ರಾಜ್ಯದಲ್ಲಿ ಖಾಲಿ ಇರುವ 1600 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದ ಇಂದಿನ ಕಾರ್ಯಕಲಾಪಗಳಲ್ಲಿ ಭಾಗವಹಿಸಿ. ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಹಿಂದಿನ ಸರ್ಕಾರದಲ್ಲಿ 545 ಪಿ.ಎಸ್.ಐ ನೇಮಕಾತಿ ವಿಚಾರದಲ್ಲಿ ಗೊಂದಲ ಉಂಟಾಗಿ ನೇಮಕಾತಿ ಪ್ರಕ್ರಿಯೆ ಸ್ಥಗಿತವಾಗಿತ್ತು. ಸದ್ಯ ಸರ್ಕಾರ 947 ಪಿ.ಎಸ್.ಐ ಹುದ್ದೆಗಳನ್ನು ಭರ್ತಿ ಮಾಡಿದೆ. ಆಯ್ಕೆಗೊಂಡ ಅಭ್ಯರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ ಎಂದರು.
ತರಬೇತಿ ಪೂರ್ಣಗೊಂಡ ನಂತರ ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ 42 ಪಿ.ಎಸ್.ಐ ಹುದ್ದೆಗಳ ಪೈಕಿ 32 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುವುದು. ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 33 ಪೊಲೀಸ್ ಠಾಣೆಗಳಿದ್ದು, 1549 ಹುದ್ದೆಗಳಲ್ಲಿ 1394 ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 155 ಹುದ್ದೆಗಳು
ಖಾಲಿಯಿವೆ. ಪೊಲೀಸ್ ಠಾಣೆಗಳ ದಿನನಿತ್ಯದ ಕರ್ತವ್ಯಕ್ಕೆ ತೊಂದರೆಯಾಗದಂತೆ 103 ಗೃಹ ರಕ್ಷಕ ಸಿಬ್ಬಂದಿ ನೇಮಿಸಿಕೊಂಡು ಕರ್ತವ್ಯ ಭಾರವನ್ನು ಸರಿದೂಗಿಸಲಾಗಿದೆ ಎಂದು ಹೇಳಿದ್ದಾರೆ…
ಮುಂಬರುವ ದಿನಗಳಲ್ಲಿ ಮಾನದಂಡಗಳನ್ನು ಆಧರಿಸಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಪೊಲೀಸ್ ಕಮಿಷನರೇಟ್ ಸ್ಥಾಪಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಕಾನೂನು ಸುವ್ಯವಸ್ಥೆ ಹದಗೆಡದಂತೆ ಕಾಪಾಡಲು ಸ್ಪೆಷಲ್ ಆಕ್ಷನ್ ಪೋರ್ಸ್ ಶಿವಮೊಗ್ಗದಲ್ಲಿ ನಿಯೋಜಿಸಲಾಗಿದೆ ಎಂದು ಉತ್ತರಿಸಿದರು…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…