ಒಂದು ಕಡೆ ಬಿಸಿಲು ಇನ್ನೊಂದು ಕಡೆ ಮಳೆಯಾಗದೆ ರೈತರು ಕಂಗಾಲಾಗಿರುವ ಸಂದರ್ಭದಲ್ಲಿ ಮೆದೆಗೆ ಬೆಂಕಿ ತಗುಲಿದ ಪರಿಣಾಮ 2 ಲೋಡ್ನಷ್ಟು ರಾಗಿ ಹುಲ್ಲಿನ ಬಣವೆ ಸುಟ್ಟು ಭಸ್ಮವಾಗಿರುವ ಘಟನೆ ತೂಬಗೆರೆ ಹೋಬಳಿಯ ಕೊಂಡಸಂದ್ರ ಗ್ರಾಮದಲ್ಲಿ ಸಂಭವಿಸಿದೆ.
ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿ ಕೊಂಡಸಂದ್ರ ಗ್ರಾಮದ ರಾಮಚಂದ್ರ ಎನ್ನುವವರು ರಾಗಿ ಹುಲ್ಲನ್ನು ಬಣವೆ ಮಾಡಿದ್ದು, ಶನಿವಾರ 11 ಗಂಟೆ ಸುಮಾರಿಗೆ ಬೆಂಕಿ ತಗಲಿದೆ ಎನ್ನಲಾಗಿದೆ, ಬೆಂಕಿಯನ್ನು ನಂದಿಸಲು ಸ್ಥಳೀಯರು ಹರಸಾಹಸ ಪಟ್ಟರು ಅಸಾಧ್ಯವಾದ ಕಾರಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ, ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಬಣವೆ ಸಂಪೂರ್ಣ ಸುಟ್ಟು ಬಸ್ಮವಾಗಿದೆ.
ಘಟನೆಯಲ್ಲಿ ಸುಮಾರು 1 ಲಕ್ಷ ಮೌಲ್ಯದ ರಾಗಿ ಹುಲ್ಲು ಬೆಂಕಿಗಾಹುತಿಯಾಗಿದ್ದು, ರೈತ ರಾಮಚಂದ್ರಪ್ಪ ಸಾಕಿರುವ ಹಸುಗಳಿಗೆ ಹುಲ್ಲನ್ನು ಖರೀದಿ ಮಾಡಬೇಕಾದ ಅನಿವಾರ್ಯತೆ ಎದುರಾಗಿದ್ದು, ಈ ಘಟನೆಗೆ ಕಾರಣ ತಿಳಿದುಬಂದಿಲ್ಲ,