ಬೆಂಗಳೂರು: 160 ಕೆಜಿ ತೂಕ ಹೊಂದಿದ್ದ 35 ವರ್ಷದ ವ್ಯಕ್ತಿಗೆ “ರೋಬೋಟ್-ನೆರವಿನ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ ನಡೆಸಿದ್ದು, ಬಳಿಕ ಬರೋಬ್ಬರಿ 48 ಕೆ.ಜಿ. ತೂಕ ಕಳೆದುಕೊಂಡಿದ್ದಾರೆ.
ಫೋರ್ಟಿಸ್ ಆಸ್ಪತ್ರೆಯ ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿ, ಬಾರಿಯಾಟ್ರಿಕ್ ಮತ್ತು ರೊಬೊಟಿಕ್ ಸರ್ಜರಿ ಹೆಚ್ಚುವರಿ ನಿರ್ದೇಶಕ ಡಾ. ಮನೀಶ್ ಜೋಶಿ ಅವರ ತಂಡವು ಈ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ.
ಈ ವೇಳೆ ಮಾತನಾಡಿದ ಡಾ. ಮನೀಶ್ ಜೋಶಿ, ಬೆಂಗಳೂರು ಮೂಲದ 35 ವರ್ಷದ ಸೂರಜ್ ಎಂಬ ವ್ಯಕ್ತಿ ಕಳೆದ ಐದು ವರ್ಷಗಳಿಂದ ಅತಿಯಾದ ಸ್ಥೂಲಕಾಯತೆ ಹೊಂದಿದ್ದು, ಇದರಿಂದ ಆತನಿಗೆ ಸ್ಲೀಪ್ ಅಪ್ನಿಯಾ(ನಿದ್ರೆಯಲ್ಲಿ ಉಸಿರುಗಟ್ಟುವಿಕೆ) ಸಮಸ್ಯೆಗೆ ಒಳಗಾಗಿದ್ದರು. ಕೋವಿಡ್ ಸಾಂಕ್ರಮಿಕದ ಬಳಿಕ ಇವರ ಅತಿಯಾದ ತೂಕದಿಂದ ನಡೆಯಲೂ ಸಾಧ್ಯವಾಗದೇ ಬಿಪ್ಯಾಪ್(BIPAP) ಯಂತ್ರದ ಮೇಲೆ ಅವಲಂಬಿತರಾಗಿದ್ದರು. ಈ ಯಂತ್ರವು ನಿದ್ರೆ ಸಂದರ್ಭದಲ್ಲಿ ಸರಾಗವಾಗಿ ಉಸಿರಾಡಲು ಅನುವು ಮಾಡಿಕೊಡುತ್ತದೆ.ಇದಷ್ಟೇ ಅಲ್ಲದೆ, ಇವರ ಅತಿಯಾದ ತೂಕವು ಇವರ ದೈನಂದಿನ ಕೆಲಸಕಾರ್ಯಗಳಿಗೂ ಅಡ್ಡಿಯಾಗಿ, ನಿರಂತರ ಆಯಾಸ, ಉಸಿರಾಟ ಮತ್ತು ನಡೆಯಲು ತೊಂದರೆ, ಅನಿಯಮಿತ ನಿದ್ರೆಯ ಸಮಸ್ಯೆಗೆ ಒಳಗಾಗಿದ್ದರು.
ಅಷ್ಟೆಅಲ್ಲದೆ, ಆಗಾಗ್ಗೇ ಆಸ್ಪತ್ರೆಗೆ ದಾಖಲಾಗುವ ಸ್ಥಿತಿಯೂ ನಿರ್ಮಾಣವಾಗಿತ್ತು. ಈವೇಳೆ ಇವರಿಗೆ ಬೊಜ್ಜು ಹೈಪೋವೆಂಟಿಲೇಷನ್ ಸಿಂಡ್ರೋಮ್ ಸಮಸ್ಯೆ ಇರುವುದು ತಿಳಿದು ಬಂತು. ಇವರು ತೂಕ ಇಳಿಸದೇ ಹೋದಲ್ಲಿ ಇವರ ಜೀವಕ್ಕೇ ಆಪತ್ತು ಎದುರಾಗುವ ಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಅವರಿಗೆ ರೋಬೋಟ್-ನೆರವಿನ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಇದರಿಂದ ಅವರ ಹೊಟ್ಟೆಯಲ್ಲಿನ ಬೊಜ್ಜನ್ನು ಹೊರತೆಗೆ, ಅವರ ಹೊಟ್ಟೆಯ ಗಾತ್ರವನ್ನು ಕಡಿಮೆ ಮಾಡಲಾಗುತ್ತದೆ.
ರೋಬೋಟ್-ನೆರವಿನ ತಂತ್ರಜ್ಞಾನ ಬಳಕೆಯಿಂದ ಈ ಶಸ್ತ್ರಚಿಕಿತ್ಸೆ ನಡೆಸಿದ್ದು, ಹೆಚ್ಚು ನಿಖರತೆ ನೀಡಿ, ವೇಗವಾಗಿ ಚೇತರಿಸಿಕೊಳ್ಳಲು ನೆರವಾಗುತ್ತದೆ. ಶಸ್ತ್ರಚಿಕಿತ್ಸೆಯ ಬಳಿಕ ಅವರು 48 ಕೆ.ಜಿ ತೂಕವನ್ನು ಕಳೆದುಕೊಂಡಿದ್ದು, ಸೂರಜ್ ಅವರು ಚೇತರಿಕೆಯ ಹಾದಿಯಲ್ಲಿದ್ದಾರೆ ಎಂದು ವಿವರಿಸಿದರು.
ಸಮಾಜದ ಭವಿಷ್ಯವನ್ನು ರೂಪಿಸುವಲ್ಲಿ ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಪಾತ್ರ ಅತೀವ ಮಹತ್ವದ್ದಾಗಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಈ ದಾರಿಯಲ್ಲಿ…
ದೊಡ್ಡಬಳ್ಳಾಪುರ: ನಾಡಿನ ಜನರ ನಾಡಿ ಮಿಡಿತವನ್ನು ಅರಿತು ಪ್ರಾದೇಶಿಕವಾಗಿ ಅಭಿವೃದ್ಧಿ ಹೊಂದಲು ಜೆಡಿಎಸ್ ಪಕ್ಷ ಸ್ಥಾಪನೆಯಾಗಿದೆ. ಮೇ.8ಕ್ಕೆ 25 ವರ್ಷಗಳನ್ನು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ…
ದೊಡ್ಡಬಳ್ಳಾಪುರದ ಜೆಡಿಎಸ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡುವ ಬಣ, ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿಯುವ ಕಾರ್ಯಕರ್ತರ ಬಣ ಎಂಬ ಎರಡು…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ…
ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…