Categories: ಆರೋಗ್ಯ

160 ಕೆಜಿ ತೂಕ ಹೊಂದಿದ್ದ ವ್ಯಕ್ತಿಗೆ ರೋಬೋಟ್ ನೆರವಿನ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ

ಬೆಂಗಳೂರು: 160 ಕೆಜಿ ತೂಕ ಹೊಂದಿದ್ದ 35 ವರ್ಷದ ವ್ಯಕ್ತಿಗೆ “ರೋಬೋಟ್-ನೆರವಿನ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ ನಡೆಸಿದ್ದು, ಬಳಿಕ ಬರೋಬ್ಬರಿ 48 ಕೆ.ಜಿ. ತೂಕ ಕಳೆದುಕೊಂಡಿದ್ದಾರೆ.

ಫೋರ್ಟಿಸ್‌ ಆಸ್ಪತ್ರೆಯ ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿ, ಬಾರಿಯಾಟ್ರಿಕ್ ಮತ್ತು ರೊಬೊಟಿಕ್ ಸರ್ಜರಿ ಹೆಚ್ಚುವರಿ ನಿರ್ದೇಶಕ ಡಾ. ಮನೀಶ್ ಜೋಶಿ ಅವರ ತಂಡವು ಈ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ.
ಈ ವೇಳೆ ಮಾತನಾಡಿದ ಡಾ. ಮನೀಶ್ ಜೋಶಿ, ಬೆಂಗಳೂರು ಮೂಲದ 35 ವರ್ಷದ ಸೂರಜ್‌ ಎಂಬ ವ್ಯಕ್ತಿ ಕಳೆದ ಐದು ವರ್ಷಗಳಿಂದ ಅತಿಯಾದ ಸ್ಥೂಲಕಾಯತೆ ಹೊಂದಿದ್ದು, ಇದರಿಂದ ಆತನಿಗೆ ಸ್ಲೀಪ್‌ ಅಪ್ನಿಯಾ(ನಿದ್ರೆಯಲ್ಲಿ ಉಸಿರುಗಟ್ಟುವಿಕೆ) ಸಮಸ್ಯೆಗೆ ಒಳಗಾಗಿದ್ದರು. ಕೋವಿಡ್‌ ಸಾಂಕ್ರಮಿಕದ ಬಳಿಕ ಇವರ ಅತಿಯಾದ ತೂಕದಿಂದ ನಡೆಯಲೂ ಸಾಧ್ಯವಾಗದೇ ಬಿಪ್ಯಾಪ್‌(BIPAP) ಯಂತ್ರದ ಮೇಲೆ ಅವಲಂಬಿತರಾಗಿದ್ದರು. ಈ ಯಂತ್ರವು ನಿದ್ರೆ ಸಂದರ್ಭದಲ್ಲಿ ಸರಾಗವಾಗಿ ಉಸಿರಾಡಲು ಅನುವು ಮಾಡಿಕೊಡುತ್ತದೆ.ಇದಷ್ಟೇ ಅಲ್ಲದೆ, ಇವರ ಅತಿಯಾದ ತೂಕವು ಇವರ ದೈನಂದಿನ ಕೆಲಸಕಾರ್ಯಗಳಿಗೂ ಅಡ್ಡಿಯಾಗಿ, ನಿರಂತರ ಆಯಾಸ, ಉಸಿರಾಟ ಮತ್ತು ನಡೆಯಲು ತೊಂದರೆ, ಅನಿಯಮಿತ ನಿದ್ರೆಯ ಸಮಸ್ಯೆಗೆ ಒಳಗಾಗಿದ್ದರು.

ಅಷ್ಟೆಅಲ್ಲದೆ, ಆಗಾಗ್ಗೇ ಆಸ್ಪತ್ರೆಗೆ ದಾಖಲಾಗುವ ಸ್ಥಿತಿಯೂ ನಿರ್ಮಾಣವಾಗಿತ್ತು. ಈವೇಳೆ ಇವರಿಗೆ ಬೊಜ್ಜು ಹೈಪೋವೆಂಟಿಲೇಷನ್ ಸಿಂಡ್ರೋಮ್‌ ಸಮಸ್ಯೆ ಇರುವುದು ತಿಳಿದು ಬಂತು. ಇವರು ತೂಕ ಇಳಿಸದೇ ಹೋದಲ್ಲಿ ಇವರ ಜೀವಕ್ಕೇ ಆಪತ್ತು ಎದುರಾಗುವ ಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಅವರಿಗೆ ರೋಬೋಟ್-ನೆರವಿನ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಇದರಿಂದ ಅವರ ಹೊಟ್ಟೆಯಲ್ಲಿನ ಬೊಜ್ಜನ್ನು ಹೊರತೆಗೆ, ಅವರ ಹೊಟ್ಟೆಯ ಗಾತ್ರವನ್ನು ಕಡಿಮೆ ಮಾಡಲಾಗುತ್ತದೆ.

ರೋಬೋಟ್-ನೆರವಿನ ತಂತ್ರಜ್ಞಾನ ಬಳಕೆಯಿಂದ ಈ ಶಸ್ತ್ರಚಿಕಿತ್ಸೆ ನಡೆಸಿದ್ದು, ಹೆಚ್ಚು ನಿಖರತೆ ನೀಡಿ, ವೇಗವಾಗಿ ಚೇತರಿಸಿಕೊಳ್ಳಲು ನೆರವಾಗುತ್ತದೆ. ಶಸ್ತ್ರಚಿಕಿತ್ಸೆಯ ಬಳಿಕ ಅವರು 48 ಕೆ.ಜಿ ತೂಕವನ್ನು ಕಳೆದುಕೊಂಡಿದ್ದು, ಸೂರಜ್‌ ಅವರು ಚೇತರಿಕೆಯ ಹಾದಿಯಲ್ಲಿದ್ದಾರೆ ಎಂದು ವಿವರಿಸಿದರು.

Ramesh Babu

Journalist

Recent Posts

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

4 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

13 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

23 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 day ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago