Categories: ಆರೋಗ್ಯ

160 ಕೆಜಿ ತೂಕ ಹೊಂದಿದ್ದ ವ್ಯಕ್ತಿಗೆ ರೋಬೋಟ್ ನೆರವಿನ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ

ಬೆಂಗಳೂರು: 160 ಕೆಜಿ ತೂಕ ಹೊಂದಿದ್ದ 35 ವರ್ಷದ ವ್ಯಕ್ತಿಗೆ “ರೋಬೋಟ್-ನೆರವಿನ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ ನಡೆಸಿದ್ದು, ಬಳಿಕ ಬರೋಬ್ಬರಿ 48 ಕೆ.ಜಿ. ತೂಕ ಕಳೆದುಕೊಂಡಿದ್ದಾರೆ.

ಫೋರ್ಟಿಸ್‌ ಆಸ್ಪತ್ರೆಯ ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿ, ಬಾರಿಯಾಟ್ರಿಕ್ ಮತ್ತು ರೊಬೊಟಿಕ್ ಸರ್ಜರಿ ಹೆಚ್ಚುವರಿ ನಿರ್ದೇಶಕ ಡಾ. ಮನೀಶ್ ಜೋಶಿ ಅವರ ತಂಡವು ಈ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ.
ಈ ವೇಳೆ ಮಾತನಾಡಿದ ಡಾ. ಮನೀಶ್ ಜೋಶಿ, ಬೆಂಗಳೂರು ಮೂಲದ 35 ವರ್ಷದ ಸೂರಜ್‌ ಎಂಬ ವ್ಯಕ್ತಿ ಕಳೆದ ಐದು ವರ್ಷಗಳಿಂದ ಅತಿಯಾದ ಸ್ಥೂಲಕಾಯತೆ ಹೊಂದಿದ್ದು, ಇದರಿಂದ ಆತನಿಗೆ ಸ್ಲೀಪ್‌ ಅಪ್ನಿಯಾ(ನಿದ್ರೆಯಲ್ಲಿ ಉಸಿರುಗಟ್ಟುವಿಕೆ) ಸಮಸ್ಯೆಗೆ ಒಳಗಾಗಿದ್ದರು. ಕೋವಿಡ್‌ ಸಾಂಕ್ರಮಿಕದ ಬಳಿಕ ಇವರ ಅತಿಯಾದ ತೂಕದಿಂದ ನಡೆಯಲೂ ಸಾಧ್ಯವಾಗದೇ ಬಿಪ್ಯಾಪ್‌(BIPAP) ಯಂತ್ರದ ಮೇಲೆ ಅವಲಂಬಿತರಾಗಿದ್ದರು. ಈ ಯಂತ್ರವು ನಿದ್ರೆ ಸಂದರ್ಭದಲ್ಲಿ ಸರಾಗವಾಗಿ ಉಸಿರಾಡಲು ಅನುವು ಮಾಡಿಕೊಡುತ್ತದೆ.ಇದಷ್ಟೇ ಅಲ್ಲದೆ, ಇವರ ಅತಿಯಾದ ತೂಕವು ಇವರ ದೈನಂದಿನ ಕೆಲಸಕಾರ್ಯಗಳಿಗೂ ಅಡ್ಡಿಯಾಗಿ, ನಿರಂತರ ಆಯಾಸ, ಉಸಿರಾಟ ಮತ್ತು ನಡೆಯಲು ತೊಂದರೆ, ಅನಿಯಮಿತ ನಿದ್ರೆಯ ಸಮಸ್ಯೆಗೆ ಒಳಗಾಗಿದ್ದರು.

ಅಷ್ಟೆಅಲ್ಲದೆ, ಆಗಾಗ್ಗೇ ಆಸ್ಪತ್ರೆಗೆ ದಾಖಲಾಗುವ ಸ್ಥಿತಿಯೂ ನಿರ್ಮಾಣವಾಗಿತ್ತು. ಈವೇಳೆ ಇವರಿಗೆ ಬೊಜ್ಜು ಹೈಪೋವೆಂಟಿಲೇಷನ್ ಸಿಂಡ್ರೋಮ್‌ ಸಮಸ್ಯೆ ಇರುವುದು ತಿಳಿದು ಬಂತು. ಇವರು ತೂಕ ಇಳಿಸದೇ ಹೋದಲ್ಲಿ ಇವರ ಜೀವಕ್ಕೇ ಆಪತ್ತು ಎದುರಾಗುವ ಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಅವರಿಗೆ ರೋಬೋಟ್-ನೆರವಿನ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಇದರಿಂದ ಅವರ ಹೊಟ್ಟೆಯಲ್ಲಿನ ಬೊಜ್ಜನ್ನು ಹೊರತೆಗೆ, ಅವರ ಹೊಟ್ಟೆಯ ಗಾತ್ರವನ್ನು ಕಡಿಮೆ ಮಾಡಲಾಗುತ್ತದೆ.

ರೋಬೋಟ್-ನೆರವಿನ ತಂತ್ರಜ್ಞಾನ ಬಳಕೆಯಿಂದ ಈ ಶಸ್ತ್ರಚಿಕಿತ್ಸೆ ನಡೆಸಿದ್ದು, ಹೆಚ್ಚು ನಿಖರತೆ ನೀಡಿ, ವೇಗವಾಗಿ ಚೇತರಿಸಿಕೊಳ್ಳಲು ನೆರವಾಗುತ್ತದೆ. ಶಸ್ತ್ರಚಿಕಿತ್ಸೆಯ ಬಳಿಕ ಅವರು 48 ಕೆ.ಜಿ ತೂಕವನ್ನು ಕಳೆದುಕೊಂಡಿದ್ದು, ಸೂರಜ್‌ ಅವರು ಚೇತರಿಕೆಯ ಹಾದಿಯಲ್ಲಿದ್ದಾರೆ ಎಂದು ವಿವರಿಸಿದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

14 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

24 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

24 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 day ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 day ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

2 days ago