2023-24ನೇ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟಗೊಂಡಿದ್ದು, SSLC ಪರೀಕ್ಷೆಯಲ್ಲಿ ತಾಲ್ಲೂಕಿನ ಕಂಟನಕುಂಟೆಯ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ಪ್ರತಿಶತ (ಶೇ.100 ) ಫಲಿತಾಂಶ ಪಡೆದು ಸಾಧನೆ ಮಾಡಿದೆ.
ಗ್ರಾಮೀಣ ಭಾಗದ ಶಾಲೆಯ ವಿದ್ಯಾರ್ಥಿಗಳಾದ ಗಾನಶ್ರೀ ಕೆ.ಎಸ್ 625ಕ್ಕೆ 607 ಅಂಕ(ಶೇ 97.01), ಸಂಜನ ಎಂ 602 ಅಂಕಗಳು(ಶೇ 96.32), ದಿವ್ಯಶ್ರಿ ಎ.ಎಸ್ 596 ಅಂಕ(ಶೇ 95.36) ಚಿನ್ಮಯಿ ಜಿ 596 ಅಂಕ(ಶೇ 95.36), ಯಶೋಧ ಎಂ ಹೆಚ್ 584 ಅಂಕಗಳನ್ನು (ಶೇ 93.44) ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಈ ಶಾಲೆಯಿಂದ ಒಟ್ಟು 30 ಮಂದಿ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ( A+) 9 ವಿಧ್ಯಾರ್ಥಿಗಳು, ಉನ್ನತ ಶ್ರೇಣಿಯಲ್ಲಿ( A) 21 ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಸಾಧಕ ವಿಧ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿಯ ಸಂಸ್ಥಾಪಕ ಕಾರ್ಯದರ್ಶಿಗಳಾದ ಕೆ.ಜಿ ಶ್ರೀನಿವಾಸಮೂರ್ತಿ, ಅಧ್ಯಕ್ಷರಾದ ಉಷಾ ಶ್ರೀನಿವಾಸಮೂರ್ತಿ, ಮುಖ್ಯೋಪಾಧ್ಯಾಯರಾದ ಶೋಭಾವತಿ ಎಂ ಹಾಗು ಶಾಲೆಯ ಸಹ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಗ್ರಾಮೀಣ ಭಾಗದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಕಳೆದ ಸಾಲಿನಲ್ಲೂ ಪ್ರತಿಶತ ಫಲಿತಾಂಶ ದಾಖಲಿಸಿದ್ದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…