Categories: ಆರೋಗ್ಯ

160 ಕೆಜಿ ತೂಕ ಹೊಂದಿದ್ದ ವ್ಯಕ್ತಿಗೆ ರೋಬೋಟ್ ನೆರವಿನ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ

ಬೆಂಗಳೂರು: 160 ಕೆಜಿ ತೂಕ ಹೊಂದಿದ್ದ 35 ವರ್ಷದ ವ್ಯಕ್ತಿಗೆ “ರೋಬೋಟ್-ನೆರವಿನ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ ನಡೆಸಿದ್ದು, ಬಳಿಕ ಬರೋಬ್ಬರಿ 48 ಕೆ.ಜಿ. ತೂಕ ಕಳೆದುಕೊಂಡಿದ್ದಾರೆ.

ಫೋರ್ಟಿಸ್‌ ಆಸ್ಪತ್ರೆಯ ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿ, ಬಾರಿಯಾಟ್ರಿಕ್ ಮತ್ತು ರೊಬೊಟಿಕ್ ಸರ್ಜರಿ ಹೆಚ್ಚುವರಿ ನಿರ್ದೇಶಕ ಡಾ. ಮನೀಶ್ ಜೋಶಿ ಅವರ ತಂಡವು ಈ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ.
ಈ ವೇಳೆ ಮಾತನಾಡಿದ ಡಾ. ಮನೀಶ್ ಜೋಶಿ, ಬೆಂಗಳೂರು ಮೂಲದ 35 ವರ್ಷದ ಸೂರಜ್‌ ಎಂಬ ವ್ಯಕ್ತಿ ಕಳೆದ ಐದು ವರ್ಷಗಳಿಂದ ಅತಿಯಾದ ಸ್ಥೂಲಕಾಯತೆ ಹೊಂದಿದ್ದು, ಇದರಿಂದ ಆತನಿಗೆ ಸ್ಲೀಪ್‌ ಅಪ್ನಿಯಾ(ನಿದ್ರೆಯಲ್ಲಿ ಉಸಿರುಗಟ್ಟುವಿಕೆ) ಸಮಸ್ಯೆಗೆ ಒಳಗಾಗಿದ್ದರು. ಕೋವಿಡ್‌ ಸಾಂಕ್ರಮಿಕದ ಬಳಿಕ ಇವರ ಅತಿಯಾದ ತೂಕದಿಂದ ನಡೆಯಲೂ ಸಾಧ್ಯವಾಗದೇ ಬಿಪ್ಯಾಪ್‌(BIPAP) ಯಂತ್ರದ ಮೇಲೆ ಅವಲಂಬಿತರಾಗಿದ್ದರು. ಈ ಯಂತ್ರವು ನಿದ್ರೆ ಸಂದರ್ಭದಲ್ಲಿ ಸರಾಗವಾಗಿ ಉಸಿರಾಡಲು ಅನುವು ಮಾಡಿಕೊಡುತ್ತದೆ.ಇದಷ್ಟೇ ಅಲ್ಲದೆ, ಇವರ ಅತಿಯಾದ ತೂಕವು ಇವರ ದೈನಂದಿನ ಕೆಲಸಕಾರ್ಯಗಳಿಗೂ ಅಡ್ಡಿಯಾಗಿ, ನಿರಂತರ ಆಯಾಸ, ಉಸಿರಾಟ ಮತ್ತು ನಡೆಯಲು ತೊಂದರೆ, ಅನಿಯಮಿತ ನಿದ್ರೆಯ ಸಮಸ್ಯೆಗೆ ಒಳಗಾಗಿದ್ದರು.

ಅಷ್ಟೆಅಲ್ಲದೆ, ಆಗಾಗ್ಗೇ ಆಸ್ಪತ್ರೆಗೆ ದಾಖಲಾಗುವ ಸ್ಥಿತಿಯೂ ನಿರ್ಮಾಣವಾಗಿತ್ತು. ಈವೇಳೆ ಇವರಿಗೆ ಬೊಜ್ಜು ಹೈಪೋವೆಂಟಿಲೇಷನ್ ಸಿಂಡ್ರೋಮ್‌ ಸಮಸ್ಯೆ ಇರುವುದು ತಿಳಿದು ಬಂತು. ಇವರು ತೂಕ ಇಳಿಸದೇ ಹೋದಲ್ಲಿ ಇವರ ಜೀವಕ್ಕೇ ಆಪತ್ತು ಎದುರಾಗುವ ಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಅವರಿಗೆ ರೋಬೋಟ್-ನೆರವಿನ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಇದರಿಂದ ಅವರ ಹೊಟ್ಟೆಯಲ್ಲಿನ ಬೊಜ್ಜನ್ನು ಹೊರತೆಗೆ, ಅವರ ಹೊಟ್ಟೆಯ ಗಾತ್ರವನ್ನು ಕಡಿಮೆ ಮಾಡಲಾಗುತ್ತದೆ.

ರೋಬೋಟ್-ನೆರವಿನ ತಂತ್ರಜ್ಞಾನ ಬಳಕೆಯಿಂದ ಈ ಶಸ್ತ್ರಚಿಕಿತ್ಸೆ ನಡೆಸಿದ್ದು, ಹೆಚ್ಚು ನಿಖರತೆ ನೀಡಿ, ವೇಗವಾಗಿ ಚೇತರಿಸಿಕೊಳ್ಳಲು ನೆರವಾಗುತ್ತದೆ. ಶಸ್ತ್ರಚಿಕಿತ್ಸೆಯ ಬಳಿಕ ಅವರು 48 ಕೆ.ಜಿ ತೂಕವನ್ನು ಕಳೆದುಕೊಂಡಿದ್ದು, ಸೂರಜ್‌ ಅವರು ಚೇತರಿಕೆಯ ಹಾದಿಯಲ್ಲಿದ್ದಾರೆ ಎಂದು ವಿವರಿಸಿದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

12 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

24 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

1 day ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago