Categories: ಆರೋಗ್ಯ

160 ಕೆಜಿ ತೂಕ ಹೊಂದಿದ್ದ ವ್ಯಕ್ತಿಗೆ ರೋಬೋಟ್ ನೆರವಿನ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ

ಬೆಂಗಳೂರು: 160 ಕೆಜಿ ತೂಕ ಹೊಂದಿದ್ದ 35 ವರ್ಷದ ವ್ಯಕ್ತಿಗೆ “ರೋಬೋಟ್-ನೆರವಿನ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ ನಡೆಸಿದ್ದು, ಬಳಿಕ ಬರೋಬ್ಬರಿ 48 ಕೆ.ಜಿ. ತೂಕ ಕಳೆದುಕೊಂಡಿದ್ದಾರೆ.

ಫೋರ್ಟಿಸ್‌ ಆಸ್ಪತ್ರೆಯ ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿ, ಬಾರಿಯಾಟ್ರಿಕ್ ಮತ್ತು ರೊಬೊಟಿಕ್ ಸರ್ಜರಿ ಹೆಚ್ಚುವರಿ ನಿರ್ದೇಶಕ ಡಾ. ಮನೀಶ್ ಜೋಶಿ ಅವರ ತಂಡವು ಈ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ.
ಈ ವೇಳೆ ಮಾತನಾಡಿದ ಡಾ. ಮನೀಶ್ ಜೋಶಿ, ಬೆಂಗಳೂರು ಮೂಲದ 35 ವರ್ಷದ ಸೂರಜ್‌ ಎಂಬ ವ್ಯಕ್ತಿ ಕಳೆದ ಐದು ವರ್ಷಗಳಿಂದ ಅತಿಯಾದ ಸ್ಥೂಲಕಾಯತೆ ಹೊಂದಿದ್ದು, ಇದರಿಂದ ಆತನಿಗೆ ಸ್ಲೀಪ್‌ ಅಪ್ನಿಯಾ(ನಿದ್ರೆಯಲ್ಲಿ ಉಸಿರುಗಟ್ಟುವಿಕೆ) ಸಮಸ್ಯೆಗೆ ಒಳಗಾಗಿದ್ದರು. ಕೋವಿಡ್‌ ಸಾಂಕ್ರಮಿಕದ ಬಳಿಕ ಇವರ ಅತಿಯಾದ ತೂಕದಿಂದ ನಡೆಯಲೂ ಸಾಧ್ಯವಾಗದೇ ಬಿಪ್ಯಾಪ್‌(BIPAP) ಯಂತ್ರದ ಮೇಲೆ ಅವಲಂಬಿತರಾಗಿದ್ದರು. ಈ ಯಂತ್ರವು ನಿದ್ರೆ ಸಂದರ್ಭದಲ್ಲಿ ಸರಾಗವಾಗಿ ಉಸಿರಾಡಲು ಅನುವು ಮಾಡಿಕೊಡುತ್ತದೆ.ಇದಷ್ಟೇ ಅಲ್ಲದೆ, ಇವರ ಅತಿಯಾದ ತೂಕವು ಇವರ ದೈನಂದಿನ ಕೆಲಸಕಾರ್ಯಗಳಿಗೂ ಅಡ್ಡಿಯಾಗಿ, ನಿರಂತರ ಆಯಾಸ, ಉಸಿರಾಟ ಮತ್ತು ನಡೆಯಲು ತೊಂದರೆ, ಅನಿಯಮಿತ ನಿದ್ರೆಯ ಸಮಸ್ಯೆಗೆ ಒಳಗಾಗಿದ್ದರು.

ಅಷ್ಟೆಅಲ್ಲದೆ, ಆಗಾಗ್ಗೇ ಆಸ್ಪತ್ರೆಗೆ ದಾಖಲಾಗುವ ಸ್ಥಿತಿಯೂ ನಿರ್ಮಾಣವಾಗಿತ್ತು. ಈವೇಳೆ ಇವರಿಗೆ ಬೊಜ್ಜು ಹೈಪೋವೆಂಟಿಲೇಷನ್ ಸಿಂಡ್ರೋಮ್‌ ಸಮಸ್ಯೆ ಇರುವುದು ತಿಳಿದು ಬಂತು. ಇವರು ತೂಕ ಇಳಿಸದೇ ಹೋದಲ್ಲಿ ಇವರ ಜೀವಕ್ಕೇ ಆಪತ್ತು ಎದುರಾಗುವ ಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಅವರಿಗೆ ರೋಬೋಟ್-ನೆರವಿನ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಇದರಿಂದ ಅವರ ಹೊಟ್ಟೆಯಲ್ಲಿನ ಬೊಜ್ಜನ್ನು ಹೊರತೆಗೆ, ಅವರ ಹೊಟ್ಟೆಯ ಗಾತ್ರವನ್ನು ಕಡಿಮೆ ಮಾಡಲಾಗುತ್ತದೆ.

ರೋಬೋಟ್-ನೆರವಿನ ತಂತ್ರಜ್ಞಾನ ಬಳಕೆಯಿಂದ ಈ ಶಸ್ತ್ರಚಿಕಿತ್ಸೆ ನಡೆಸಿದ್ದು, ಹೆಚ್ಚು ನಿಖರತೆ ನೀಡಿ, ವೇಗವಾಗಿ ಚೇತರಿಸಿಕೊಳ್ಳಲು ನೆರವಾಗುತ್ತದೆ. ಶಸ್ತ್ರಚಿಕಿತ್ಸೆಯ ಬಳಿಕ ಅವರು 48 ಕೆ.ಜಿ ತೂಕವನ್ನು ಕಳೆದುಕೊಂಡಿದ್ದು, ಸೂರಜ್‌ ಅವರು ಚೇತರಿಕೆಯ ಹಾದಿಯಲ್ಲಿದ್ದಾರೆ ಎಂದು ವಿವರಿಸಿದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

4 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

4 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

7 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

8 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

13 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

16 hours ago