ದೊಡ್ಡಬಳ್ಳಾಪುರ: ರಾತ್ರಿ ವೇಳೆ ದ್ವಿಚಕ್ರ ವಾಹನ ಸವಾರರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ, ಮೊಬೈಲ್ ಹಾಗೂ ಹಣ ದೋಚುತ್ತಿದ್ದ ಮೂವರು ಐನಾತಿ ಖದೀಮರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಯಲಹಂಕ ತಾಲೂಕಿನ ಚಿಕ್ಕಜಾಲದ ರಂಗಸ್ವಾಮಿ ಕ್ಯಾಂಪಿನ ನಿವಾಸಿ ಆಕಾಶ್(19), ಟೆಲಿಕಾಂ ಲೇಔಟ್ ನಿವಾಸಿ ಪ್ರವೀಣ್(18) ಹಾಗೂ ಜಾಲ ಹೋಬಳಿಯ ಮಾರನಾಯಕನಹಳ್ಳಿ ನಿವಾಸಿ ಹನುಮಂತ ಎಸ್.ಡಿ (22) ಬಂಧಿತ ಆರೋಪಿಗಳು.
ಏ.14 ರಂದು ರಾತ್ರಿ 11;30ರ ಸುಮಾರಿಗೆ ತಾಲೂಕಿನ ಆಲೂರು ದುದ್ದನಹಳ್ಳಿ ನಿವಾಸಿ ಅಮರ್ ಹಾಗೂ ಕೋಡಿಹಳ್ಳಿ ನಿವಾಸಿ ಅನಿಲ್ ಎಂಬುವರು ಬೈಕಿನಲ್ಲಿ ಸೊಣ್ಣಪ್ಪನಹಳ್ಳಿಗೆ ಮಾರ್ಗವಾಗಿ ಹೋಗುತ್ತಿದ್ದಾಗ ಮೂವರು ಆರೋಪಿಗಳು ವಾಹನ ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಬೆದರಿಸಿದ್ದಾರೆ.
ಆಗ ಬೈಕ್ ಸವಾರರಿಬ್ಬರು ತಮ್ಮ ಬಳಿಯಿದ್ದ ಮೊಬೈಲ್, ಹಣ ಕೊಡಲು ಹೋದಾಗ ಸುತ್ತಲಿನ ಗ್ರಾಮಗಳ ಜನರು ತಕ್ಷಣ ಆಗಮಿಸಿ, ಆರೋಪಿಗಳನ್ನು ಹಿಡಿದು ಗ್ರಾಮಾಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.
ಅರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ 4.20 ಲಕ್ಷ ರೂ. ಬೆಲೆ ಬಾಳುವ ವಿವಿಧ ಕಂಪನಿಗಳ 20 ಮೊಬೈಲ್ ಪೋನ್ ಹಾಗೂ ಬೈಕ್ ವಶಪಡಿಸಿಕೊಳ್ಳಲಾಗಿದೆ ಎಂದು ಗ್ರಾಮಾಂತರ ಪೊಲೀಸ್ ಠಾಣೆ ಸರ್ಕಲ್ ಇನ್ ಸ್ಪೆಕ್ಟರ್ ಸಾದಿಕ್ ಪಾಷಾ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಆರೋಪಿಗಳಿಂದ ವಶಪಡಿಸಿಕೊಂಡಿರುವ ಮೊಬೈಲ್ ಗಳನ್ನು ಪರಿಶೀಲಿಸಿ ವಾರಸುದಾರರಿಗೆ ಒಪ್ಪಿಸಲಾಗುವುದು ಎಂದು ಅವರು ಹೇಳಿದರು.
ಪ್ರಕರಣವನ್ನು ಗಂಭೀರವಾಗಿ ಪರಿಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಎಸ್ಪಿ ಪುರುಷೋತ್ತಮ್, 2ನೇ ಹೆಚ್ಚುವರಿ ಎಸ್ಪಿ ನಾಗರಾಜ್ ಕೆ.ಎಸ್., ಡಿವೈಎಸ್ಪಿ ಪಿ.ರವಿ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆ ಇನ್ ಸ್ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು.
ತನಿಖಾ ತಂಡದಲ್ಲಿ ಪಿಎಸ್ಐ ರವಿ ಟಿ.ಎನ್, ಸಿಬ್ಬಂದಿ ಅರ್ಜುನ್ ಲಮಾಣಿ, ಪ್ರವೀಣ್, ಸಚಿನ್ ಉಪ್ಪಾರ್, ಲಕ್ಷ್ಮೀಪತಿ ಅವರು ಆರೋಪಿಗಳಿಂದ ಹೆಚ್ಚಿನ ಮಾಲು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…
ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…