ದೊಡ್ಡಬಳ್ಳಾಪುರ: ರಾತ್ರಿ ವೇಳೆ ದ್ವಿಚಕ್ರ ವಾಹನ ಸವಾರರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ, ಮೊಬೈಲ್ ಹಾಗೂ ಹಣ ದೋಚುತ್ತಿದ್ದ ಮೂವರು ಐನಾತಿ ಖದೀಮರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಯಲಹಂಕ ತಾಲೂಕಿನ ಚಿಕ್ಕಜಾಲದ ರಂಗಸ್ವಾಮಿ ಕ್ಯಾಂಪಿನ ನಿವಾಸಿ ಆಕಾಶ್(19), ಟೆಲಿಕಾಂ ಲೇಔಟ್ ನಿವಾಸಿ ಪ್ರವೀಣ್(18) ಹಾಗೂ ಜಾಲ ಹೋಬಳಿಯ ಮಾರನಾಯಕನಹಳ್ಳಿ ನಿವಾಸಿ ಹನುಮಂತ ಎಸ್.ಡಿ (22) ಬಂಧಿತ ಆರೋಪಿಗಳು.
ಏ.14 ರಂದು ರಾತ್ರಿ 11;30ರ ಸುಮಾರಿಗೆ ತಾಲೂಕಿನ ಆಲೂರು ದುದ್ದನಹಳ್ಳಿ ನಿವಾಸಿ ಅಮರ್ ಹಾಗೂ ಕೋಡಿಹಳ್ಳಿ ನಿವಾಸಿ ಅನಿಲ್ ಎಂಬುವರು ಬೈಕಿನಲ್ಲಿ ಸೊಣ್ಣಪ್ಪನಹಳ್ಳಿಗೆ ಮಾರ್ಗವಾಗಿ ಹೋಗುತ್ತಿದ್ದಾಗ ಮೂವರು ಆರೋಪಿಗಳು ವಾಹನ ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಬೆದರಿಸಿದ್ದಾರೆ.
ಆಗ ಬೈಕ್ ಸವಾರರಿಬ್ಬರು ತಮ್ಮ ಬಳಿಯಿದ್ದ ಮೊಬೈಲ್, ಹಣ ಕೊಡಲು ಹೋದಾಗ ಸುತ್ತಲಿನ ಗ್ರಾಮಗಳ ಜನರು ತಕ್ಷಣ ಆಗಮಿಸಿ, ಆರೋಪಿಗಳನ್ನು ಹಿಡಿದು ಗ್ರಾಮಾಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.
ಅರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ 4.20 ಲಕ್ಷ ರೂ. ಬೆಲೆ ಬಾಳುವ ವಿವಿಧ ಕಂಪನಿಗಳ 20 ಮೊಬೈಲ್ ಪೋನ್ ಹಾಗೂ ಬೈಕ್ ವಶಪಡಿಸಿಕೊಳ್ಳಲಾಗಿದೆ ಎಂದು ಗ್ರಾಮಾಂತರ ಪೊಲೀಸ್ ಠಾಣೆ ಸರ್ಕಲ್ ಇನ್ ಸ್ಪೆಕ್ಟರ್ ಸಾದಿಕ್ ಪಾಷಾ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಆರೋಪಿಗಳಿಂದ ವಶಪಡಿಸಿಕೊಂಡಿರುವ ಮೊಬೈಲ್ ಗಳನ್ನು ಪರಿಶೀಲಿಸಿ ವಾರಸುದಾರರಿಗೆ ಒಪ್ಪಿಸಲಾಗುವುದು ಎಂದು ಅವರು ಹೇಳಿದರು.
ಪ್ರಕರಣವನ್ನು ಗಂಭೀರವಾಗಿ ಪರಿಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಎಸ್ಪಿ ಪುರುಷೋತ್ತಮ್, 2ನೇ ಹೆಚ್ಚುವರಿ ಎಸ್ಪಿ ನಾಗರಾಜ್ ಕೆ.ಎಸ್., ಡಿವೈಎಸ್ಪಿ ಪಿ.ರವಿ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆ ಇನ್ ಸ್ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು.
ತನಿಖಾ ತಂಡದಲ್ಲಿ ಪಿಎಸ್ಐ ರವಿ ಟಿ.ಎನ್, ಸಿಬ್ಬಂದಿ ಅರ್ಜುನ್ ಲಮಾಣಿ, ಪ್ರವೀಣ್, ಸಚಿನ್ ಉಪ್ಪಾರ್, ಲಕ್ಷ್ಮೀಪತಿ ಅವರು ಆರೋಪಿಗಳಿಂದ ಹೆಚ್ಚಿನ ಮಾಲು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…