ರಾಜ್ಯದಲ್ಲಿ ಖಾಲಿ ಇರುವ 1600 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದ ಇಂದಿನ ಕಾರ್ಯಕಲಾಪಗಳಲ್ಲಿ ಭಾಗವಹಿಸಿ. ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಹಿಂದಿನ ಸರ್ಕಾರದಲ್ಲಿ 545 ಪಿ.ಎಸ್.ಐ ನೇಮಕಾತಿ ವಿಚಾರದಲ್ಲಿ ಗೊಂದಲ ಉಂಟಾಗಿ ನೇಮಕಾತಿ ಪ್ರಕ್ರಿಯೆ ಸ್ಥಗಿತವಾಗಿತ್ತು. ಸದ್ಯ ಸರ್ಕಾರ 947 ಪಿ.ಎಸ್.ಐ ಹುದ್ದೆಗಳನ್ನು ಭರ್ತಿ ಮಾಡಿದೆ. ಆಯ್ಕೆಗೊಂಡ ಅಭ್ಯರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ ಎಂದರು.
ತರಬೇತಿ ಪೂರ್ಣಗೊಂಡ ನಂತರ ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ 42 ಪಿ.ಎಸ್.ಐ ಹುದ್ದೆಗಳ ಪೈಕಿ 32 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುವುದು. ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 33 ಪೊಲೀಸ್ ಠಾಣೆಗಳಿದ್ದು, 1549 ಹುದ್ದೆಗಳಲ್ಲಿ 1394 ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 155 ಹುದ್ದೆಗಳು
ಖಾಲಿಯಿವೆ. ಪೊಲೀಸ್ ಠಾಣೆಗಳ ದಿನನಿತ್ಯದ ಕರ್ತವ್ಯಕ್ಕೆ ತೊಂದರೆಯಾಗದಂತೆ 103 ಗೃಹ ರಕ್ಷಕ ಸಿಬ್ಬಂದಿ ನೇಮಿಸಿಕೊಂಡು ಕರ್ತವ್ಯ ಭಾರವನ್ನು ಸರಿದೂಗಿಸಲಾಗಿದೆ ಎಂದು ಹೇಳಿದ್ದಾರೆ…
ಮುಂಬರುವ ದಿನಗಳಲ್ಲಿ ಮಾನದಂಡಗಳನ್ನು ಆಧರಿಸಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಪೊಲೀಸ್ ಕಮಿಷನರೇಟ್ ಸ್ಥಾಪಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಕಾನೂನು ಸುವ್ಯವಸ್ಥೆ ಹದಗೆಡದಂತೆ ಕಾಪಾಡಲು ಸ್ಪೆಷಲ್ ಆಕ್ಷನ್ ಪೋರ್ಸ್ ಶಿವಮೊಗ್ಗದಲ್ಲಿ ನಿಯೋಜಿಸಲಾಗಿದೆ ಎಂದು ಉತ್ತರಿಸಿದರು…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…