಹಣ ಕೊಡಲು ಹೋದಾಗ ಸುತ್ತಲಿನ ಗ್ರಾಮಗಳ ಜನರು ತಕ್ಷಣ ಆಗಮಿಸಿ, ಆರೋಪಿಗಳನ್ನು ಹಿಡಿದು ಗ್ರಾಮಾಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.
ಅರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ 4.20 ಲಕ್ಷ ರೂ. ಬೆಲೆ ಬಾಳುವ ವಿವಿಧ ಕಂಪನಿಗಳ 20 ಮೊಬೈಲ್ ಪೋನ್ ಹಾಗೂ ಬೈಕ್ ವಶಪಡಿಸಿಕೊಳ್ಳಲಾಗಿದೆ ಎಂದು ಗ್ರಾಮಾಂತರ ಪೊಲೀಸ್ ಠಾಣೆ ಸರ್ಕಲ್ ಇನ್ ಸ್ಪೆಕ್ಟರ್ ಸಾದಿಕ್ ಪಾಷಾ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಆರೋಪಿಗಳಿಂದ ವಶಪಡಿಸಿಕೊಂಡಿರುವ ಮೊಬೈಲ್ ಗಳನ್ನು ಪರಿಶೀಲಿಸಿ ವಾರಸುದಾರರಿಗೆ ಒಪ್ಪಿಸಲಾಗುವುದು ಎಂದು ಅವರು ಹೇಳಿದರು.
ಪ್ರಕರಣವನ್ನು ಗಂಭೀರವಾಗಿ ಪರಿಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಎಸ್ಪಿ ಪುರುಷೋತ್ತಮ್, 2ನೇ ಹೆಚ್ಚುವರಿ ಎಸ್ಪಿ ನಾಗರಾಜ್ ಕೆ.ಎಸ್., ಡಿವೈಎಸ್ಪಿ ಪಿ.ರವಿ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆ ಇನ್ ಸ್ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು.
ತನಿಖಾ ತಂಡದಲ್ಲಿ ಪಿಎಸ್ಐ ರವಿ ಟಿ.ಎನ್, ಸಿಬ್ಬಂದಿ ಅರ್ಜುನ್ ಲಮಾಣಿ, ಪ್ರವೀಣ್, ಸಚಿನ್ ಉಪ್ಪಾರ್, ಲಕ್ಷ್ಮೀಪತಿ ಅವರು ಆರೋಪಿಗಳಿಂದ ಹೆಚ್ಚಿನ ಮಾಲು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…